Homeಮುಖಪುಟಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

- Advertisement -
- Advertisement -

ಗುರುವಾರ ರಾತ್ರಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಶುಕ್ರವಾರ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಜೊತೆಗೆ ದೇಶದಾದ್ಯಂತ ಹಲವು ರಾಜ್ಯ ಸರ್ಕಾರಗಳು ಶುಕ್ರವಾರ ಸರ್ಕಾರಿ ರಜೆ ಘೋಷಿಸಿವೆ. ಮನಮೋಹನ್ ಸಿಂಗ್ ನಿಧನ

ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪಕ್ಷದ ಹಿರಿಯ ನಾಯಕನ ನಿಧನಕ್ಕೆ ಗೌರವ ಸೂಚಕವಾಗಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಏಳು ದಿನಗಳ ಕಾಲ ರದ್ದುಗೊಳಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎನ್ನಲಾಗುವ ಮತ್ತು ಎರಡು ಬಾರಿ ಪ್ರಧಾನಿಯಾಗಿದ್ದ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮನೆಯಲ್ಲಿ ಮೂರ್ಛೆ ಹೋದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಯಿತು. ಏಮ್ಸ್‌ ನೀಡಿದ್ದ ಬುಲೆಟಿನ್‌ನಲ್ಲಿ “ಅವರ ವಯೋಸಹಜ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಿಸೆಂಬರ್ 26 ರಂದು ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡರು” ಎಂದು ಹೇಳಿತ್ತು.

“ಮನೆಯಲ್ಲಿ ತಕ್ಷಣವೇ ಅವರಿಗೆ ಚಿಕಿತ್ಸೆ ನೀಡುವ ಕ್ರಮಗಳನ್ನು ಕೈಗೊಳ್ಳಲಾಯಿತು. ನಂತರ ಅವರನ್ನು ರಾತ್ರಿ 8.06 ಕ್ಕೆ ದೆಹಲಿಯ ಏಮ್ಸ್‌ಗೆ ವೈದ್ಯಕೀಯ ತುರ್ತುಸ್ಥಿತಿ ವಿಭಾಗಕ್ಕೆ ತರಲಾಯಿತು. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾತ್ರಿ 9.51 ಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು” ಎಂದು ದೆಹಲಿ ಏಮ್ಸ್‌ ಬುಲೆಟಿನ್ ಹೇಳಿದೆ. ಮನಮೋಹನ್ ಸಿಂಗ್ ನಿಧನ

ಆಗಿನ ಪ್ರಧಾನಿ ಪಿವಿ ನರಸಿಂಹರಾವ್ ಅವರ ಅಡಿಯಲ್ಲಿ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ವರು, 1991 ರಲ್ಲಿ ಭಾರತವನ್ನು ದಿವಾಳಿತನದ ಅಂಚಿನಿಂದ ಹೊರತಂದು ಆರ್ಥಿಕ ಉದಾರೀಕರಣದ ಯುಗಕ್ಕೆ ನಾಂದಿ ಹಾಡಿದ್ದರು. ಈ ಸುಧಾರಣೆಗಳು ಭಾರತದ ಆರ್ಥಿಕ ಪಥದ ಹಾದಿಯನ್ನು ಬದಲಿಸಿವೆ ಎಂದು ವ್ಯಾಪಕವಾಗಿ ನಂಬಲಾಗಿದೆ. ಜೊತೆಗೆ ಗಂಭೀರ ಟೀಕೆಗಳೂ ವ್ಯಕ್ತವಾಗಿದೆ.

ಕರ್ನಾಟಕದ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಅಲ್ಲಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಅವರ ಸಾವು ಖಚಿತವಾಗುತ್ತಿದ್ದಂತೆಯೇ ನಾಯಕರನ್ನು ದೆಹಲಿಗೆ ದೌಡಾಯಿಸಿದರು.

ಇದನ್ನೂ ಓದಿ: ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...