Homeಮುಖಪುಟಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

ಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

- Advertisement -
- Advertisement -

ನವದೆಹಲಿಯಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ಏಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರನ್ನು ನೋಡಲು ಬಂದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯ ಅವರ ವರ್ತನೆಗೆ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಿಂಗ್‌ ಅವರ ಆರೋಗ್ಯ ವಿಚಾರಿಸಲು ಗುರುವಾರ ಏಮ್ಸ್‌‌ಗೆ ಬಂದಿದ್ದ ಮಾಂಡವಿಯ ಅವರು ಕುಟುಂಬದ ಅನುಮತಿಗೆ ವಿರುದ್ಧವಾಗಿ ಫೋಟೋಗ್ರಾಫರ್‌‌ನನ್ನು ಕೊಠಡಿಯ ಒಳಗೆ ಕರೆದುಕೊಂಡು ಹೋದರು” ಎಂದು ದಮನ್‌‌ ಹೇಳಿದ್ದಾರೆ.

ದಮನ್‌ ಅವರು ‘ದಿಪ್ರಿಂಟ್‌’ ಜಾಲತಾಣಕ್ಕೆ ಹೇಳಿಕೆ ನೀಡಿದ್ದು, “ಸಚಿವರೊಂದಿಗೆ ಫೋಟೋಗ್ರಾಫರ್‌‌ ಕೂಡ ಕೊಠಡಿಯೊಳಗೆ ಪ್ರವೇಶಿಸಿದ್ದರಿಂದ ನಮ್ಮ ತಾಯಿ ಬೇಸರಗೊಂಡಿದ್ದರು. ಕೊಠಡಿಯನ್ನು ಬಿಟ್ಟು ಹೊರಹೋಗುವಂತೆ ಕೇಳಿಕೊಂಡರೂ ನಮ್ಮ ತಾಯಿಯ ಕೋರಿಕೆಯನ್ನು ಅವರು ಸ್ವೀಕರಿಸಲೇ ಇಲ್ಲ” ಎಂದಿದ್ದಾರೆ.

ಡಾ.ಮನಮೋಹನ್‌ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌.

“ಆಕೆ ತುಂಬಾ ನೊಂದುಕೊಂಡಿದ್ದಾಳೆ. ಅತ್ಯಂತ ಕಠಿಣ ಸಂದರ್ಭದಲ್ಲಿ ನಮ್ಮ ಪೋಷಕರಿದ್ದಾರೆ. ಅವರು ಹಿರಿಯ ಜೀವಗಳು. ಮೃಗಾಲಯದಲ್ಲಿರುವ ಪ್ರಾಣಿಗಳಲ್ಲ” ಎಂದು ದಮನ್‌ ಹೇಳಿಕೆ ನೀಡಿದ್ದಾರೆ.

ಮಾಂಡವಿಯ ಅವರ ಪ್ರತಿಕ್ರಿಯೆಗೆ ವಾಟ್ಸ್‌ಆಪ್‌, ಇಮೇಲ್‌ ಮೂಲಕ ಸಂಪರ್ಕಿಸಲು ಪ್ರಯತ್ನಿಸಿರುವುದಾಗಿ ದಿಪ್ರಿಂಟ್‌‌ ಹೇಳಿದ್ದು, “ಈ ಸುದ್ದಿ ಪ್ರಕಟವಾಗುವವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದೆ.

“ನಮ್ಮ ತಂದೆಯು ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಅವರ ರೋಗ ನಿರೋಧಕಶಕ್ತಿಯೂ ಕುಂದಿದೆ. ಹೀಗಾಗಿ ಅವರನ್ನು ಭೇಟಿ ಮಾಡಲು ಯಾರಿಗೂ ನಮ್ಮ ಪೋಷಕರು ಅವಕಾಶ ನೀಡುತ್ತಿಲ್ಲ” ಎಂದು ದಮನ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿದ್ದಾಗ ಏಪ್ರಿಲ್‌ ತಿಂಗಳಲ್ಲಿ ಡಾ.ಸಿಂಗ್‌ ಸೋಂಕಿಗೆ ಒಳಗಾಗಿ, ಬಳಿಕ ಚೇತರಿಸಿಕೊಂಡಿದ್ದರು.

“ಆರೋಗ್ಯ ಸಚಿವರು ಭೇಟಿ ನೀಡಿ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ್ದು ಸ್ವಾಗತಾರ್ಹ ಸಂಗತಿ” ಎಂದಿರುವ ದಮನ್, “ಆ ಸಮಯದಲ್ಲಿ ನನ್ನ ಹೆತ್ತವರು ಛಾಯಾಚಿತ್ರ ತೆಗೆಯುವ ಸ್ಥಿತಿಯಲ್ಲಿರಲಿಲ್ಲ” ಎಂದೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ( Manmohan Singh ) ಅವರಿಗೆ ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸುಧಾರಿಸಲೆಂದು ಹಲವು ರಾಜಕೀಯ ನಾಯಕರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಢ: ಭಕ್ತರ ಮೇಲೆ ಹರಿದ ಕಾರು, 4 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುರ್ಬಲ ವ್ಯಕ್ತಿತ್ವ ಮತ್ತು ಹೀನ ಪ್ರೊಪಗ್ಯಾಂಡ ಆಸೆ ಇರುವವರು ಮಾತ್ರ ಆಸ್ಪತ್ರೆಗೆ ಬಂದು ಹಾಗೆ ಮಾಡಬಹುದು. ನಮ್ಮ ಜನರು ಇಂತಹವರಿಗೂ ಅಧಿಕಾರ ಕೊಡುತ್ತಿರುವುದು ಇನ್ನೂ ಹೆಚ್ಚಿನ ಸಾರ್ವಜನಿಕ ಕೆಡುಕಿಗೆ ಕಾರಣವಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...