Homeಕರ್ನಾಟಕಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು, 2013-18 ನಡುವೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂಬುವುದಾಗಿ ಶ್ಲಾಘಿಸಿದ್ದರು ಎಂದು ಸ್ಮರಿಸಿದರು.

ಬೆಳಗಾವಿಯಲ್ಲಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು, ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ ನರಸಿಂಹರಾವ್ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕಾಗಿ ಸಿದ್ದಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ ಸಭೆ ನಡೆಯಿತು. ಸಿಂಗ್ ನಿಧನ ಹಿನ್ನೆಲೆ ಸಮಾವೇಶ ರದ್ದಾಗಿದೆ

‘ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್‌ರ ಹೆಜ್ಜೆ ಗುರುತು’

2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು, ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಮನಮೋಹನ್ ಸಿಂಗ್ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕೊಂಡಾಡಿದರು.

‘ಮನಮೋಹನ್ ಸಿಂಗ್ ನಿಧನದಿಂದ ದೇಶಕ್ಕೆ ನಷ್ಟ’

ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಮನಮೋಹನ್ ಸಿಂಗ್ ಅವರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದರು.

‘ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ’

ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದಲ್ಲಿ ಬಡತನ ಇದ್ದಿದ್ದರಿಂದ ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಅದನ್ನು ಐದು ಕೆಜಿಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟ ನಿವಾರಣೆಗೆ ಪೂರಕ ಯೋಜನೆಗಳನ್ನು ಮನಮೋಹನ್ ಸಿಂಗ್ ಜಾರಿಗೊಳಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

‘ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ’

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಭೇಟಿಯಾಗಿದ್ದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ರಾಜ್ಯದ ಆರ್ಥಿಕತೆ ಸ್ಥಿತಿ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದರು. ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...