Homeಕರ್ನಾಟಕಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು, 2013-18 ನಡುವೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂಬುವುದಾಗಿ ಶ್ಲಾಘಿಸಿದ್ದರು ಎಂದು ಸ್ಮರಿಸಿದರು.

ಬೆಳಗಾವಿಯಲ್ಲಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು, ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ ನರಸಿಂಹರಾವ್ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕಾಗಿ ಸಿದ್ದಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ ಸಭೆ ನಡೆಯಿತು. ಸಿಂಗ್ ನಿಧನ ಹಿನ್ನೆಲೆ ಸಮಾವೇಶ ರದ್ದಾಗಿದೆ

‘ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್‌ರ ಹೆಜ್ಜೆ ಗುರುತು’

2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು, ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಮನಮೋಹನ್ ಸಿಂಗ್ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕೊಂಡಾಡಿದರು.

‘ಮನಮೋಹನ್ ಸಿಂಗ್ ನಿಧನದಿಂದ ದೇಶಕ್ಕೆ ನಷ್ಟ’

ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಮನಮೋಹನ್ ಸಿಂಗ್ ಅವರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದರು.

‘ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ’

ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದಲ್ಲಿ ಬಡತನ ಇದ್ದಿದ್ದರಿಂದ ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಅದನ್ನು ಐದು ಕೆಜಿಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟ ನಿವಾರಣೆಗೆ ಪೂರಕ ಯೋಜನೆಗಳನ್ನು ಮನಮೋಹನ್ ಸಿಂಗ್ ಜಾರಿಗೊಳಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

‘ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ’

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಭೇಟಿಯಾಗಿದ್ದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ರಾಜ್ಯದ ಆರ್ಥಿಕತೆ ಸ್ಥಿತಿ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದರು. ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...