Homeಮುಖಪುಟಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ - ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

- Advertisement -
- Advertisement -

ಕೈಗಾರಿಕೆಗಳ ಮಾಲಿಕರ ಲಾಬಿಗೆ ಮಣಿದ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ವರ್ಗಾವಣೆ ಮಾಡಿರುವುದಕ್ಕೆ ಕಾರ್ಮಿಕ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ತಪ್ಪು ಮಾಡದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೊರೊನ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಮಣಿವಣ್ಣನ್ ನೆರವಾಗಿದ್ದರು. ಅವರ ಸಮಸ್ಯೆಗಳಿಗೆ ಕೈಲಾದ ಮಟ್ಟಿಗೆ ಸ್ಪಂದಿಸುತ್ತಿದ್ದರು. ಇಂಥ ಸಮಯದಲ್ಲಿ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉದ್ದಿಮೆಗಳ ಮಾಲಿಕರು ಹಾಕಿದ ಒತ್ತಡದಿಂದಲೇ ಮಣಿವಣ್ಣನ್ ಅವರನ್ನು ಬಿ.ಎಸ್. ಯಡಿಯೂರಪ್ಪ ನೇತೃತೃತ್ವದ ಸರ್ಕಾರ ವರ್ಗಾವಣೆ ಮಾಡಿದೆ. ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರ ಮನಬಂದಂತೆ ಅಧಿಕಾರಿಗಳ ವರ್ಗಾವಣೆಯಲ್ಲಿ ತೊಡಗಿದೆ. ಇದು ಬಿಜೆಪಿ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಜನರು ಕಿಡಿಕಾರಿದ್ದಾರೆ.

ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ  ಸೈಯದ್ ಮುಜೀಬ್ ಮಾತನಾಡಿ, “ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಒತ್ತಡಕ್ಕೆ ಮಣಿದಿರುವುದು ಸ್ವಷ್ಟವಾಗಿದೆ. ಕಾರ್ಮಿಕರ ಪರ, ಸಂವಿಧಾನಬದ್ದವಾಗಿ ಕೆಲಸ ನಿರ್ವಹಿಸುತ್ತಿದ್ದ ಮಣಿವಣ್ಣನ್, ಕೊರೊನ ಸಂದರ್ಭದಲ್ಲಿ ಕಾರ್ಮಿಕರಿಗೆ ಸಂಬಳ ನೀಡದ ಕೈಗಾರಿಕೆಗಳ ಆಡಳಿತ ಮಂಡಳಿ/ಮಾಲಿಕರಿಗೆ ನೋಟಿಸ್ ನೀಡಲು ಮುಂದಾಗಿದ್ದರು. ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಅವರು ಬಡವರ ಪರ ಇದ್ದರು. ಕುಂಟು ನೆಪವೊಡ್ಡಿ ಮಾಲಿಕರ ಸಂಘ ಸರ್ಕಾರದ ಮೇಲೆ ಒತ್ತಡ ಹೇರಿ ವರ್ಗಾವಣೆ ಮಾಡಿದೆ. ವರ್ಗಾವಣೆ ರದ್ದುಪಡಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ಸಂದರ್ಭದಲ್ಲಿ ಬಿಲ್ಡರ್ ಗಳ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ರೈಲು ಸೇವೆಯನ್ನು ರದ್ದುಗೊಳಿಸಿತ್ತು. ಈಗ ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಲಾಬಿಗೆ ಸರ್ಕಾರ ಮಣೆ ಹಾಕಿದ್ದು ಬಂಡವಾಳಗಾರರ ಹಿತ ಕಾಯಲು ಬದ್ದತೆ ಪ್ರದರ್ಶಿಸುತ್ತಿದೆ. ಇಂತಹ ತೀರ್ಮಾನಗಳು ಒಳ್ಳೆಯವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿ “ಕೊರೊನ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಅರ್ಥವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳಿಂದ ಹೇಗೆ ಕೆಲಸ ತೆಗೆಸಿಕೊಳ್ಳಬೇಕೆಂಬ ಬಗ್ಗೆ ಸರ್ಕಾರ ಯೋಚಿಸಬೇಕೇ ಹೊರತು ವರ್ಗಾವಣೆ ಪರಿಹಾರವಲ್ಲ. ಯಾವುದೋ ಹಿತಾಸಕ್ತಿಗೆ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಕಾರ್ಮಿಕರಿಗೆ ಬಂದ ಭಾಗ್ಯವೇನು? ಕೊನೊನ ಆಪತ್ಕಾಲದ. ಹಣ ಕಾರ್ಮಿಕರಿಗೆ ಬಂದಿಲ್ಲ. ಕಾರ್ಮಿಕರಿಗೆ ಪರಿಹಾರ ನೀಡಬೇಕಾದ ಹಣಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕ್ಕಟ್ಟು ಉದ್ಭವಿಸಿರುವ ಸಂದರ್ಭ ಅಧಿಕಾರಿಗಳು ತಪ್ಪು ಮಾಡಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ಇಂತಹ ವೇಳೆ ಸಮಸ್ಯೆ ಬಗೆಹರಿಸುವುದು ಮೊದಲ ಆದ್ಯತೆ ಆಗಬೇಕು. ಆದರೆ ಹೊಸದಾಗಿ ಗೆದ್ದುಬಂದಿರುವವರು ಹಣ ಮಾಡಿಕೊಳ್ಳಲು ಅಧಿಕಾರಿಗಳ ವರ್ಗಾವಣೆಗೆ ಇಳಿದಿದ್ದಾರೆ. ಕಾರ್ಮಿಕ, ಅರಣ್ಯ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕಾರ್ಮಿಕರು ಬೀದೀಲಿ ಇದ್ದಾರೆ ಅವರಿಗೆ ನೆರವು ನೀಡಬೇಕು. ಈ ದಿಕ್ಕಿನತ್ತ ಸಚಿವರು ಯೋಚಿಸಬೇಕು ಎಂದಿದ್ದಾರೆ.

