Homeಕರ್ನಾಟಕ'ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು' - ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

- Advertisement -
- Advertisement -

6 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ ‘ಹೊಸ ಧರ್ಮಗಳ ಉದಯ’ ಪಾಠವನ್ನು ಬೋಧಿಸದಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ರಾಜ್ಯದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈ ಬಿಟ್ಟಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಈ ಕ್ರಮವನ್ನು ಸಮರ್ಥಿಸಿಕೊಳ್ಳಲು ಸುರೇಶ್‌ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಪ್ರಮುಖವಾಗಿ 3 ಕಾರಣಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, “6ನೇ ತರಗತಿಯ ಸಮಾಜವಿಜ್ಞಾನ ಭಾಗ–1ರ ಪಾಠದ ಪೀಠಿಕೆಯಲ್ಲಿ ಅನಗತ್ಯ ಮತ್ತು ‘6ನೇ ತಗರತಿಯ ಮಕ್ಕಳ ವಯೋಮಾನಕ್ಕೆ ಮೀರಿದ ಪಠ್ಯಾಂಶ ಇದೆ’ ಎಂಬ ಅನೇಕರ ಅಭಿಪ್ರಾಯಗಳಿಗೆ ಪೂರಕವಾಗಿ, ಅದನ್ನು ಕೈಬಿಡಲು ನಿರ್ಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಭೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳಿಗೆ ಕೊಕ್‌ ನೀಡಿಲ್ಲ. ಆ ಪಾಠಗಳು ಪೂರ್ಣವಾಗಿ ಇವೆ, ಇರುತ್ತವೆ. ಬೌಧ ಧರ್ಮ ಮತ್ತು ಜೈನ ಧರ್ಮದ ಕುರಿತ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

“ಸುಮಾರು 2 ತಿಂಗಳ ಹಿಂದೆ ನನಗೆ ಮಂತ್ರಾಲಯದ ಸ್ವಾಮಿಗಳು ಫೋನ್ ಮಾಡಿ ಖೇದ ವ್ಯಕ್ತಪಡಿಸಿದ್ದರು. 6 ನೇ ತರಗತಿ ಮಕ್ಕಳಿಗೆ ಈ ಪದಗಳು ಏನು ಅರ್ಥವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಲ್ಲಿಯವರೆಗೂ ಆ ಪಾಠದಲ್ಲಿ ಏನಿದೆ ಎಂದು ನನಗೂ ಗೊತ್ತಿರಲಿಲ್ಲ. ಇದಾದ ನಂತರ ನಾನು ಇದನ್ನು ಓದಿದೆ. ಇದು ಈ ವಯೋಮಾನದ ಮಕ್ಕಳಿಗೆ ಇದು ಸರಿಯಾದ ಪಠ್ಯವಲ್ಲ ಎಂದು ತಿಳಿಯಿತು” ಎಂದು ಹೇಳಿದರು.

ಎರಡನೆಯದಾಗಿ, “2016–17ನೇ ಸಾಲಿನಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೊಂಡಂದಿನಿಂದ ಈ ಪಠ್ಯಗಳು ಜಾರಿಯಲ್ಲಿವೆ. ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರಬಾರದು. ವಿಶೇಷವಾಗಿ ಒಂದು ಜಾತಿಯ ಬಗ್ಗೆ, ಒಂದು ಸಮುದಾಯದ ಬಗ್ಗೆ ನಮ್ಮ ಮಕ್ಕಳಲ್ಲಿ ಅನಗತ್ಯ ದ್ವೇಷದ ಭಾವನೆ ಬಿತ್ತಬಾರದು ಎನ್ನುವ ಉದ್ದೇಶದಿಂದ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಭೌದ್ಧ ಧರ್ಮ ಹಾಗೂ ಜೈನ ಧರ್ಮ ಅಥವಾ ಇನ್ಯಾವುದೇ ಧರ್ಮದ ಅವಹೇಳನವನ್ನು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಮೂರನೆಯದಾಗಿ, “ಈ ಪಾಠಕ್ಕಿಂತ ಮೊದಲು ಇರುವ ‘ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳ ಉದಯ’ ಪಾಠದಲ್ಲಿ ಈ ರೀತಿಯ ಅನಗತ್ಯ ಪೀಠಿಕೆಯನ್ನು ನೀಡಿಲ್ಲ. ಈ ಪಾಠಗಳಿಗೆ ಇರದ ಪೀಠಿಕೆ ಹೊಸ ಧರ್ಮಗಳ ಉದಯ ಪಾಠಕ್ಕೆ ಯಾಕೆ? ಹಾಗಾಗಿ ಇದನ್ನು ಬೋಧಿಸಬಾರದು ಎಂದು ಆದೇಶ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಶಿಕ್ಷಣ ಇಲಾಖೆಯ ಆದೇಶ:

