Homeಮುಖಪುಟಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ - ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

- Advertisement -
- Advertisement -

ಕೈಗಾರಿಕೆಗಳ ಮಾಲಿಕರ ಲಾಬಿಗೆ ಮಣಿದ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ವರ್ಗಾವಣೆ ಮಾಡಿರುವುದಕ್ಕೆ ಕಾರ್ಮಿಕ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ತಪ್ಪು ಮಾಡದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೊರೊನ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಮಣಿವಣ್ಣನ್ ನೆರವಾಗಿದ್ದರು. ಅವರ ಸಮಸ್ಯೆಗಳಿಗೆ ಕೈಲಾದ ಮಟ್ಟಿಗೆ ಸ್ಪಂದಿಸುತ್ತಿದ್ದರು. ಇಂಥ ಸಮಯದಲ್ಲಿ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉದ್ದಿಮೆಗಳ ಮಾಲಿಕರು ಹಾಕಿದ ಒತ್ತಡದಿಂದಲೇ ಮಣಿವಣ್ಣನ್ ಅವರನ್ನು ಬಿ.ಎಸ್. ಯಡಿಯೂರಪ್ಪ ನೇತೃತೃತ್ವದ ಸರ್ಕಾರ ವರ್ಗಾವಣೆ ಮಾಡಿದೆ. ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರ ಮನಬಂದಂತೆ ಅಧಿಕಾರಿಗಳ ವರ್ಗಾವಣೆಯಲ್ಲಿ ತೊಡಗಿದೆ. ಇದು ಬಿಜೆಪಿ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಜನರು ಕಿಡಿಕಾರಿದ್ದಾರೆ.

ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ  ಸೈಯದ್ ಮುಜೀಬ್ ಮಾತನಾಡಿ, “ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಒತ್ತಡಕ್ಕೆ ಮಣಿದಿರುವುದು ಸ್ವಷ್ಟವಾಗಿದೆ. ಕಾರ್ಮಿಕರ ಪರ, ಸಂವಿಧಾನಬದ್ದವಾಗಿ ಕೆಲಸ ನಿರ್ವಹಿಸುತ್ತಿದ್ದ ಮಣಿವಣ್ಣನ್, ಕೊರೊನ ಸಂದರ್ಭದಲ್ಲಿ ಕಾರ್ಮಿಕರಿಗೆ ಸಂಬಳ ನೀಡದ ಕೈಗಾರಿಕೆಗಳ ಆಡಳಿತ ಮಂಡಳಿ/ಮಾಲಿಕರಿಗೆ ನೋಟಿಸ್ ನೀಡಲು ಮುಂದಾಗಿದ್ದರು. ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಅವರು ಬಡವರ ಪರ ಇದ್ದರು. ಕುಂಟು ನೆಪವೊಡ್ಡಿ ಮಾಲಿಕರ ಸಂಘ ಸರ್ಕಾರದ ಮೇಲೆ ಒತ್ತಡ ಹೇರಿ ವರ್ಗಾವಣೆ ಮಾಡಿದೆ. ವರ್ಗಾವಣೆ ರದ್ದುಪಡಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ಸಂದರ್ಭದಲ್ಲಿ ಬಿಲ್ಡರ್ ಗಳ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ರೈಲು ಸೇವೆಯನ್ನು ರದ್ದುಗೊಳಿಸಿತ್ತು. ಈಗ ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಲಾಬಿಗೆ ಸರ್ಕಾರ ಮಣೆ ಹಾಕಿದ್ದು ಬಂಡವಾಳಗಾರರ ಹಿತ ಕಾಯಲು ಬದ್ದತೆ ಪ್ರದರ್ಶಿಸುತ್ತಿದೆ. ಇಂತಹ ತೀರ್ಮಾನಗಳು ಒಳ್ಳೆಯವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿ “ಕೊರೊನ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಅರ್ಥವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳಿಂದ ಹೇಗೆ ಕೆಲಸ ತೆಗೆಸಿಕೊಳ್ಳಬೇಕೆಂಬ ಬಗ್ಗೆ ಸರ್ಕಾರ ಯೋಚಿಸಬೇಕೇ ಹೊರತು ವರ್ಗಾವಣೆ ಪರಿಹಾರವಲ್ಲ. ಯಾವುದೋ ಹಿತಾಸಕ್ತಿಗೆ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಕಾರ್ಮಿಕರಿಗೆ ಬಂದ ಭಾಗ್ಯವೇನು? ಕೊನೊನ ಆಪತ್ಕಾಲದ. ಹಣ ಕಾರ್ಮಿಕರಿಗೆ ಬಂದಿಲ್ಲ. ಕಾರ್ಮಿಕರಿಗೆ ಪರಿಹಾರ ನೀಡಬೇಕಾದ ಹಣಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕ್ಕಟ್ಟು ಉದ್ಭವಿಸಿರುವ ಸಂದರ್ಭ ಅಧಿಕಾರಿಗಳು ತಪ್ಪು ಮಾಡಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ಇಂತಹ ವೇಳೆ ಸಮಸ್ಯೆ ಬಗೆಹರಿಸುವುದು ಮೊದಲ ಆದ್ಯತೆ ಆಗಬೇಕು. ಆದರೆ ಹೊಸದಾಗಿ ಗೆದ್ದುಬಂದಿರುವವರು ಹಣ ಮಾಡಿಕೊಳ್ಳಲು ಅಧಿಕಾರಿಗಳ ವರ್ಗಾವಣೆಗೆ ಇಳಿದಿದ್ದಾರೆ. ಕಾರ್ಮಿಕ, ಅರಣ್ಯ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕಾರ್ಮಿಕರು ಬೀದೀಲಿ ಇದ್ದಾರೆ ಅವರಿಗೆ ನೆರವು ನೀಡಬೇಕು. ಈ ದಿಕ್ಕಿನತ್ತ ಸಚಿವರು ಯೋಚಿಸಬೇಕು ಎಂದಿದ್ದಾರೆ.

