Homeಮುಖಪುಟರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಭಾರತವು ಸಿಕ್ಕಿಕೊಂಡ ಸಂದರ್ಭದಲ್ಲಿ ಗೋದಿ ಮಾಧ್ಯಮಗಳು ಇನ್ನೂ ಹಿಂದೂ ಮುಸ್ಲಿಂ ಎನ್ನುತ್ತ ಆಳುವವರ ಅಭಿಲಾಷೆಗಳನ್ನು ಪೂರೈಸುತ್ತಿವೆ. ನಮ್ಮ ಸಿನಿಕತೆಯ ಹೊರತಾಗಿಯೂ, ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುವ ಕೆಲವು ನಿದರ್ಶನಗಳು ಸಂಭವಿಸುತ್ತವೆ.

ರಾಜಸ್ಥಾನದ ಉದಯಪುರದ 32 ವರ್ಷದ ಅಕೀಲ್ ಮನ್ಸೂರಿ, ಪವಿತ್ರ ರಂಜಾನ್ ತಿಂಗಳ ತನ್ನ ಮೊದಲ ರೋಜಾವನ್ನು ಮುರಿದು ಇಬ್ಬರು ಹಿಂದೂ ಮಹಿಳೆಯರಿಗೆ ಪ್ಲಾಸ್ಮಾ ದಾನ ಮಾಡಿ ಅವರ ಜೀವ ಉಳಿಸಿದ್ದಾರೆ. ಮನ್ಸೂರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊರೋನಾದಿಂದ ಚೇತರಿಸಿಕೊಂಡಿದ್ದರು.

ಸೋಶಿಯಲ್ ಮೀಡಿಯಾ ನೆಟ್‌ವರ್ಕ್‌ಗಳು ಮತ್ತು ರಕ್ತದಾನ ಗುಂಪುಗಳ ಮೂಲಕ, ಕೊರೋನಾ ಸೋಂಕಿಗೆ ಒಳಗಾದ ಇಬ್ಬರು ಮಹಿಳೆಯರ ಬಗ್ಗೆ ಮನ್ಸೂರಿಗೆ ಗೊತ್ತಾಯಿತು. ಆ ಮಹಿಳೆಯರು ಆಮ್ಲಜನಕದ ಬೆಂಬಲದಲ್ಲಿದ್ದರು ಮತ್ತು ಅವರಿಗೆ ತುರ್ತಾಗಿ ಎ+ ಪ್ಲಾಸ್ಮಾ ಅಗತ್ಯವಿತ್ತು.
ಉದಯಪುರದ ಪೆಸಿಫಿಕ್ ಆಸ್ಪತ್ರೆಯ ವೈದ್ಯರು ಪ್ಲಾಸ್ಮಾ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರೂ ವ್ಯರ್ಥವಾಯಿತು. ಈ ಸಮಯದಲ್ಲಿಯೇ ರಕ್ತ ಯುವ ವಾಹಿನಿ (ಯುವ ರಕ್ತದಾನ ಗುಂಪು)ಗೆ ಸುದ್ದಿ ಸಿಕ್ಕಿತು. ಅಕೀಲ್ ಈ ಹಿಂದೆ 17 ಬಾರಿ ದಾನ ಮಾಡಿದ್ದರಿಂದ ಅವರನ್ನು ಸಂಪರ್ಕಿಸಿದರು. ಅಕೀಲ್ ಮನ್ಸೂರಿ ಅದೇ ರಕ್ತದ ಗುಂಪನ್ನು ಹೊಂದಿದ್ದರು.

“ಸಂದೇಶವನ್ನು ನೋಡಿದ ಕೂಡಲೇ ನಾನು ಆಸ್ಪತ್ರೆಗೆ ಧಾವಿಸಿ ನನ್ನ ಪ್ಲಾಸ್ಮಾ ದಾನಕ್ಕಾಗಿ ಸ್ವಯಂಪ್ರೇರಿತನಾಗಿ ಸಜ್ಜಾದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್ -19ನಿಂದ ಚೇತರಿಸಿಕೊಂಡ ನಂತರ ನಾನು ಈ ಹಿಂದೆ ಪ್ಲಾಸ್ಮಾ ದಾನ ಮಾಡಿದ್ದರಿಂದ, ಆ ಕಾರ್ಯವಿಧಾನ ನನಗೆ ತಿಳಿದಿತ್ತು” ಎಂದು ಮನ್ಸೂರಿ ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಸ್ಪತ್ರೆಯಲ್ಲಿಯೇ ಮನ್ಸೂರಿ ಉಪವಾಸ ಮುರಿಯಬೇಕಾಯಿತು. “ವೈದ್ಯರು ನನ್ನನ್ನು ತಯಾರಾಗಲು ಕೇಳಿದಾಗ, ಅವರು ನನ್ನನ್ನು ಏನಾದರೂ ತಿನ್ನಲು ಕೇಳಿದ್ದರು. ಅದಕ್ಕಾಗಿಯೇ ನಾನು ನನ್ನ ರೋಜಾವನ್ನು ಮುರಿಯಬೇಕಾಯಿತು ಮತ್ತು ಆಸ್ಪತ್ರೆಯವರಿಂದಲೇ ಅಲ್ಪ ಆಹಾರ ಸೇವಿಸಿ ನನ್ನ ರಕ್ತವನ್ನು ದಾನ ಮಾಡಿದೆ’ ಎನ್ನುತ್ತಾರೆ ಮನ್ಸೂರಿ. ಪ್ರಶಂಸೆಯ ಮಾತುಗಳು ಬಂದಾಗ ನಾನೇನೂ ಅಸಾಧಾರಣವಾದುದನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಕೀಲ್, ಖಾಲಿ ಹೊಟ್ಟೆಯಲ್ಲಿದ್ದರೆ ಪ್ಲಾಸ್ಮಾ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದರು. ಹಾಗಾಗಿ ನನ್ನ ರೋಜಾವನ್ನು ಮುರಿದು ಆಹಾರವನ್ನು ಸೇವಿಸಿದ ನಂತರ ಪ್ಲಾಸ್ಮಾವನ್ನು ದಾನ ಮಾಡಿದೆ ಎಂದಿದ್ದಾರೆ.

“ಇದು ಮನುಷ್ಯನಾಗಿ ನನ್ನ ಜವಾಬ್ದಾರಿಯಾಗಿದೆ ಮತ್ತು ರೋಜಾ ಮುರಿದಿದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ” ಎಂದು ಮನ್ಸೂರಿ ಹೇಳಿದರು, ಇಬ್ಬರು ಮಹಿಳೆಯರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮನ್ಸೂರಿ ಹೇಳಿದ್ದಾರೆ.

ಮನ್ಸೂರಿ ಪ್ರಕಾರ, ಅವರು ತಮ್ಮ ಜೀವನದಲ್ಲಿ 17 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡಾಗಿನಿಂದ, ಅವರು ತಮ್ಮ ಪ್ಲಾಸ್ಮಾವನ್ನು ಮೂರು ಬಾರಿ ದಾನ ಮಾಡಿದ್ದಾರೆ.


ಇದನ್ನೂ ಓದಿ: ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...