Homeಕರ್ನಾಟಕ'ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು' - ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

- Advertisement -
- Advertisement -

6 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ ‘ಹೊಸ ಧರ್ಮಗಳ ಉದಯ’ ಪಾಠವನ್ನು ಬೋಧಿಸದಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ರಾಜ್ಯದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈ ಬಿಟ್ಟಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಈ ಕ್ರಮವನ್ನು ಸಮರ್ಥಿಸಿಕೊಳ್ಳಲು ಸುರೇಶ್‌ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಪ್ರಮುಖವಾಗಿ 3 ಕಾರಣಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, “6ನೇ ತರಗತಿಯ ಸಮಾಜವಿಜ್ಞಾನ ಭಾಗ–1ರ ಪಾಠದ ಪೀಠಿಕೆಯಲ್ಲಿ ಅನಗತ್ಯ ಮತ್ತು ‘6ನೇ ತಗರತಿಯ ಮಕ್ಕಳ ವಯೋಮಾನಕ್ಕೆ ಮೀರಿದ ಪಠ್ಯಾಂಶ ಇದೆ’ ಎಂಬ ಅನೇಕರ ಅಭಿಪ್ರಾಯಗಳಿಗೆ ಪೂರಕವಾಗಿ, ಅದನ್ನು ಕೈಬಿಡಲು ನಿರ್ಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಭೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳಿಗೆ ಕೊಕ್‌ ನೀಡಿಲ್ಲ. ಆ ಪಾಠಗಳು ಪೂರ್ಣವಾಗಿ ಇವೆ, ಇರುತ್ತವೆ. ಬೌಧ ಧರ್ಮ ಮತ್ತು ಜೈನ ಧರ್ಮದ ಕುರಿತ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

“ಸುಮಾರು 2 ತಿಂಗಳ ಹಿಂದೆ ನನಗೆ ಮಂತ್ರಾಲಯದ ಸ್ವಾಮಿಗಳು ಫೋನ್ ಮಾಡಿ ಖೇದ ವ್ಯಕ್ತಪಡಿಸಿದ್ದರು. 6 ನೇ ತರಗತಿ ಮಕ್ಕಳಿಗೆ ಈ ಪದಗಳು ಏನು ಅರ್ಥವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಲ್ಲಿಯವರೆಗೂ ಆ ಪಾಠದಲ್ಲಿ ಏನಿದೆ ಎಂದು ನನಗೂ ಗೊತ್ತಿರಲಿಲ್ಲ. ಇದಾದ ನಂತರ ನಾನು ಇದನ್ನು ಓದಿದೆ. ಇದು ಈ ವಯೋಮಾನದ ಮಕ್ಕಳಿಗೆ ಇದು ಸರಿಯಾದ ಪಠ್ಯವಲ್ಲ ಎಂದು ತಿಳಿಯಿತು” ಎಂದು ಹೇಳಿದರು.

ಎರಡನೆಯದಾಗಿ, “2016–17ನೇ ಸಾಲಿನಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೊಂಡಂದಿನಿಂದ ಈ ಪಠ್ಯಗಳು ಜಾರಿಯಲ್ಲಿವೆ. ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರಬಾರದು. ವಿಶೇಷವಾಗಿ ಒಂದು ಜಾತಿಯ ಬಗ್ಗೆ, ಒಂದು ಸಮುದಾಯದ ಬಗ್ಗೆ ನಮ್ಮ ಮಕ್ಕಳಲ್ಲಿ ಅನಗತ್ಯ ದ್ವೇಷದ ಭಾವನೆ ಬಿತ್ತಬಾರದು ಎನ್ನುವ ಉದ್ದೇಶದಿಂದ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಭೌದ್ಧ ಧರ್ಮ ಹಾಗೂ ಜೈನ ಧರ್ಮ ಅಥವಾ ಇನ್ಯಾವುದೇ ಧರ್ಮದ ಅವಹೇಳನವನ್ನು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಮೂರನೆಯದಾಗಿ, “ಈ ಪಾಠಕ್ಕಿಂತ ಮೊದಲು ಇರುವ ‘ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳ ಉದಯ’ ಪಾಠದಲ್ಲಿ ಈ ರೀತಿಯ ಅನಗತ್ಯ ಪೀಠಿಕೆಯನ್ನು ನೀಡಿಲ್ಲ. ಈ ಪಾಠಗಳಿಗೆ ಇರದ ಪೀಠಿಕೆ ಹೊಸ ಧರ್ಮಗಳ ಉದಯ ಪಾಠಕ್ಕೆ ಯಾಕೆ? ಹಾಗಾಗಿ ಇದನ್ನು ಬೋಧಿಸಬಾರದು ಎಂದು ಆದೇಶ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಶಿಕ್ಷಣ ಇಲಾಖೆಯ ಆದೇಶ:

