Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...