Homeಮುಖಪುಟಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ - ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

- Advertisement -
- Advertisement -

ಕೈಗಾರಿಕೆಗಳ ಮಾಲಿಕರ ಲಾಬಿಗೆ ಮಣಿದ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ವರ್ಗಾವಣೆ ಮಾಡಿರುವುದಕ್ಕೆ ಕಾರ್ಮಿಕ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ತಪ್ಪು ಮಾಡದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೊರೊನ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಮಣಿವಣ್ಣನ್ ನೆರವಾಗಿದ್ದರು. ಅವರ ಸಮಸ್ಯೆಗಳಿಗೆ ಕೈಲಾದ ಮಟ್ಟಿಗೆ ಸ್ಪಂದಿಸುತ್ತಿದ್ದರು. ಇಂಥ ಸಮಯದಲ್ಲಿ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉದ್ದಿಮೆಗಳ ಮಾಲಿಕರು ಹಾಕಿದ ಒತ್ತಡದಿಂದಲೇ ಮಣಿವಣ್ಣನ್ ಅವರನ್ನು ಬಿ.ಎಸ್. ಯಡಿಯೂರಪ್ಪ ನೇತೃತೃತ್ವದ ಸರ್ಕಾರ ವರ್ಗಾವಣೆ ಮಾಡಿದೆ. ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರ ಮನಬಂದಂತೆ ಅಧಿಕಾರಿಗಳ ವರ್ಗಾವಣೆಯಲ್ಲಿ ತೊಡಗಿದೆ. ಇದು ಬಿಜೆಪಿ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಜನರು ಕಿಡಿಕಾರಿದ್ದಾರೆ.

ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ  ಸೈಯದ್ ಮುಜೀಬ್ ಮಾತನಾಡಿ, “ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಒತ್ತಡಕ್ಕೆ ಮಣಿದಿರುವುದು ಸ್ವಷ್ಟವಾಗಿದೆ. ಕಾರ್ಮಿಕರ ಪರ, ಸಂವಿಧಾನಬದ್ದವಾಗಿ ಕೆಲಸ ನಿರ್ವಹಿಸುತ್ತಿದ್ದ ಮಣಿವಣ್ಣನ್, ಕೊರೊನ ಸಂದರ್ಭದಲ್ಲಿ ಕಾರ್ಮಿಕರಿಗೆ ಸಂಬಳ ನೀಡದ ಕೈಗಾರಿಕೆಗಳ ಆಡಳಿತ ಮಂಡಳಿ/ಮಾಲಿಕರಿಗೆ ನೋಟಿಸ್ ನೀಡಲು ಮುಂದಾಗಿದ್ದರು. ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಅವರು ಬಡವರ ಪರ ಇದ್ದರು. ಕುಂಟು ನೆಪವೊಡ್ಡಿ ಮಾಲಿಕರ ಸಂಘ ಸರ್ಕಾರದ ಮೇಲೆ ಒತ್ತಡ ಹೇರಿ ವರ್ಗಾವಣೆ ಮಾಡಿದೆ. ವರ್ಗಾವಣೆ ರದ್ದುಪಡಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ಸಂದರ್ಭದಲ್ಲಿ ಬಿಲ್ಡರ್ ಗಳ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ರೈಲು ಸೇವೆಯನ್ನು ರದ್ದುಗೊಳಿಸಿತ್ತು. ಈಗ ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಲಾಬಿಗೆ ಸರ್ಕಾರ ಮಣೆ ಹಾಕಿದ್ದು ಬಂಡವಾಳಗಾರರ ಹಿತ ಕಾಯಲು ಬದ್ದತೆ ಪ್ರದರ್ಶಿಸುತ್ತಿದೆ. ಇಂತಹ ತೀರ್ಮಾನಗಳು ಒಳ್ಳೆಯವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿ “ಕೊರೊನ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಅರ್ಥವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳಿಂದ ಹೇಗೆ ಕೆಲಸ ತೆಗೆಸಿಕೊಳ್ಳಬೇಕೆಂಬ ಬಗ್ಗೆ ಸರ್ಕಾರ ಯೋಚಿಸಬೇಕೇ ಹೊರತು ವರ್ಗಾವಣೆ ಪರಿಹಾರವಲ್ಲ. ಯಾವುದೋ ಹಿತಾಸಕ್ತಿಗೆ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಕಾರ್ಮಿಕರಿಗೆ ಬಂದ ಭಾಗ್ಯವೇನು? ಕೊನೊನ ಆಪತ್ಕಾಲದ. ಹಣ ಕಾರ್ಮಿಕರಿಗೆ ಬಂದಿಲ್ಲ. ಕಾರ್ಮಿಕರಿಗೆ ಪರಿಹಾರ ನೀಡಬೇಕಾದ ಹಣಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕ್ಕಟ್ಟು ಉದ್ಭವಿಸಿರುವ ಸಂದರ್ಭ ಅಧಿಕಾರಿಗಳು ತಪ್ಪು ಮಾಡಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ಇಂತಹ ವೇಳೆ ಸಮಸ್ಯೆ ಬಗೆಹರಿಸುವುದು ಮೊದಲ ಆದ್ಯತೆ ಆಗಬೇಕು. ಆದರೆ ಹೊಸದಾಗಿ ಗೆದ್ದುಬಂದಿರುವವರು ಹಣ ಮಾಡಿಕೊಳ್ಳಲು ಅಧಿಕಾರಿಗಳ ವರ್ಗಾವಣೆಗೆ ಇಳಿದಿದ್ದಾರೆ. ಕಾರ್ಮಿಕ, ಅರಣ್ಯ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕಾರ್ಮಿಕರು ಬೀದೀಲಿ ಇದ್ದಾರೆ ಅವರಿಗೆ ನೆರವು ನೀಡಬೇಕು. ಈ ದಿಕ್ಕಿನತ್ತ ಸಚಿವರು ಯೋಚಿಸಬೇಕು ಎಂದಿದ್ದಾರೆ.