ತುಮಕೂರಿನಲ್ಲಿ ನಗರಸಭೆ ಆಯುಕ್ತರಾಗಿದ್ದಾಗ ಪಿ.ಮಣಿವಣ್ಣನ್ ಉತ್ತಮ ಕೆಲಸ ಮಾಡಿದ್ದರು. ಜನರ ಮೆಚ್ಚುಗೆ ಗಳಿಸಿದ್ದರು. ಇಲ್ಲಿಯೂ ರಾಜಕೀಯ ಮುಖಂಡರ ಲಾಬಿಗೆ ಮಣಿದ ಯಡಿಯೂರಪ್ಪ ಸರ್ಕಾರವೇ ಅಂದು ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿತ್ತು. ಈಗಲೂ ಅದೇ ಯಡಿಯೂರಪ್ಪ ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ. ತಾನು ದಕ್ಷ ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ನಾಯಕರು ಇದೀಗ ತುಟಿ ಹೊಲಿದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ “ಇಂಥ ಸಮಯದಲ್ಲಿ ವರ್ಗಾವಣೆ ಸರಿಯಲ್ಲ. ಕಾರ್ಮಿಕರು ಕೆಲಸ ಕಳೆದುಕೊಂಡಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ 2005ರಲ್ಲಿ ಜಾರಿಗೆ ತಂದಿರುವ ಕಾನೂನುಗಳನ್ನು ಮಣಿವಣ್ಣನ್ ಪಾಲಿಸುತ್ತಿದ್ದರು. ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು. ಕಾರ್ಮಿಕರಿಗೆ  ಸೌಲಭ್ಯ ಕೊಡಿಸುತ್ತಿದ್ದರು. ಅವರ ವರ್ಗಾವಣೆ ಸರ್ಕಾರದ ಲೋಪಕ್ಕೆ ಹಿಡಿದ
ಕನ್ನಡಿ. ಕೂಡಲೇ ವರ್ಗಾವಣೆ ರದ್ದುಗೊಳಿಸಿ ಕಾರ್ಮಿಕ ಪ್ರದಾನ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಐಎಎಸ್ ಅಧಿಕಾರಿ ರವಿ ಸಾವಿನ ಪ್ರಕರಣ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಮುಂದಿಟ್ಟುಕೊಂಡು ಬಿಜೆಪಿ ದಕ್ಷ, ಪ್ರಾಮಾಣಿಕ ಪಾರದರ್ಶಕ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಇಲ್ಲ. ಬಿಜೆಪಿ ಸದಾ ಉತ್ತಮ ಅಧಿಕಾರಿಗಳ ಜೊತೆಗೆ ಇರುತ್ತದೆ ಎಂದು ಹೇಳಿ ರಾಜ್ಯದ್ಯಾಂತ ಪ್ರತಿಭಟನೆ ನಡೆಸಿತ್ತು. ಈಗ ಅದೇ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಮಾಲೀಕರ ಪರವೇ ಹೊರತು ಕಾರ್ಮಿಕರ ಪರ ಅಲ್ಲ. ಇದನ್ನು ಈ ದೇಶದ ಜನಸಾಮಾನ್ಯರು ಮೊದಲು ತಿಳಿದುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....