Homeಮುಖಪುಟಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

ಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

- Advertisement -
- Advertisement -

ನವದೆಹಲಿಯಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ಏಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರನ್ನು ನೋಡಲು ಬಂದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯ ಅವರ ವರ್ತನೆಗೆ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಿಂಗ್‌ ಅವರ ಆರೋಗ್ಯ ವಿಚಾರಿಸಲು ಗುರುವಾರ ಏಮ್ಸ್‌‌ಗೆ ಬಂದಿದ್ದ ಮಾಂಡವಿಯ ಅವರು ಕುಟುಂಬದ ಅನುಮತಿಗೆ ವಿರುದ್ಧವಾಗಿ ಫೋಟೋಗ್ರಾಫರ್‌‌ನನ್ನು ಕೊಠಡಿಯ ಒಳಗೆ ಕರೆದುಕೊಂಡು ಹೋದರು” ಎಂದು ದಮನ್‌‌ ಹೇಳಿದ್ದಾರೆ.

ದಮನ್‌ ಅವರು ‘ದಿಪ್ರಿಂಟ್‌’ ಜಾಲತಾಣಕ್ಕೆ ಹೇಳಿಕೆ ನೀಡಿದ್ದು, “ಸಚಿವರೊಂದಿಗೆ ಫೋಟೋಗ್ರಾಫರ್‌‌ ಕೂಡ ಕೊಠಡಿಯೊಳಗೆ ಪ್ರವೇಶಿಸಿದ್ದರಿಂದ ನಮ್ಮ ತಾಯಿ ಬೇಸರಗೊಂಡಿದ್ದರು. ಕೊಠಡಿಯನ್ನು ಬಿಟ್ಟು ಹೊರಹೋಗುವಂತೆ ಕೇಳಿಕೊಂಡರೂ ನಮ್ಮ ತಾಯಿಯ ಕೋರಿಕೆಯನ್ನು ಅವರು ಸ್ವೀಕರಿಸಲೇ ಇಲ್ಲ” ಎಂದಿದ್ದಾರೆ.

ಡಾ.ಮನಮೋಹನ್‌ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌.

“ಆಕೆ ತುಂಬಾ ನೊಂದುಕೊಂಡಿದ್ದಾಳೆ. ಅತ್ಯಂತ ಕಠಿಣ ಸಂದರ್ಭದಲ್ಲಿ ನಮ್ಮ ಪೋಷಕರಿದ್ದಾರೆ. ಅವರು ಹಿರಿಯ ಜೀವಗಳು. ಮೃಗಾಲಯದಲ್ಲಿರುವ ಪ್ರಾಣಿಗಳಲ್ಲ” ಎಂದು ದಮನ್‌ ಹೇಳಿಕೆ ನೀಡಿದ್ದಾರೆ.

ಮಾಂಡವಿಯ ಅವರ ಪ್ರತಿಕ್ರಿಯೆಗೆ ವಾಟ್ಸ್‌ಆಪ್‌, ಇಮೇಲ್‌ ಮೂಲಕ ಸಂಪರ್ಕಿಸಲು ಪ್ರಯತ್ನಿಸಿರುವುದಾಗಿ ದಿಪ್ರಿಂಟ್‌‌ ಹೇಳಿದ್ದು, “ಈ ಸುದ್ದಿ ಪ್ರಕಟವಾಗುವವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದೆ.

“ನಮ್ಮ ತಂದೆಯು ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಅವರ ರೋಗ ನಿರೋಧಕಶಕ್ತಿಯೂ ಕುಂದಿದೆ. ಹೀಗಾಗಿ ಅವರನ್ನು ಭೇಟಿ ಮಾಡಲು ಯಾರಿಗೂ ನಮ್ಮ ಪೋಷಕರು ಅವಕಾಶ ನೀಡುತ್ತಿಲ್ಲ” ಎಂದು ದಮನ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿದ್ದಾಗ ಏಪ್ರಿಲ್‌ ತಿಂಗಳಲ್ಲಿ ಡಾ.ಸಿಂಗ್‌ ಸೋಂಕಿಗೆ ಒಳಗಾಗಿ, ಬಳಿಕ ಚೇತರಿಸಿಕೊಂಡಿದ್ದರು.

“ಆರೋಗ್ಯ ಸಚಿವರು ಭೇಟಿ ನೀಡಿ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ್ದು ಸ್ವಾಗತಾರ್ಹ ಸಂಗತಿ” ಎಂದಿರುವ ದಮನ್, “ಆ ಸಮಯದಲ್ಲಿ ನನ್ನ ಹೆತ್ತವರು ಛಾಯಾಚಿತ್ರ ತೆಗೆಯುವ ಸ್ಥಿತಿಯಲ್ಲಿರಲಿಲ್ಲ” ಎಂದೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ( Manmohan Singh ) ಅವರಿಗೆ ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸುಧಾರಿಸಲೆಂದು ಹಲವು ರಾಜಕೀಯ ನಾಯಕರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಢ: ಭಕ್ತರ ಮೇಲೆ ಹರಿದ ಕಾರು, 4 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುರ್ಬಲ ವ್ಯಕ್ತಿತ್ವ ಮತ್ತು ಹೀನ ಪ್ರೊಪಗ್ಯಾಂಡ ಆಸೆ ಇರುವವರು ಮಾತ್ರ ಆಸ್ಪತ್ರೆಗೆ ಬಂದು ಹಾಗೆ ಮಾಡಬಹುದು. ನಮ್ಮ ಜನರು ಇಂತಹವರಿಗೂ ಅಧಿಕಾರ ಕೊಡುತ್ತಿರುವುದು ಇನ್ನೂ ಹೆಚ್ಚಿನ ಸಾರ್ವಜನಿಕ ಕೆಡುಕಿಗೆ ಕಾರಣವಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...