Homeಮುಖಪುಟರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಭಾರತವು ಸಿಕ್ಕಿಕೊಂಡ ಸಂದರ್ಭದಲ್ಲಿ ಗೋದಿ ಮಾಧ್ಯಮಗಳು ಇನ್ನೂ ಹಿಂದೂ ಮುಸ್ಲಿಂ ಎನ್ನುತ್ತ ಆಳುವವರ ಅಭಿಲಾಷೆಗಳನ್ನು ಪೂರೈಸುತ್ತಿವೆ. ನಮ್ಮ ಸಿನಿಕತೆಯ ಹೊರತಾಗಿಯೂ, ಮಾನವೀಯತೆಯ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುವ ಕೆಲವು ನಿದರ್ಶನಗಳು ಸಂಭವಿಸುತ್ತವೆ.

ರಾಜಸ್ಥಾನದ ಉದಯಪುರದ 32 ವರ್ಷದ ಅಕೀಲ್ ಮನ್ಸೂರಿ, ಪವಿತ್ರ ರಂಜಾನ್ ತಿಂಗಳ ತನ್ನ ಮೊದಲ ರೋಜಾವನ್ನು ಮುರಿದು ಇಬ್ಬರು ಹಿಂದೂ ಮಹಿಳೆಯರಿಗೆ ಪ್ಲಾಸ್ಮಾ ದಾನ ಮಾಡಿ ಅವರ ಜೀವ ಉಳಿಸಿದ್ದಾರೆ. ಮನ್ಸೂರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊರೋನಾದಿಂದ ಚೇತರಿಸಿಕೊಂಡಿದ್ದರು.

ಸೋಶಿಯಲ್ ಮೀಡಿಯಾ ನೆಟ್‌ವರ್ಕ್‌ಗಳು ಮತ್ತು ರಕ್ತದಾನ ಗುಂಪುಗಳ ಮೂಲಕ, ಕೊರೋನಾ ಸೋಂಕಿಗೆ ಒಳಗಾದ ಇಬ್ಬರು ಮಹಿಳೆಯರ ಬಗ್ಗೆ ಮನ್ಸೂರಿಗೆ ಗೊತ್ತಾಯಿತು. ಆ ಮಹಿಳೆಯರು ಆಮ್ಲಜನಕದ ಬೆಂಬಲದಲ್ಲಿದ್ದರು ಮತ್ತು ಅವರಿಗೆ ತುರ್ತಾಗಿ ಎ+ ಪ್ಲಾಸ್ಮಾ ಅಗತ್ಯವಿತ್ತು.
ಉದಯಪುರದ ಪೆಸಿಫಿಕ್ ಆಸ್ಪತ್ರೆಯ ವೈದ್ಯರು ಪ್ಲಾಸ್ಮಾ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರೂ ವ್ಯರ್ಥವಾಯಿತು. ಈ ಸಮಯದಲ್ಲಿಯೇ ರಕ್ತ ಯುವ ವಾಹಿನಿ (ಯುವ ರಕ್ತದಾನ ಗುಂಪು)ಗೆ ಸುದ್ದಿ ಸಿಕ್ಕಿತು. ಅಕೀಲ್ ಈ ಹಿಂದೆ 17 ಬಾರಿ ದಾನ ಮಾಡಿದ್ದರಿಂದ ಅವರನ್ನು ಸಂಪರ್ಕಿಸಿದರು. ಅಕೀಲ್ ಮನ್ಸೂರಿ ಅದೇ ರಕ್ತದ ಗುಂಪನ್ನು ಹೊಂದಿದ್ದರು.

“ಸಂದೇಶವನ್ನು ನೋಡಿದ ಕೂಡಲೇ ನಾನು ಆಸ್ಪತ್ರೆಗೆ ಧಾವಿಸಿ ನನ್ನ ಪ್ಲಾಸ್ಮಾ ದಾನಕ್ಕಾಗಿ ಸ್ವಯಂಪ್ರೇರಿತನಾಗಿ ಸಜ್ಜಾದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್ -19ನಿಂದ ಚೇತರಿಸಿಕೊಂಡ ನಂತರ ನಾನು ಈ ಹಿಂದೆ ಪ್ಲಾಸ್ಮಾ ದಾನ ಮಾಡಿದ್ದರಿಂದ, ಆ ಕಾರ್ಯವಿಧಾನ ನನಗೆ ತಿಳಿದಿತ್ತು” ಎಂದು ಮನ್ಸೂರಿ ಹೇಳಿದ್ದನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಸ್ಪತ್ರೆಯಲ್ಲಿಯೇ ಮನ್ಸೂರಿ ಉಪವಾಸ ಮುರಿಯಬೇಕಾಯಿತು. “ವೈದ್ಯರು ನನ್ನನ್ನು ತಯಾರಾಗಲು ಕೇಳಿದಾಗ, ಅವರು ನನ್ನನ್ನು ಏನಾದರೂ ತಿನ್ನಲು ಕೇಳಿದ್ದರು. ಅದಕ್ಕಾಗಿಯೇ ನಾನು ನನ್ನ ರೋಜಾವನ್ನು ಮುರಿಯಬೇಕಾಯಿತು ಮತ್ತು ಆಸ್ಪತ್ರೆಯವರಿಂದಲೇ ಅಲ್ಪ ಆಹಾರ ಸೇವಿಸಿ ನನ್ನ ರಕ್ತವನ್ನು ದಾನ ಮಾಡಿದೆ’ ಎನ್ನುತ್ತಾರೆ ಮನ್ಸೂರಿ. ಪ್ರಶಂಸೆಯ ಮಾತುಗಳು ಬಂದಾಗ ನಾನೇನೂ ಅಸಾಧಾರಣವಾದುದನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಕೀಲ್, ಖಾಲಿ ಹೊಟ್ಟೆಯಲ್ಲಿದ್ದರೆ ಪ್ಲಾಸ್ಮಾ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದರು. ಹಾಗಾಗಿ ನನ್ನ ರೋಜಾವನ್ನು ಮುರಿದು ಆಹಾರವನ್ನು ಸೇವಿಸಿದ ನಂತರ ಪ್ಲಾಸ್ಮಾವನ್ನು ದಾನ ಮಾಡಿದೆ ಎಂದಿದ್ದಾರೆ.

“ಇದು ಮನುಷ್ಯನಾಗಿ ನನ್ನ ಜವಾಬ್ದಾರಿಯಾಗಿದೆ ಮತ್ತು ರೋಜಾ ಮುರಿದಿದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ” ಎಂದು ಮನ್ಸೂರಿ ಹೇಳಿದರು, ಇಬ್ಬರು ಮಹಿಳೆಯರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮನ್ಸೂರಿ ಹೇಳಿದ್ದಾರೆ.

ಮನ್ಸೂರಿ ಪ್ರಕಾರ, ಅವರು ತಮ್ಮ ಜೀವನದಲ್ಲಿ 17 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡಾಗಿನಿಂದ, ಅವರು ತಮ್ಮ ಪ್ಲಾಸ್ಮಾವನ್ನು ಮೂರು ಬಾರಿ ದಾನ ಮಾಡಿದ್ದಾರೆ.


ಇದನ್ನೂ ಓದಿ: ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...