Homeಮುಖಪುಟಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

ಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

- Advertisement -
- Advertisement -

ನವದೆಹಲಿಯಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ಏಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರನ್ನು ನೋಡಲು ಬಂದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯ ಅವರ ವರ್ತನೆಗೆ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಿಂಗ್‌ ಅವರ ಆರೋಗ್ಯ ವಿಚಾರಿಸಲು ಗುರುವಾರ ಏಮ್ಸ್‌‌ಗೆ ಬಂದಿದ್ದ ಮಾಂಡವಿಯ ಅವರು ಕುಟುಂಬದ ಅನುಮತಿಗೆ ವಿರುದ್ಧವಾಗಿ ಫೋಟೋಗ್ರಾಫರ್‌‌ನನ್ನು ಕೊಠಡಿಯ ಒಳಗೆ ಕರೆದುಕೊಂಡು ಹೋದರು” ಎಂದು ದಮನ್‌‌ ಹೇಳಿದ್ದಾರೆ.

ದಮನ್‌ ಅವರು ‘ದಿಪ್ರಿಂಟ್‌’ ಜಾಲತಾಣಕ್ಕೆ ಹೇಳಿಕೆ ನೀಡಿದ್ದು, “ಸಚಿವರೊಂದಿಗೆ ಫೋಟೋಗ್ರಾಫರ್‌‌ ಕೂಡ ಕೊಠಡಿಯೊಳಗೆ ಪ್ರವೇಶಿಸಿದ್ದರಿಂದ ನಮ್ಮ ತಾಯಿ ಬೇಸರಗೊಂಡಿದ್ದರು. ಕೊಠಡಿಯನ್ನು ಬಿಟ್ಟು ಹೊರಹೋಗುವಂತೆ ಕೇಳಿಕೊಂಡರೂ ನಮ್ಮ ತಾಯಿಯ ಕೋರಿಕೆಯನ್ನು ಅವರು ಸ್ವೀಕರಿಸಲೇ ಇಲ್ಲ” ಎಂದಿದ್ದಾರೆ.

ಡಾ.ಮನಮೋಹನ್‌ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌.

“ಆಕೆ ತುಂಬಾ ನೊಂದುಕೊಂಡಿದ್ದಾಳೆ. ಅತ್ಯಂತ ಕಠಿಣ ಸಂದರ್ಭದಲ್ಲಿ ನಮ್ಮ ಪೋಷಕರಿದ್ದಾರೆ. ಅವರು ಹಿರಿಯ ಜೀವಗಳು. ಮೃಗಾಲಯದಲ್ಲಿರುವ ಪ್ರಾಣಿಗಳಲ್ಲ” ಎಂದು ದಮನ್‌ ಹೇಳಿಕೆ ನೀಡಿದ್ದಾರೆ.

ಮಾಂಡವಿಯ ಅವರ ಪ್ರತಿಕ್ರಿಯೆಗೆ ವಾಟ್ಸ್‌ಆಪ್‌, ಇಮೇಲ್‌ ಮೂಲಕ ಸಂಪರ್ಕಿಸಲು ಪ್ರಯತ್ನಿಸಿರುವುದಾಗಿ ದಿಪ್ರಿಂಟ್‌‌ ಹೇಳಿದ್ದು, “ಈ ಸುದ್ದಿ ಪ್ರಕಟವಾಗುವವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದೆ.

“ನಮ್ಮ ತಂದೆಯು ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಅವರ ರೋಗ ನಿರೋಧಕಶಕ್ತಿಯೂ ಕುಂದಿದೆ. ಹೀಗಾಗಿ ಅವರನ್ನು ಭೇಟಿ ಮಾಡಲು ಯಾರಿಗೂ ನಮ್ಮ ಪೋಷಕರು ಅವಕಾಶ ನೀಡುತ್ತಿಲ್ಲ” ಎಂದು ದಮನ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿದ್ದಾಗ ಏಪ್ರಿಲ್‌ ತಿಂಗಳಲ್ಲಿ ಡಾ.ಸಿಂಗ್‌ ಸೋಂಕಿಗೆ ಒಳಗಾಗಿ, ಬಳಿಕ ಚೇತರಿಸಿಕೊಂಡಿದ್ದರು.

“ಆರೋಗ್ಯ ಸಚಿವರು ಭೇಟಿ ನೀಡಿ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ್ದು ಸ್ವಾಗತಾರ್ಹ ಸಂಗತಿ” ಎಂದಿರುವ ದಮನ್, “ಆ ಸಮಯದಲ್ಲಿ ನನ್ನ ಹೆತ್ತವರು ಛಾಯಾಚಿತ್ರ ತೆಗೆಯುವ ಸ್ಥಿತಿಯಲ್ಲಿರಲಿಲ್ಲ” ಎಂದೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ( Manmohan Singh ) ಅವರಿಗೆ ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸುಧಾರಿಸಲೆಂದು ಹಲವು ರಾಜಕೀಯ ನಾಯಕರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಢ: ಭಕ್ತರ ಮೇಲೆ ಹರಿದ ಕಾರು, 4 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುರ್ಬಲ ವ್ಯಕ್ತಿತ್ವ ಮತ್ತು ಹೀನ ಪ್ರೊಪಗ್ಯಾಂಡ ಆಸೆ ಇರುವವರು ಮಾತ್ರ ಆಸ್ಪತ್ರೆಗೆ ಬಂದು ಹಾಗೆ ಮಾಡಬಹುದು. ನಮ್ಮ ಜನರು ಇಂತಹವರಿಗೂ ಅಧಿಕಾರ ಕೊಡುತ್ತಿರುವುದು ಇನ್ನೂ ಹೆಚ್ಚಿನ ಸಾರ್ವಜನಿಕ ಕೆಡುಕಿಗೆ ಕಾರಣವಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...