Homeಮುಖಪುಟಉದ್ಯಮಿಗಳ ಲಾಬಿಗೆ ಸರ್ಕಾರ ಮಣಿದಿದೆ: ಮಣಿವಣ್ಣನ್ ವರ್ಗಾವಣೆಗೆ ತೀವ್ರ ವಿರೋಧ

ಉದ್ಯಮಿಗಳ ಲಾಬಿಗೆ ಸರ್ಕಾರ ಮಣಿದಿದೆ: ಮಣಿವಣ್ಣನ್ ವರ್ಗಾವಣೆಗೆ ತೀವ್ರ ವಿರೋಧ

- Advertisement -
- Advertisement -

ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್. ಪಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾರ್ಮಿಕ ಇಲಾಖೆಯಿಂದ ಮಣಿವಣ್ಣನ್ ಎತ್ತಂಗಡಿ ಮಾಡಿರುವುದರ ಹಿಂದೆ ದೊಡ್ಡ ಲಾಬಿ ಅಡಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ, ಲಾಕ್‌ಡೌನ್ ಸಂದರ್ಭದ ಸಂಬಳ ನೀಡುವಂತೆ ಮಣಿವಣ್ಣನ್‌ರವರಿ ಹಲವಾರು ಕೈಗಾರಿಕೋದ್ಯಮಿಗಳಿಗೆ ನೋಟಿಸ್ ನೀಡಿದ್ದರು. ಹೀಗಾಗಿ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಎರಡು ತಿಂಗಳಿಂದ ಸಂಬಳ ನೀಡಿಲ್ಲ, ಕುಟುಂಬ ನಿರ್ವಹಣೆಗೆ ತೊಂದರೆ ಆಗಿದೆ ಎಂದು 732 ಕಾರ್ಮಿಕರಿಂದ ಮಣಿವಣ್ಣನ್ ಗೆ ದೂರು ನೀಡಲಾಗಿತ್ತು ಎನ್ನಲಾಗುತ್ತಿದೆ. ಹಾಗಾಗಿ ದೂರಿನ ಹಿನ್ನೆಲೆಯಲ್ಲಿ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರಿಗೆ ನೋಟಿಸ್ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಮಣಿವಣ್ಣನ್ ಸೂಚನೆ ನೀಡಿದ್ದರು. ಹಾಗಾಗಿ ಕೈಗಾರಿಕೋದ್ಯಮಿಗಳು ಇವರ ವರ್ಗಾವಣೆಗೆ ಒತ್ತಡ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ತೆರವುಗೊಳಿಸುತ್ತಿರುವಾಗ ಕಾರ್ಮಿಕರೊಂದಿಗೆ ಮಾತನಾಡಿ ನಾವು ಸರಿಪಡಿಸುತ್ತೇವೆ. ನಮಗೆ ಮಣಿವಣ್ಣನ್‌ನವರಿಂದ ತೊಂದರೆಯಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳ ಸಂಘಟನೆ ಪ್ರಮುಖರು ಸಿಎಂಗೆ ದೂರು ನೀಡಿದ್ದು, ಅನಿವಾರ್ಯವಾಗಿ ಕೈಗಾರಿಕೋದ್ಯಮಿಗಳ ಒತ್ತಡಕ್ಕೆ ಸಿಲುಕಿದ ಸಿಎಂ ಮಣಿವಣ್ಣನ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂಬ ಆರೋಪ ಹರಿದಾಡುತ್ತಿದೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಮಣಿವಣ್ಣನ್‌ರವರ ವರ್ಗಾವಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗರಾಜು ಮಳವಳ್ಳಿ ಎಂಬುವವರು ಟೀಕೆ ಮಾಡಿದ್ದು ಹೀಗೆ..

“ಮಾಲೀಕರ ಪ್ರಕಾರ ಮಣಿವಣ್ಣನ್‌ರವರು ಮಾಡಿದ ಘನಘೋರ ತಪ್ಪುಗಳು:

1.ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಕೆಲಸದಿಂದ ತೆಗೆಯುವಂತಿಲ್ಲ ಎಂಬ ಆದೇಶ
2.ಕಾರ್ಮಿಕರಿಗೆ ರಜಾ ಸಹಿತ ಪೂರ್ತಿ ವೇತನ ನೀಡಬೇಕು ಎಂಬ ಆದೇಶ
3.ಕೆಲಸದಿಂದ ವಜಾಗೊಂಡಲ್ಲಿ ದೂರು ದಾಖಲಿಸಲು ಅವಕಾಶ ಕೊಟ್ಟಿದ್ದು
4.ಸಾಮಾಜಿಕ ಜಾಲತಾಣದಲ್ಲಿ ಮೇಲಿನ ಎಲ್ಲವನ್ನೂ ಹಂಚಿಕೊಂಡಿದ್ದು
5.ಕಾರ್ಮಿಕ ಸಂಘಟನೆಗಳ ಸಲಹೆ ಪಡೆದು ಕೋವಿಡ್ ಪರಿಹಾರ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದು

ಇದಕ್ಕಾಗಿ ‘ವರ್ಗಾವಣೆ ಪ್ರಶಸ್ತಿ’ ನೀಡಲಾಗಿದೆ.”

ಇನ್ನು ಖ್ಯಾತ ಕಾರ್ಟೂನಿಸ್ಟ್‌ ಸತೀಶ್‌ ಆಚಾರ್ಯರವರ ಕಾರ್ಟೂನ್‌ ಒಂದು ಸಾಕಷ್ಟು ಸಂಖ್ಯೆಯಲ್ಲಿ ಷೇರ್‌ ಆಗುತ್ತಿದೆ.

ಚಿತ್ರಕೃಪೆ: ಸತೀಶ್‌ ಆಚಾರ್ಯ

 


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...