Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...