Homeಮುಖಪುಟರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಭಾರತವು ಸಿಕ್ಕಿಕೊಂಡ ಸಂದರ್ಭದಲ್ಲಿ ಗೋದಿ ಮಾಧ್ಯಮಗಳು ಇನ್ನೂ ಹಿಂದೂ ಮುಸ್ಲಿಂ ಎನ್ನುತ್ತ ಆಳುವವರ ಅಭಿಲಾಷೆಗಳನ್ನು ಪೂರೈಸುತ್ತಿವೆ. ನಮ್ಮ ಸಿನಿಕತೆಯ ಹೊರತಾಗಿಯೂ, ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುವ ಕೆಲವು ನಿದರ್ಶನಗಳು ಸಂಭವಿಸುತ್ತವೆ.

ರಾಜಸ್ಥಾನದ ಉದಯಪುರದ 32 ವರ್ಷದ ಅಕೀಲ್ ಮನ್ಸೂರಿ, ಪವಿತ್ರ ರಂಜಾನ್ ತಿಂಗಳ ತನ್ನ ಮೊದಲ ರೋಜಾವನ್ನು ಮುರಿದು ಇಬ್ಬರು ಹಿಂದೂ ಮಹಿಳೆಯರಿಗೆ ಪ್ಲಾಸ್ಮಾ ದಾನ ಮಾಡಿ ಅವರ ಜೀವ ಉಳಿಸಿದ್ದಾರೆ. ಮನ್ಸೂರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊರೋನಾದಿಂದ ಚೇತರಿಸಿಕೊಂಡಿದ್ದರು.

ಸೋಶಿಯಲ್ ಮೀಡಿಯಾ ನೆಟ್‌ವರ್ಕ್‌ಗಳು ಮತ್ತು ರಕ್ತದಾನ ಗುಂಪುಗಳ ಮೂಲಕ, ಕೊರೋನಾ ಸೋಂಕಿಗೆ ಒಳಗಾದ ಇಬ್ಬರು ಮಹಿಳೆಯರ ಬಗ್ಗೆ ಮನ್ಸೂರಿಗೆ ಗೊತ್ತಾಯಿತು. ಆ ಮಹಿಳೆಯರು ಆಮ್ಲಜನಕದ ಬೆಂಬಲದಲ್ಲಿದ್ದರು ಮತ್ತು ಅವರಿಗೆ ತುರ್ತಾಗಿ ಎ+ ಪ್ಲಾಸ್ಮಾ ಅಗತ್ಯವಿತ್ತು.
ಉದಯಪುರದ ಪೆಸಿಫಿಕ್ ಆಸ್ಪತ್ರೆಯ ವೈದ್ಯರು ಪ್ಲಾಸ್ಮಾ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರೂ ವ್ಯರ್ಥವಾಯಿತು. ಈ ಸಮಯದಲ್ಲಿಯೇ ರಕ್ತ ಯುವ ವಾಹಿನಿ (ಯುವ ರಕ್ತದಾನ ಗುಂಪು)ಗೆ ಸುದ್ದಿ ಸಿಕ್ಕಿತು. ಅಕೀಲ್ ಈ ಹಿಂದೆ 17 ಬಾರಿ ದಾನ ಮಾಡಿದ್ದರಿಂದ ಅವರನ್ನು ಸಂಪರ್ಕಿಸಿದರು. ಅಕೀಲ್ ಮನ್ಸೂರಿ ಅದೇ ರಕ್ತದ ಗುಂಪನ್ನು ಹೊಂದಿದ್ದರು.

“ಸಂದೇಶವನ್ನು ನೋಡಿದ ಕೂಡಲೇ ನಾನು ಆಸ್ಪತ್ರೆಗೆ ಧಾವಿಸಿ ನನ್ನ ಪ್ಲಾಸ್ಮಾ ದಾನಕ್ಕಾಗಿ ಸ್ವಯಂಪ್ರೇರಿತನಾಗಿ ಸಜ್ಜಾದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್ -19ನಿಂದ ಚೇತರಿಸಿಕೊಂಡ ನಂತರ ನಾನು ಈ ಹಿಂದೆ ಪ್ಲಾಸ್ಮಾ ದಾನ ಮಾಡಿದ್ದರಿಂದ, ಆ ಕಾರ್ಯವಿಧಾನ ನನಗೆ ತಿಳಿದಿತ್ತು” ಎಂದು ಮನ್ಸೂರಿ ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಸ್ಪತ್ರೆಯಲ್ಲಿಯೇ ಮನ್ಸೂರಿ ಉಪವಾಸ ಮುರಿಯಬೇಕಾಯಿತು. “ವೈದ್ಯರು ನನ್ನನ್ನು ತಯಾರಾಗಲು ಕೇಳಿದಾಗ, ಅವರು ನನ್ನನ್ನು ಏನಾದರೂ ತಿನ್ನಲು ಕೇಳಿದ್ದರು. ಅದಕ್ಕಾಗಿಯೇ ನಾನು ನನ್ನ ರೋಜಾವನ್ನು ಮುರಿಯಬೇಕಾಯಿತು ಮತ್ತು ಆಸ್ಪತ್ರೆಯವರಿಂದಲೇ ಅಲ್ಪ ಆಹಾರ ಸೇವಿಸಿ ನನ್ನ ರಕ್ತವನ್ನು ದಾನ ಮಾಡಿದೆ’ ಎನ್ನುತ್ತಾರೆ ಮನ್ಸೂರಿ. ಪ್ರಶಂಸೆಯ ಮಾತುಗಳು ಬಂದಾಗ ನಾನೇನೂ ಅಸಾಧಾರಣವಾದುದನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಕೀಲ್, ಖಾಲಿ ಹೊಟ್ಟೆಯಲ್ಲಿದ್ದರೆ ಪ್ಲಾಸ್ಮಾ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದರು. ಹಾಗಾಗಿ ನನ್ನ ರೋಜಾವನ್ನು ಮುರಿದು ಆಹಾರವನ್ನು ಸೇವಿಸಿದ ನಂತರ ಪ್ಲಾಸ್ಮಾವನ್ನು ದಾನ ಮಾಡಿದೆ ಎಂದಿದ್ದಾರೆ.

“ಇದು ಮನುಷ್ಯನಾಗಿ ನನ್ನ ಜವಾಬ್ದಾರಿಯಾಗಿದೆ ಮತ್ತು ರೋಜಾ ಮುರಿದಿದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ” ಎಂದು ಮನ್ಸೂರಿ ಹೇಳಿದರು, ಇಬ್ಬರು ಮಹಿಳೆಯರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮನ್ಸೂರಿ ಹೇಳಿದ್ದಾರೆ.

ಮನ್ಸೂರಿ ಪ್ರಕಾರ, ಅವರು ತಮ್ಮ ಜೀವನದಲ್ಲಿ 17 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡಾಗಿನಿಂದ, ಅವರು ತಮ್ಮ ಪ್ಲಾಸ್ಮಾವನ್ನು ಮೂರು ಬಾರಿ ದಾನ ಮಾಡಿದ್ದಾರೆ.


ಇದನ್ನೂ ಓದಿ: ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...