Homeಮುಖಪುಟರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಭಾರತವು ಸಿಕ್ಕಿಕೊಂಡ ಸಂದರ್ಭದಲ್ಲಿ ಗೋದಿ ಮಾಧ್ಯಮಗಳು ಇನ್ನೂ ಹಿಂದೂ ಮುಸ್ಲಿಂ ಎನ್ನುತ್ತ ಆಳುವವರ ಅಭಿಲಾಷೆಗಳನ್ನು ಪೂರೈಸುತ್ತಿವೆ. ನಮ್ಮ ಸಿನಿಕತೆಯ ಹೊರತಾಗಿಯೂ, ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುವ ಕೆಲವು ನಿದರ್ಶನಗಳು ಸಂಭವಿಸುತ್ತವೆ.

ರಾಜಸ್ಥಾನದ ಉದಯಪುರದ 32 ವರ್ಷದ ಅಕೀಲ್ ಮನ್ಸೂರಿ, ಪವಿತ್ರ ರಂಜಾನ್ ತಿಂಗಳ ತನ್ನ ಮೊದಲ ರೋಜಾವನ್ನು ಮುರಿದು ಇಬ್ಬರು ಹಿಂದೂ ಮಹಿಳೆಯರಿಗೆ ಪ್ಲಾಸ್ಮಾ ದಾನ ಮಾಡಿ ಅವರ ಜೀವ ಉಳಿಸಿದ್ದಾರೆ. ಮನ್ಸೂರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊರೋನಾದಿಂದ ಚೇತರಿಸಿಕೊಂಡಿದ್ದರು.

ಸೋಶಿಯಲ್ ಮೀಡಿಯಾ ನೆಟ್‌ವರ್ಕ್‌ಗಳು ಮತ್ತು ರಕ್ತದಾನ ಗುಂಪುಗಳ ಮೂಲಕ, ಕೊರೋನಾ ಸೋಂಕಿಗೆ ಒಳಗಾದ ಇಬ್ಬರು ಮಹಿಳೆಯರ ಬಗ್ಗೆ ಮನ್ಸೂರಿಗೆ ಗೊತ್ತಾಯಿತು. ಆ ಮಹಿಳೆಯರು ಆಮ್ಲಜನಕದ ಬೆಂಬಲದಲ್ಲಿದ್ದರು ಮತ್ತು ಅವರಿಗೆ ತುರ್ತಾಗಿ ಎ+ ಪ್ಲಾಸ್ಮಾ ಅಗತ್ಯವಿತ್ತು.
ಉದಯಪುರದ ಪೆಸಿಫಿಕ್ ಆಸ್ಪತ್ರೆಯ ವೈದ್ಯರು ಪ್ಲಾಸ್ಮಾ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರೂ ವ್ಯರ್ಥವಾಯಿತು. ಈ ಸಮಯದಲ್ಲಿಯೇ ರಕ್ತ ಯುವ ವಾಹಿನಿ (ಯುವ ರಕ್ತದಾನ ಗುಂಪು)ಗೆ ಸುದ್ದಿ ಸಿಕ್ಕಿತು. ಅಕೀಲ್ ಈ ಹಿಂದೆ 17 ಬಾರಿ ದಾನ ಮಾಡಿದ್ದರಿಂದ ಅವರನ್ನು ಸಂಪರ್ಕಿಸಿದರು. ಅಕೀಲ್ ಮನ್ಸೂರಿ ಅದೇ ರಕ್ತದ ಗುಂಪನ್ನು ಹೊಂದಿದ್ದರು.

“ಸಂದೇಶವನ್ನು ನೋಡಿದ ಕೂಡಲೇ ನಾನು ಆಸ್ಪತ್ರೆಗೆ ಧಾವಿಸಿ ನನ್ನ ಪ್ಲಾಸ್ಮಾ ದಾನಕ್ಕಾಗಿ ಸ್ವಯಂಪ್ರೇರಿತನಾಗಿ ಸಜ್ಜಾದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್ -19ನಿಂದ ಚೇತರಿಸಿಕೊಂಡ ನಂತರ ನಾನು ಈ ಹಿಂದೆ ಪ್ಲಾಸ್ಮಾ ದಾನ ಮಾಡಿದ್ದರಿಂದ, ಆ ಕಾರ್ಯವಿಧಾನ ನನಗೆ ತಿಳಿದಿತ್ತು” ಎಂದು ಮನ್ಸೂರಿ ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಸ್ಪತ್ರೆಯಲ್ಲಿಯೇ ಮನ್ಸೂರಿ ಉಪವಾಸ ಮುರಿಯಬೇಕಾಯಿತು. “ವೈದ್ಯರು ನನ್ನನ್ನು ತಯಾರಾಗಲು ಕೇಳಿದಾಗ, ಅವರು ನನ್ನನ್ನು ಏನಾದರೂ ತಿನ್ನಲು ಕೇಳಿದ್ದರು. ಅದಕ್ಕಾಗಿಯೇ ನಾನು ನನ್ನ ರೋಜಾವನ್ನು ಮುರಿಯಬೇಕಾಯಿತು ಮತ್ತು ಆಸ್ಪತ್ರೆಯವರಿಂದಲೇ ಅಲ್ಪ ಆಹಾರ ಸೇವಿಸಿ ನನ್ನ ರಕ್ತವನ್ನು ದಾನ ಮಾಡಿದೆ’ ಎನ್ನುತ್ತಾರೆ ಮನ್ಸೂರಿ. ಪ್ರಶಂಸೆಯ ಮಾತುಗಳು ಬಂದಾಗ ನಾನೇನೂ ಅಸಾಧಾರಣವಾದುದನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಕೀಲ್, ಖಾಲಿ ಹೊಟ್ಟೆಯಲ್ಲಿದ್ದರೆ ಪ್ಲಾಸ್ಮಾ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದರು. ಹಾಗಾಗಿ ನನ್ನ ರೋಜಾವನ್ನು ಮುರಿದು ಆಹಾರವನ್ನು ಸೇವಿಸಿದ ನಂತರ ಪ್ಲಾಸ್ಮಾವನ್ನು ದಾನ ಮಾಡಿದೆ ಎಂದಿದ್ದಾರೆ.

“ಇದು ಮನುಷ್ಯನಾಗಿ ನನ್ನ ಜವಾಬ್ದಾರಿಯಾಗಿದೆ ಮತ್ತು ರೋಜಾ ಮುರಿದಿದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ” ಎಂದು ಮನ್ಸೂರಿ ಹೇಳಿದರು, ಇಬ್ಬರು ಮಹಿಳೆಯರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮನ್ಸೂರಿ ಹೇಳಿದ್ದಾರೆ.

ಮನ್ಸೂರಿ ಪ್ರಕಾರ, ಅವರು ತಮ್ಮ ಜೀವನದಲ್ಲಿ 17 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡಾಗಿನಿಂದ, ಅವರು ತಮ್ಮ ಪ್ಲಾಸ್ಮಾವನ್ನು ಮೂರು ಬಾರಿ ದಾನ ಮಾಡಿದ್ದಾರೆ.


ಇದನ್ನೂ ಓದಿ: ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...