Homeಮುಖಪುಟಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

- Advertisement -
- Advertisement -

ಗುರುವಾರ ರಾತ್ರಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಶುಕ್ರವಾರ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಜೊತೆಗೆ ದೇಶದಾದ್ಯಂತ ಹಲವು ರಾಜ್ಯ ಸರ್ಕಾರಗಳು ಶುಕ್ರವಾರ ಸರ್ಕಾರಿ ರಜೆ ಘೋಷಿಸಿವೆ. ಮನಮೋಹನ್ ಸಿಂಗ್ ನಿಧನ

ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪಕ್ಷದ ಹಿರಿಯ ನಾಯಕನ ನಿಧನಕ್ಕೆ ಗೌರವ ಸೂಚಕವಾಗಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಏಳು ದಿನಗಳ ಕಾಲ ರದ್ದುಗೊಳಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎನ್ನಲಾಗುವ ಮತ್ತು ಎರಡು ಬಾರಿ ಪ್ರಧಾನಿಯಾಗಿದ್ದ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮನೆಯಲ್ಲಿ ಮೂರ್ಛೆ ಹೋದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಯಿತು. ಏಮ್ಸ್‌ ನೀಡಿದ್ದ ಬುಲೆಟಿನ್‌ನಲ್ಲಿ “ಅವರ ವಯೋಸಹಜ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಿಸೆಂಬರ್ 26 ರಂದು ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡರು” ಎಂದು ಹೇಳಿತ್ತು.

“ಮನೆಯಲ್ಲಿ ತಕ್ಷಣವೇ ಅವರಿಗೆ ಚಿಕಿತ್ಸೆ ನೀಡುವ ಕ್ರಮಗಳನ್ನು ಕೈಗೊಳ್ಳಲಾಯಿತು. ನಂತರ ಅವರನ್ನು ರಾತ್ರಿ 8.06 ಕ್ಕೆ ದೆಹಲಿಯ ಏಮ್ಸ್‌ಗೆ ವೈದ್ಯಕೀಯ ತುರ್ತುಸ್ಥಿತಿ ವಿಭಾಗಕ್ಕೆ ತರಲಾಯಿತು. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾತ್ರಿ 9.51 ಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು” ಎಂದು ದೆಹಲಿ ಏಮ್ಸ್‌ ಬುಲೆಟಿನ್ ಹೇಳಿದೆ. ಮನಮೋಹನ್ ಸಿಂಗ್ ನಿಧನ

ಆಗಿನ ಪ್ರಧಾನಿ ಪಿವಿ ನರಸಿಂಹರಾವ್ ಅವರ ಅಡಿಯಲ್ಲಿ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ವರು, 1991 ರಲ್ಲಿ ಭಾರತವನ್ನು ದಿವಾಳಿತನದ ಅಂಚಿನಿಂದ ಹೊರತಂದು ಆರ್ಥಿಕ ಉದಾರೀಕರಣದ ಯುಗಕ್ಕೆ ನಾಂದಿ ಹಾಡಿದ್ದರು. ಈ ಸುಧಾರಣೆಗಳು ಭಾರತದ ಆರ್ಥಿಕ ಪಥದ ಹಾದಿಯನ್ನು ಬದಲಿಸಿವೆ ಎಂದು ವ್ಯಾಪಕವಾಗಿ ನಂಬಲಾಗಿದೆ. ಜೊತೆಗೆ ಗಂಭೀರ ಟೀಕೆಗಳೂ ವ್ಯಕ್ತವಾಗಿದೆ.

ಕರ್ನಾಟಕದ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಅಲ್ಲಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಅವರ ಸಾವು ಖಚಿತವಾಗುತ್ತಿದ್ದಂತೆಯೇ ನಾಯಕರನ್ನು ದೆಹಲಿಗೆ ದೌಡಾಯಿಸಿದರು.

ಇದನ್ನೂ ಓದಿ: ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...