Homeಮುಖಪುಟಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮರಾಠ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಜಲ್ನಾ ಮೂಲದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರ ಬೆಳಗ್ಗೆ ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ಹೆಚ್ಚಳಕ್ಕೆ ಜಾರಂಗೆ ಪಾಟೀಲ್ ಅವರು ಮಹಾರಾಷ್ಟ್ರ ಸರ್ಕಾರಕ್ಕೆ 40 ದಿನಗಳ ಗಡುವು ನೀಡಿದ್ದರು. ಗಡುವು ಮಂಗಳವಾರ ಮುಕ್ತಾಯಗೊಂಡಿದೆ.

ಮನೋಜ್ ಜಾರಂಗೆ ಪಾಟೀಲ್ ಗ್ರಾಮದಲ್ಲಿ ಆ.29ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಸೆ.18 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಗ್ರಾಮಕ್ಕೆ ಬಂದು ಮರಾಠ ಮೀಸಲಾತಿ ಬಗ್ಗೆ ಭರವಸೆ ನೀಡಿದ ಬಳಿಕ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದರು.

ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಬಗ್ಗೆ ಮಾತನಾಡಿದ ಜಾರಂಗೆ ಪಾಟೀಲ್, ಈ ಬಾರಿ ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ. ನಾನು ನೀರು ಕುಡಿಯುವುದಿಲ್ಲ ಅಥವಾ ಯಾವುದೇ ಆಹಾರವನ್ನು ಸೇವಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ. ಆದರೆ ಅದು ಆಕ್ರಮಣಕಾರಿಯಾಗಿರುವುದಿಲ್ಲ. ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳು ನಡೆಯಲಿದೆ. ಕ್ಯಾಂಡಲ್ ಲೈಟ್ ಮೆರವಣಿಗೆ ಆಯೋಜಿಸಲಾಗುವುದು. ಮರಾಠರಿಗೆ ಮೀಸಲಾತಿ ನೀಡುವವರೆಗೆ ಎಲ್ಲ ಪಕ್ಷಗಳ ರಾಜಕಾರಣಿಗಳು ನಮ್ಮ ಹಳ್ಳಿಗಳಿಗೆ ಬರಬೇಡಿ ಎಂದು ನಾವು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ ಗಿರೀಶ್ ಮಹಾಜನ್, ಜಾರಂಗೆ ಪಾಟೀಲ್‌ಗೆ  ಸಂಪರ್ಕಿಸಿ ಮತ್ತೊಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳದಂತೆ ಒತ್ತಾಯಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಇದಲ್ಲದೆ ಅವರ ನಾಲ್ಕೈದು ಬೇಡಿಕೆಗಳನ್ನು ತಕ್ಷಣ ಈಡೇರಿಸಲಾಗುವುದು ಎಂದು ಮಹಾಜನ್ ಹೇಳಿದ್ದಾರೆ.

ಪಾಟೀಲ್‌ ಸರಕಾರಕ್ಕೆ ಸಮಯಾವಕಾಶ ನೀಡಲು ನಿರಾಕರಿಸಿದ್ದು, ಮೀಸಲಾತಿ ಘೋಷಣೆ ಬಳಿಕವೇ ಉಪವಾಸ ಸತ್ಯಾಗ್ರಹ ಕೈಬಿಡುವುದಾಗಿ ಹೇಳಿದ್ದಾರೆ. ಮೀಸಲಾತಿ ಘೋಷಣೆಗೆ ಏನು ತೊಂದರೆ? ಸರ್ಕಾರ ಆರಂಭದಲ್ಲಿ 15 ದಿನಗಳ ಕಾಲಾವಕಾಶ ಕೇಳಿತ್ತು. ನಂತರ 30 ದಿನಗಳು ಆಯ್ತು. ಆದರೆ ನಾವು ಅವರಿಗೆ 40 ದಿನಗಳ ಕಾಲಾವಕಾಶ ನೀಡಿದ್ದೇವೆ ಆದರೆ ಏನೂ ಮಾಡಲಾಗಿಲ್ಲ ಎಂದು ಪಾಟೀಲ್ ಹೇಳಿದ್ದಾರೆ.

ಸೆ.1ರಂದು ಜಲ್ನಾದ ಅಂತರವಾಲಿ ಗ್ರಾಮದಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದ್ದರು. ಇದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ವಿರೋಧ ಪಕ್ಷದ ನಾಯಕರು ಬಲಪ್ರಯೋಗ ಮಾಡಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...