Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...