Homeಮುಖಪುಟಚಿತ್ರ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಮತ್ತೊಂದು ಕಿರುಕುಳ ಪ್ರಕರಣ ದಾಖಲಿಸಿದ ನಟಿ ಮಂಜು...

ಚಿತ್ರ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಮತ್ತೊಂದು ಕಿರುಕುಳ ಪ್ರಕರಣ ದಾಖಲಿಸಿದ ನಟಿ ಮಂಜು ವಾರಿಯರ್

- Advertisement -
- Advertisement -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಈಗಾಗಲೇ ಜಾಮೀನಿನ ಮೇಲೆ ಹೊರಗಿರುವ ಮಲಯಾಳಂ ಚಲನಚಿತ್ರ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ನಟಿ ಮಂಜು ವಾರಿಯರ್ ಅವರು ಇದೇ ರೀತಿಯ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಶಶಿಧರ್ ಅವರು ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಮಂಜು ವಾರಿಯರ್ ಅವರು ನೀಡಿರುವ ದೂರಿನ ಆಧಾರದ ಮೇಲೆ ಕೊಚ್ಚಿ ಪೊಲೀಸರು ಶಶಿಧರನ್ ವಿರುದ್ದ ಹೊಸ ಪ್ರಕರಣ ದಾಖಲಿಸಿದ್ದಾರೆ.

ಶಶಿಧರನ್ ಪ್ರಸ್ತುತ ಅಮೆರಿಕದಲ್ಲಿ ವಾಸಿಸುತ್ತಿರುವುದರಿಂದ, ಅವರನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಮನವಿ ಮಾಡಲು ಪೊಲೀಸರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ, ಅವರು ಈಗಾಗಲೇ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಜಾಮೀನಿನ ಮೇಲೆ ಹೊರಗಿರುವ ಶಶಿಧರನ್ ಅವರನ್ನು ಮೇ 2022ರಲ್ಲಿ ಮಂಜು ವಾರಿಯರ್ ಅವರ ದೂರಿನ ಮೇರೆಗೆ ಬಂಧಿಸಲಾಗಿತ್ತು. ಶಶಿಧರನ್ ತನಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಎಂದು ಮಂಜು ವಾರಿಯರ್ ದೂರಿದ್ದರು.

ಚಲನಚಿತ್ರ ನಿರ್ಮಾಪಕ ಶಶಿಧರನ್ 2000ರಲ್ಲಿ ತಮ್ಮ ಸಿನಿ ಜರ್ನಿಯನ್ನು ಪ್ರಾರಂಭಿಸಿದರು. 2003ರಲ್ಲಿ ಅವರು ಕ್ರೌಡ್‌ಫಂಡಿಂಗ್ ಮಾಡಿ ತಮ್ಮ ಮೊದಲ ಕಿರುಚಿತ್ರವನ್ನು ನಿರ್ಮಿಸಿದ್ದರು. 2014 ರಲ್ಲಿ, ಶಶಿಧರನ್ ತಮ್ಮ ಮೊದಲ ಪೂರ್ಣ ಚಿತ್ರ ‘ಒರಾಲ್‌ಪೋಕಂ’ ಅನ್ನು ನಿರ್ಮಿಸಿದರು. ಈ ಚಿತ್ರವು 2014ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಮಲಯಾಳಂ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
ಶಶಿಧರನ್ 2014ರಲ್ಲಿ ಅತ್ಯುತ್ತಮ ನಿರ್ದೇಶಕ ಎಂದು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. 2020ರಲ್ಲಿ ಮಂಜು ವಾರಿಯರ್ ನಟಿಸಿದ್ದ ಅವರ ‘ಕಾಯಾತ್ತಂ’ ಚಿತ್ರವನ್ನು ಹಿಮಾಲಯದಲ್ಲಿ ಐಫೋನ್‌ನಲ್ಲಿ ಶೂಟ್‌ ಮಾಡಲಾಗಿತ್ತು. ಇದು ಮೆಚ್ಚುಗೆಯನ್ನು ಗಳಿಸಿತ್ತು.

ಮದುವೆಗೆ ಒತ್ತಡ: ಯುವತಿಯ ಕೊಂದು, ದೇಹಕ್ಕೆ ಬೆಂಕಿ ಹಚ್ಚಿ, ಸೂಟ್‌ಕೇಸ್‌ನಲ್ಲಿ ಎಸೆದ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...