2020-21 ನೇ ಸಾಲಿನ 6 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ 7 ನೇ ಪಾಠವನ್ನು (ಹೊಸ ಧರ್ಮಗಳ ಉದಯ) ಬೋಧಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. “6 ನೇ ತರಗತಿ ಸಮಾಜ ವಿಜ್ಞಾನ- ಭಾಗ 1 ರಲ್ಲಿನ ಪಾಠ-7 ‘ಹೊಸ ಧರ್ಮಗಳ ಉದಯ’ ಈ ಪಾಠದಲ್ಲಿನ ಪುಟ ಸಂಖ್ಯೆ: 82 ಹಾಗು 83ರಲ್ಲಿನ ವಿಷಯಾಂಶಗಳನ್ನು, 2020-21ನೆ ಶೈಕ್ಷಣಿಕ ಸಾಲಿಗೆ ಬೋಧನೆ-ಕಲಿಕೆ/ ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಸಂಬಂಧಿಸಿದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಸೂಕ್ತ ಸೂಚನೆ ನೀಡಲು ತಿಳಿಸಿದೆ. ಇದರ ಕುರಿತು ಕೈಗೊಂಡ ಕ್ರಮಗಳನ್ನು ಫೆ. 28ರೊಳಗೆ ವರದಿ ಮಾಡಲು ತಿಳಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಾಠದಲ್ಲಿ ಏನಿದೆ?

“ಉತ್ತರ ವೇದಗಳ ಕಾಲದಲ್ಲಿ ಆಚರಿಸುತ್ತಿದ್ದ ಯಜ್ಞ, ಯಾಗಗಳಲ್ಲಿ ಆಹಾರ ಧಾನ್ಯ, ಹಾಲು, ತುಪ್ಪವನ್ನು ಹವಿಸ್ಸು ಎಂದು ದಹಿಸುತ್ತಿದ್ದುದರಿಂದ ಆಹಾರದ ಅಭಾವ ಸೃಷ್ಟಿಯಾಯಿತು. ವೈದಿಕೆ ಆಚರಣೆಗಳು ದುಬಾರಿಯಾಗಿದ್ದು, ಸಂಸ್ಕೃತ ಮಂತ್ರದ ಮೂಲಕ ನಡೆಸುತ್ತಿದ್ದುದರಿಂದ ಜನಸಾಮಾನ್ಯರಿಗೆ ಲಭ್ಯವಾಗುತ್ತಿರಲಿಲ್ಲ ಹಾಗೂ ಅರ್ಥ ಆಗುತ್ತಿರಲಿಲ್ಲ. ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು. ಈ ಎಲ್ಲಾ ಕಾರಣಗಳು ಹೊಸ ಧರ್ಮಗಳ ಉದಯಕ್ಕೆ ಪುಷ್ಠಿ ನೀಡಿದವು” ಎಂದು ಪಾಠದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಿಕ್ಷಣ ಸಚಿವರು ಕುವೆಂಪು ಅವರ ಮಕ್ಕಳಿಗೇಕೆ ವೈಚಾರಿಕತೆ ಎಂಬ ಲೇಖನ ಓದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ಚಾರಿತ್ರಿಕ ಸತ್ಯಗಳನ್ನು ಬೋಧಿಸುವುದು ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತಿದಂತೆ ಹೇಗಾಗುತ್ತದೆ ಸಚಿವರೇ?

  2. ಮನುವಾದಿಗಳ ಆಡಳಿತದಲ್ಲಿ, ನಮ್ಮ ಮಕ್ಕಳಿಗೆ ಯಾವ ಪಾಠವನ್ನು ಮಾಡಬೇಕು ಎಂಬ ವಿಚಾರವನ್ನು ಬ್ರಾಹ್ಮಣ ದರ್ಮದ ಮಟಾದೀಶರು ನಿರ್ದರಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....