Homeಮುಖಪುಟರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಭಾರತವು ಸಿಕ್ಕಿಕೊಂಡ ಸಂದರ್ಭದಲ್ಲಿ ಗೋದಿ ಮಾಧ್ಯಮಗಳು ಇನ್ನೂ ಹಿಂದೂ ಮುಸ್ಲಿಂ ಎನ್ನುತ್ತ ಆಳುವವರ ಅಭಿಲಾಷೆಗಳನ್ನು ಪೂರೈಸುತ್ತಿವೆ. ನಮ್ಮ ಸಿನಿಕತೆಯ ಹೊರತಾಗಿಯೂ, ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುವ ಕೆಲವು ನಿದರ್ಶನಗಳು ಸಂಭವಿಸುತ್ತವೆ.

ರಾಜಸ್ಥಾನದ ಉದಯಪುರದ 32 ವರ್ಷದ ಅಕೀಲ್ ಮನ್ಸೂರಿ, ಪವಿತ್ರ ರಂಜಾನ್ ತಿಂಗಳ ತನ್ನ ಮೊದಲ ರೋಜಾವನ್ನು ಮುರಿದು ಇಬ್ಬರು ಹಿಂದೂ ಮಹಿಳೆಯರಿಗೆ ಪ್ಲಾಸ್ಮಾ ದಾನ ಮಾಡಿ ಅವರ ಜೀವ ಉಳಿಸಿದ್ದಾರೆ. ಮನ್ಸೂರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊರೋನಾದಿಂದ ಚೇತರಿಸಿಕೊಂಡಿದ್ದರು.

ಸೋಶಿಯಲ್ ಮೀಡಿಯಾ ನೆಟ್‌ವರ್ಕ್‌ಗಳು ಮತ್ತು ರಕ್ತದಾನ ಗುಂಪುಗಳ ಮೂಲಕ, ಕೊರೋನಾ ಸೋಂಕಿಗೆ ಒಳಗಾದ ಇಬ್ಬರು ಮಹಿಳೆಯರ ಬಗ್ಗೆ ಮನ್ಸೂರಿಗೆ ಗೊತ್ತಾಯಿತು. ಆ ಮಹಿಳೆಯರು ಆಮ್ಲಜನಕದ ಬೆಂಬಲದಲ್ಲಿದ್ದರು ಮತ್ತು ಅವರಿಗೆ ತುರ್ತಾಗಿ ಎ+ ಪ್ಲಾಸ್ಮಾ ಅಗತ್ಯವಿತ್ತು.
ಉದಯಪುರದ ಪೆಸಿಫಿಕ್ ಆಸ್ಪತ್ರೆಯ ವೈದ್ಯರು ಪ್ಲಾಸ್ಮಾ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರೂ ವ್ಯರ್ಥವಾಯಿತು. ಈ ಸಮಯದಲ್ಲಿಯೇ ರಕ್ತ ಯುವ ವಾಹಿನಿ (ಯುವ ರಕ್ತದಾನ ಗುಂಪು)ಗೆ ಸುದ್ದಿ ಸಿಕ್ಕಿತು. ಅಕೀಲ್ ಈ ಹಿಂದೆ 17 ಬಾರಿ ದಾನ ಮಾಡಿದ್ದರಿಂದ ಅವರನ್ನು ಸಂಪರ್ಕಿಸಿದರು. ಅಕೀಲ್ ಮನ್ಸೂರಿ ಅದೇ ರಕ್ತದ ಗುಂಪನ್ನು ಹೊಂದಿದ್ದರು.

“ಸಂದೇಶವನ್ನು ನೋಡಿದ ಕೂಡಲೇ ನಾನು ಆಸ್ಪತ್ರೆಗೆ ಧಾವಿಸಿ ನನ್ನ ಪ್ಲಾಸ್ಮಾ ದಾನಕ್ಕಾಗಿ ಸ್ವಯಂಪ್ರೇರಿತನಾಗಿ ಸಜ್ಜಾದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್ -19ನಿಂದ ಚೇತರಿಸಿಕೊಂಡ ನಂತರ ನಾನು ಈ ಹಿಂದೆ ಪ್ಲಾಸ್ಮಾ ದಾನ ಮಾಡಿದ್ದರಿಂದ, ಆ ಕಾರ್ಯವಿಧಾನ ನನಗೆ ತಿಳಿದಿತ್ತು” ಎಂದು ಮನ್ಸೂರಿ ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಸ್ಪತ್ರೆಯಲ್ಲಿಯೇ ಮನ್ಸೂರಿ ಉಪವಾಸ ಮುರಿಯಬೇಕಾಯಿತು. “ವೈದ್ಯರು ನನ್ನನ್ನು ತಯಾರಾಗಲು ಕೇಳಿದಾಗ, ಅವರು ನನ್ನನ್ನು ಏನಾದರೂ ತಿನ್ನಲು ಕೇಳಿದ್ದರು. ಅದಕ್ಕಾಗಿಯೇ ನಾನು ನನ್ನ ರೋಜಾವನ್ನು ಮುರಿಯಬೇಕಾಯಿತು ಮತ್ತು ಆಸ್ಪತ್ರೆಯವರಿಂದಲೇ ಅಲ್ಪ ಆಹಾರ ಸೇವಿಸಿ ನನ್ನ ರಕ್ತವನ್ನು ದಾನ ಮಾಡಿದೆ’ ಎನ್ನುತ್ತಾರೆ ಮನ್ಸೂರಿ. ಪ್ರಶಂಸೆಯ ಮಾತುಗಳು ಬಂದಾಗ ನಾನೇನೂ ಅಸಾಧಾರಣವಾದುದನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಕೀಲ್, ಖಾಲಿ ಹೊಟ್ಟೆಯಲ್ಲಿದ್ದರೆ ಪ್ಲಾಸ್ಮಾ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದರು. ಹಾಗಾಗಿ ನನ್ನ ರೋಜಾವನ್ನು ಮುರಿದು ಆಹಾರವನ್ನು ಸೇವಿಸಿದ ನಂತರ ಪ್ಲಾಸ್ಮಾವನ್ನು ದಾನ ಮಾಡಿದೆ ಎಂದಿದ್ದಾರೆ.

“ಇದು ಮನುಷ್ಯನಾಗಿ ನನ್ನ ಜವಾಬ್ದಾರಿಯಾಗಿದೆ ಮತ್ತು ರೋಜಾ ಮುರಿದಿದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ” ಎಂದು ಮನ್ಸೂರಿ ಹೇಳಿದರು, ಇಬ್ಬರು ಮಹಿಳೆಯರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮನ್ಸೂರಿ ಹೇಳಿದ್ದಾರೆ.

ಮನ್ಸೂರಿ ಪ್ರಕಾರ, ಅವರು ತಮ್ಮ ಜೀವನದಲ್ಲಿ 17 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡಾಗಿನಿಂದ, ಅವರು ತಮ್ಮ ಪ್ಲಾಸ್ಮಾವನ್ನು ಮೂರು ಬಾರಿ ದಾನ ಮಾಡಿದ್ದಾರೆ.


ಇದನ್ನೂ ಓದಿ: ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...