Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...