ತುಮಕೂರಿನಲ್ಲಿ ನಗರಸಭೆ ಆಯುಕ್ತರಾಗಿದ್ದಾಗ ಪಿ.ಮಣಿವಣ್ಣನ್ ಉತ್ತಮ ಕೆಲಸ ಮಾಡಿದ್ದರು. ಜನರ ಮೆಚ್ಚುಗೆ ಗಳಿಸಿದ್ದರು. ಇಲ್ಲಿಯೂ ರಾಜಕೀಯ ಮುಖಂಡರ ಲಾಬಿಗೆ ಮಣಿದ ಯಡಿಯೂರಪ್ಪ ಸರ್ಕಾರವೇ ಅಂದು ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿತ್ತು. ಈಗಲೂ ಅದೇ ಯಡಿಯೂರಪ್ಪ ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ. ತಾನು ದಕ್ಷ ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ನಾಯಕರು ಇದೀಗ ತುಟಿ ಹೊಲಿದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ “ಇಂಥ ಸಮಯದಲ್ಲಿ ವರ್ಗಾವಣೆ ಸರಿಯಲ್ಲ. ಕಾರ್ಮಿಕರು ಕೆಲಸ ಕಳೆದುಕೊಂಡಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ 2005ರಲ್ಲಿ ಜಾರಿಗೆ ತಂದಿರುವ ಕಾನೂನುಗಳನ್ನು ಮಣಿವಣ್ಣನ್ ಪಾಲಿಸುತ್ತಿದ್ದರು. ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು. ಕಾರ್ಮಿಕರಿಗೆ  ಸೌಲಭ್ಯ ಕೊಡಿಸುತ್ತಿದ್ದರು. ಅವರ ವರ್ಗಾವಣೆ ಸರ್ಕಾರದ ಲೋಪಕ್ಕೆ ಹಿಡಿದ
ಕನ್ನಡಿ. ಕೂಡಲೇ ವರ್ಗಾವಣೆ ರದ್ದುಗೊಳಿಸಿ ಕಾರ್ಮಿಕ ಪ್ರದಾನ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಐಎಎಸ್ ಅಧಿಕಾರಿ ರವಿ ಸಾವಿನ ಪ್ರಕರಣ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಮುಂದಿಟ್ಟುಕೊಂಡು ಬಿಜೆಪಿ ದಕ್ಷ, ಪ್ರಾಮಾಣಿಕ ಪಾರದರ್ಶಕ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಇಲ್ಲ. ಬಿಜೆಪಿ ಸದಾ ಉತ್ತಮ ಅಧಿಕಾರಿಗಳ ಜೊತೆಗೆ ಇರುತ್ತದೆ ಎಂದು ಹೇಳಿ ರಾಜ್ಯದ್ಯಾಂತ ಪ್ರತಿಭಟನೆ ನಡೆಸಿತ್ತು. ಈಗ ಅದೇ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಮಾಲೀಕರ ಪರವೇ ಹೊರತು ಕಾರ್ಮಿಕರ ಪರ ಅಲ್ಲ. ಇದನ್ನು ಈ ದೇಶದ ಜನಸಾಮಾನ್ಯರು ಮೊದಲು ತಿಳಿದುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...