Homeಮುಖಪುಟಉದ್ಯಮಿಗಳ ಲಾಬಿಗೆ ಸರ್ಕಾರ ಮಣಿದಿದೆ: ಮಣಿವಣ್ಣನ್ ವರ್ಗಾವಣೆಗೆ ತೀವ್ರ ವಿರೋಧ

ಉದ್ಯಮಿಗಳ ಲಾಬಿಗೆ ಸರ್ಕಾರ ಮಣಿದಿದೆ: ಮಣಿವಣ್ಣನ್ ವರ್ಗಾವಣೆಗೆ ತೀವ್ರ ವಿರೋಧ

- Advertisement -
- Advertisement -

ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್. ಪಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾರ್ಮಿಕ ಇಲಾಖೆಯಿಂದ ಮಣಿವಣ್ಣನ್ ಎತ್ತಂಗಡಿ ಮಾಡಿರುವುದರ ಹಿಂದೆ ದೊಡ್ಡ ಲಾಬಿ ಅಡಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ, ಲಾಕ್‌ಡೌನ್ ಸಂದರ್ಭದ ಸಂಬಳ ನೀಡುವಂತೆ ಮಣಿವಣ್ಣನ್‌ರವರಿ ಹಲವಾರು ಕೈಗಾರಿಕೋದ್ಯಮಿಗಳಿಗೆ ನೋಟಿಸ್ ನೀಡಿದ್ದರು. ಹೀಗಾಗಿ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಎರಡು ತಿಂಗಳಿಂದ ಸಂಬಳ ನೀಡಿಲ್ಲ, ಕುಟುಂಬ ನಿರ್ವಹಣೆಗೆ ತೊಂದರೆ ಆಗಿದೆ ಎಂದು 732 ಕಾರ್ಮಿಕರಿಂದ ಮಣಿವಣ್ಣನ್ ಗೆ ದೂರು ನೀಡಲಾಗಿತ್ತು ಎನ್ನಲಾಗುತ್ತಿದೆ. ಹಾಗಾಗಿ ದೂರಿನ ಹಿನ್ನೆಲೆಯಲ್ಲಿ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರಿಗೆ ನೋಟಿಸ್ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಮಣಿವಣ್ಣನ್ ಸೂಚನೆ ನೀಡಿದ್ದರು. ಹಾಗಾಗಿ ಕೈಗಾರಿಕೋದ್ಯಮಿಗಳು ಇವರ ವರ್ಗಾವಣೆಗೆ ಒತ್ತಡ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ತೆರವುಗೊಳಿಸುತ್ತಿರುವಾಗ ಕಾರ್ಮಿಕರೊಂದಿಗೆ ಮಾತನಾಡಿ ನಾವು ಸರಿಪಡಿಸುತ್ತೇವೆ. ನಮಗೆ ಮಣಿವಣ್ಣನ್‌ನವರಿಂದ ತೊಂದರೆಯಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳ ಸಂಘಟನೆ ಪ್ರಮುಖರು ಸಿಎಂಗೆ ದೂರು ನೀಡಿದ್ದು, ಅನಿವಾರ್ಯವಾಗಿ ಕೈಗಾರಿಕೋದ್ಯಮಿಗಳ ಒತ್ತಡಕ್ಕೆ ಸಿಲುಕಿದ ಸಿಎಂ ಮಣಿವಣ್ಣನ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂಬ ಆರೋಪ ಹರಿದಾಡುತ್ತಿದೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಮಣಿವಣ್ಣನ್‌ರವರ ವರ್ಗಾವಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗರಾಜು ಮಳವಳ್ಳಿ ಎಂಬುವವರು ಟೀಕೆ ಮಾಡಿದ್ದು ಹೀಗೆ..

“ಮಾಲೀಕರ ಪ್ರಕಾರ ಮಣಿವಣ್ಣನ್‌ರವರು ಮಾಡಿದ ಘನಘೋರ ತಪ್ಪುಗಳು:

1.ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಕೆಲಸದಿಂದ ತೆಗೆಯುವಂತಿಲ್ಲ ಎಂಬ ಆದೇಶ
2.ಕಾರ್ಮಿಕರಿಗೆ ರಜಾ ಸಹಿತ ಪೂರ್ತಿ ವೇತನ ನೀಡಬೇಕು ಎಂಬ ಆದೇಶ
3.ಕೆಲಸದಿಂದ ವಜಾಗೊಂಡಲ್ಲಿ ದೂರು ದಾಖಲಿಸಲು ಅವಕಾಶ ಕೊಟ್ಟಿದ್ದು
4.ಸಾಮಾಜಿಕ ಜಾಲತಾಣದಲ್ಲಿ ಮೇಲಿನ ಎಲ್ಲವನ್ನೂ ಹಂಚಿಕೊಂಡಿದ್ದು
5.ಕಾರ್ಮಿಕ ಸಂಘಟನೆಗಳ ಸಲಹೆ ಪಡೆದು ಕೋವಿಡ್ ಪರಿಹಾರ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದು

ಇದಕ್ಕಾಗಿ ‘ವರ್ಗಾವಣೆ ಪ್ರಶಸ್ತಿ’ ನೀಡಲಾಗಿದೆ.”

ಇನ್ನು ಖ್ಯಾತ ಕಾರ್ಟೂನಿಸ್ಟ್‌ ಸತೀಶ್‌ ಆಚಾರ್ಯರವರ ಕಾರ್ಟೂನ್‌ ಒಂದು ಸಾಕಷ್ಟು ಸಂಖ್ಯೆಯಲ್ಲಿ ಷೇರ್‌ ಆಗುತ್ತಿದೆ.

ಚಿತ್ರಕೃಪೆ: ಸತೀಶ್‌ ಆಚಾರ್ಯ

 


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...