Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...