ತುಮಕೂರಿನಲ್ಲಿ ನಗರಸಭೆ ಆಯುಕ್ತರಾಗಿದ್ದಾಗ ಪಿ.ಮಣಿವಣ್ಣನ್ ಉತ್ತಮ ಕೆಲಸ ಮಾಡಿದ್ದರು. ಜನರ ಮೆಚ್ಚುಗೆ ಗಳಿಸಿದ್ದರು. ಇಲ್ಲಿಯೂ ರಾಜಕೀಯ ಮುಖಂಡರ ಲಾಬಿಗೆ ಮಣಿದ ಯಡಿಯೂರಪ್ಪ ಸರ್ಕಾರವೇ ಅಂದು ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿತ್ತು. ಈಗಲೂ ಅದೇ ಯಡಿಯೂರಪ್ಪ ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ. ತಾನು ದಕ್ಷ ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ನಾಯಕರು ಇದೀಗ ತುಟಿ ಹೊಲಿದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ “ಇಂಥ ಸಮಯದಲ್ಲಿ ವರ್ಗಾವಣೆ ಸರಿಯಲ್ಲ. ಕಾರ್ಮಿಕರು ಕೆಲಸ ಕಳೆದುಕೊಂಡಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ 2005ರಲ್ಲಿ ಜಾರಿಗೆ ತಂದಿರುವ ಕಾನೂನುಗಳನ್ನು ಮಣಿವಣ್ಣನ್ ಪಾಲಿಸುತ್ತಿದ್ದರು. ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು. ಕಾರ್ಮಿಕರಿಗೆ  ಸೌಲಭ್ಯ ಕೊಡಿಸುತ್ತಿದ್ದರು. ಅವರ ವರ್ಗಾವಣೆ ಸರ್ಕಾರದ ಲೋಪಕ್ಕೆ ಹಿಡಿದ
ಕನ್ನಡಿ. ಕೂಡಲೇ ವರ್ಗಾವಣೆ ರದ್ದುಗೊಳಿಸಿ ಕಾರ್ಮಿಕ ಪ್ರದಾನ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಐಎಎಸ್ ಅಧಿಕಾರಿ ರವಿ ಸಾವಿನ ಪ್ರಕರಣ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಮುಂದಿಟ್ಟುಕೊಂಡು ಬಿಜೆಪಿ ದಕ್ಷ, ಪ್ರಾಮಾಣಿಕ ಪಾರದರ್ಶಕ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಇಲ್ಲ. ಬಿಜೆಪಿ ಸದಾ ಉತ್ತಮ ಅಧಿಕಾರಿಗಳ ಜೊತೆಗೆ ಇರುತ್ತದೆ ಎಂದು ಹೇಳಿ ರಾಜ್ಯದ್ಯಾಂತ ಪ್ರತಿಭಟನೆ ನಡೆಸಿತ್ತು. ಈಗ ಅದೇ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಮಾಲೀಕರ ಪರವೇ ಹೊರತು ಕಾರ್ಮಿಕರ ಪರ ಅಲ್ಲ. ಇದನ್ನು ಈ ದೇಶದ ಜನಸಾಮಾನ್ಯರು ಮೊದಲು ತಿಳಿದುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...