2020-21 ನೇ ಸಾಲಿನ 6 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ 7 ನೇ ಪಾಠವನ್ನು (ಹೊಸ ಧರ್ಮಗಳ ಉದಯ) ಬೋಧಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. “6 ನೇ ತರಗತಿ ಸಮಾಜ ವಿಜ್ಞಾನ- ಭಾಗ 1 ರಲ್ಲಿನ ಪಾಠ-7 ‘ಹೊಸ ಧರ್ಮಗಳ ಉದಯ’ ಈ ಪಾಠದಲ್ಲಿನ ಪುಟ ಸಂಖ್ಯೆ: 82 ಹಾಗು 83ರಲ್ಲಿನ ವಿಷಯಾಂಶಗಳನ್ನು, 2020-21ನೆ ಶೈಕ್ಷಣಿಕ ಸಾಲಿಗೆ ಬೋಧನೆ-ಕಲಿಕೆ/ ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಸಂಬಂಧಿಸಿದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಸೂಕ್ತ ಸೂಚನೆ ನೀಡಲು ತಿಳಿಸಿದೆ. ಇದರ ಕುರಿತು ಕೈಗೊಂಡ ಕ್ರಮಗಳನ್ನು ಫೆ. 28ರೊಳಗೆ ವರದಿ ಮಾಡಲು ತಿಳಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಾಠದಲ್ಲಿ ಏನಿದೆ?

“ಉತ್ತರ ವೇದಗಳ ಕಾಲದಲ್ಲಿ ಆಚರಿಸುತ್ತಿದ್ದ ಯಜ್ಞ, ಯಾಗಗಳಲ್ಲಿ ಆಹಾರ ಧಾನ್ಯ, ಹಾಲು, ತುಪ್ಪವನ್ನು ಹವಿಸ್ಸು ಎಂದು ದಹಿಸುತ್ತಿದ್ದುದರಿಂದ ಆಹಾರದ ಅಭಾವ ಸೃಷ್ಟಿಯಾಯಿತು. ವೈದಿಕೆ ಆಚರಣೆಗಳು ದುಬಾರಿಯಾಗಿದ್ದು, ಸಂಸ್ಕೃತ ಮಂತ್ರದ ಮೂಲಕ ನಡೆಸುತ್ತಿದ್ದುದರಿಂದ ಜನಸಾಮಾನ್ಯರಿಗೆ ಲಭ್ಯವಾಗುತ್ತಿರಲಿಲ್ಲ ಹಾಗೂ ಅರ್ಥ ಆಗುತ್ತಿರಲಿಲ್ಲ. ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು. ಈ ಎಲ್ಲಾ ಕಾರಣಗಳು ಹೊಸ ಧರ್ಮಗಳ ಉದಯಕ್ಕೆ ಪುಷ್ಠಿ ನೀಡಿದವು” ಎಂದು ಪಾಠದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಿಕ್ಷಣ ಸಚಿವರು ಕುವೆಂಪು ಅವರ ಮಕ್ಕಳಿಗೇಕೆ ವೈಚಾರಿಕತೆ ಎಂಬ ಲೇಖನ ಓದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ಚಾರಿತ್ರಿಕ ಸತ್ಯಗಳನ್ನು ಬೋಧಿಸುವುದು ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತಿದಂತೆ ಹೇಗಾಗುತ್ತದೆ ಸಚಿವರೇ?

  2. ಮನುವಾದಿಗಳ ಆಡಳಿತದಲ್ಲಿ, ನಮ್ಮ ಮಕ್ಕಳಿಗೆ ಯಾವ ಪಾಠವನ್ನು ಮಾಡಬೇಕು ಎಂಬ ವಿಚಾರವನ್ನು ಬ್ರಾಹ್ಮಣ ದರ್ಮದ ಮಟಾದೀಶರು ನಿರ್ದರಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...