Homeಮುಖಪುಟಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮರಾಠ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಜಲ್ನಾ ಮೂಲದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರ ಬೆಳಗ್ಗೆ ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ಹೆಚ್ಚಳಕ್ಕೆ ಜಾರಂಗೆ ಪಾಟೀಲ್ ಅವರು ಮಹಾರಾಷ್ಟ್ರ ಸರ್ಕಾರಕ್ಕೆ 40 ದಿನಗಳ ಗಡುವು ನೀಡಿದ್ದರು. ಗಡುವು ಮಂಗಳವಾರ ಮುಕ್ತಾಯಗೊಂಡಿದೆ.

ಮನೋಜ್ ಜಾರಂಗೆ ಪಾಟೀಲ್ ಗ್ರಾಮದಲ್ಲಿ ಆ.29ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಸೆ.18 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಗ್ರಾಮಕ್ಕೆ ಬಂದು ಮರಾಠ ಮೀಸಲಾತಿ ಬಗ್ಗೆ ಭರವಸೆ ನೀಡಿದ ಬಳಿಕ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದರು.

ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಬಗ್ಗೆ ಮಾತನಾಡಿದ ಜಾರಂಗೆ ಪಾಟೀಲ್, ಈ ಬಾರಿ ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ. ನಾನು ನೀರು ಕುಡಿಯುವುದಿಲ್ಲ ಅಥವಾ ಯಾವುದೇ ಆಹಾರವನ್ನು ಸೇವಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ. ಆದರೆ ಅದು ಆಕ್ರಮಣಕಾರಿಯಾಗಿರುವುದಿಲ್ಲ. ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳು ನಡೆಯಲಿದೆ. ಕ್ಯಾಂಡಲ್ ಲೈಟ್ ಮೆರವಣಿಗೆ ಆಯೋಜಿಸಲಾಗುವುದು. ಮರಾಠರಿಗೆ ಮೀಸಲಾತಿ ನೀಡುವವರೆಗೆ ಎಲ್ಲ ಪಕ್ಷಗಳ ರಾಜಕಾರಣಿಗಳು ನಮ್ಮ ಹಳ್ಳಿಗಳಿಗೆ ಬರಬೇಡಿ ಎಂದು ನಾವು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ ಗಿರೀಶ್ ಮಹಾಜನ್, ಜಾರಂಗೆ ಪಾಟೀಲ್‌ಗೆ  ಸಂಪರ್ಕಿಸಿ ಮತ್ತೊಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳದಂತೆ ಒತ್ತಾಯಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಇದಲ್ಲದೆ ಅವರ ನಾಲ್ಕೈದು ಬೇಡಿಕೆಗಳನ್ನು ತಕ್ಷಣ ಈಡೇರಿಸಲಾಗುವುದು ಎಂದು ಮಹಾಜನ್ ಹೇಳಿದ್ದಾರೆ.

ಪಾಟೀಲ್‌ ಸರಕಾರಕ್ಕೆ ಸಮಯಾವಕಾಶ ನೀಡಲು ನಿರಾಕರಿಸಿದ್ದು, ಮೀಸಲಾತಿ ಘೋಷಣೆ ಬಳಿಕವೇ ಉಪವಾಸ ಸತ್ಯಾಗ್ರಹ ಕೈಬಿಡುವುದಾಗಿ ಹೇಳಿದ್ದಾರೆ. ಮೀಸಲಾತಿ ಘೋಷಣೆಗೆ ಏನು ತೊಂದರೆ? ಸರ್ಕಾರ ಆರಂಭದಲ್ಲಿ 15 ದಿನಗಳ ಕಾಲಾವಕಾಶ ಕೇಳಿತ್ತು. ನಂತರ 30 ದಿನಗಳು ಆಯ್ತು. ಆದರೆ ನಾವು ಅವರಿಗೆ 40 ದಿನಗಳ ಕಾಲಾವಕಾಶ ನೀಡಿದ್ದೇವೆ ಆದರೆ ಏನೂ ಮಾಡಲಾಗಿಲ್ಲ ಎಂದು ಪಾಟೀಲ್ ಹೇಳಿದ್ದಾರೆ.

ಸೆ.1ರಂದು ಜಲ್ನಾದ ಅಂತರವಾಲಿ ಗ್ರಾಮದಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದ್ದರು. ಇದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ವಿರೋಧ ಪಕ್ಷದ ನಾಯಕರು ಬಲಪ್ರಯೋಗ ಮಾಡಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...