Homeಮುಖಪುಟಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು... ಯಾಕೆಂದರೆ.? - ಇಸ್ಮತ್‌ ಪಜೀರ್‌

ಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು… ಯಾಕೆಂದರೆ.? – ಇಸ್ಮತ್‌ ಪಜೀರ್‌

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಎಂಬತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತನಗೆ ಮಾತನಾಡಲು ಅವಕಾಶ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರದ್ದೇ ರಾಜೀನಾಮೆಗೆ ಅದೇ ವೇದಿಕೆಯಲ್ಲಿ ನಿಂತು ಬಹಿರಂಗವಾಗಿ ನಮ್ಮ ಸಂಗಾತಿ ಕೆ.ನೀಲಾ ಆಗ್ರಹಿಸಿದ್ದು ಅಧ್ಯಕ್ಷರಿಗೆ ಕೋಲು ಕೊಟ್ಟು ಹೊಡೆಸಿದಂತಾಗಿರಬಹುದು.

ನೀಲಕ್ಕ ಅವರ ಮನು ಬಳಿಗಾರ್ ರಾಜೀನಾಮೆ ಕೊಡಬೇಕೆಂಬ ಆಗ್ರಹಕ್ಕೆ ಮುಖ್ಯ ಕಾರಣ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ತಡೆಹಿಡಿದದ್ದು, ಸಮ್ಮೇಳನಾಧ್ಯಕ್ಷರನ್ನು ಬದಲಿಸಬೇಕೆಂಬ ಸರ್ವಾಧಿಕಾರಿ ಧೋರಣೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯ ಭಯೋತ್ಪಾದನೆಯನ್ನು ಮುಂದಿಟ್ಟಾಗಿತ್ತು.

ಸಿ.ಟಿ.ರವಿಯ ಧಮಕಿ ಅಕ್ಷರಶಃ ಭಯೋತ್ಪಾದನೆ. ಎರಡನೇ ದಿನಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದುವರಿಸಿದರೆ ಪೆಟ್ರೋಲ್ ಬಾಂಬ್ ಹಾಕುತ್ತೇನೆಂದು ಬೆದರಿಸಿದ್ದು ಜನ ಮನದಲ್ಲಿ ಭಯವನ್ನು ಉತ್ಪಾದಿಸುವುದೇ ಆಗಿದೆ. ಅದನ್ನು‌ ಭಯೋತ್ಪಾದನೆ ಎನ್ನದೇ ಬೇರೇನೂ ಎನ್ನಲು ಸಾಧ್ಯವಿಲ್ಲ.

ಮೊನ್ನೆ ನೀಲಕ್ಕ ಹೇಳಿರುವ ಕಾರಣಗಳಲ್ಲದೇ ಮನು ಬಳಿಗಾರ್ ರಾಜೀನಾಮೆ ಕೊಡಲೇಬೇಕು ಎನ್ನುವುದಕ್ಕೆ ಇನ್ನಿತರ ಬಲವಾದ ಸಮರ್ಥನೆಯೂ ಇದೆ.

ಮನು ಬಳಿಗಾರ್ ಈಗ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಮುಂದುವರಿದಿರುವುದೇ ಅಸಾಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕ. ಯಾಕೆಂದರೆ ಸಾಹಿತ್ಯ ಪರಿಷತ್‌‌ನ ಮೂಲ ಬೈಲಾ ಪ್ರಕಾರ ಒಂದು ಚುನಾಯಿತ ಸಮಿತಿಯ ಆಡಳಿತಾವಧಿಯು ಮೂರು ವರ್ಷಗಳು ಮಾತ್ರ. ಮೂರು ವರ್ಷಗಳ ಬಳಿಕ ಮತ್ತೆ ಚುನಾವಣೆ ನಡೆಯಬೇಕು. ಆದರೆ ಮನು ಬಳಿಗಾರ್ ತನ್ನ ಅಧ್ಯಕ್ಷಾವಧಿ ಇನ್ನೇನು ಮುಗಿಯಬೇಕೆನ್ನುವಷ್ಟರಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ ಕರೆದು ಬೈಲಾಕ್ಕೆ ತಿದ್ದುಪಡಿ ಮಾಡಿದರು. ತಿದ್ದುಪಡಿ ಮಾಡಲಾದ ಬೈಲಾ ಪ್ರಕಾರ ಆಡಳಿತ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೇರಿಸಲಾಯಿತು. ಇದು ಬಹಳ ಸ್ಪಷ್ಟವಾಗಿ ತನ್ನ ಅಧಿಕಾರವನ್ನು ಮುಂದುವರಿಸುವ ಸಲುವಾಗಿಯೇ  ಬೈಲಾ ತಿದ್ದುಪಡಿ ಮಾಡಲಾಗಿದ್ದನ್ನು ಸೂಚಿಸುತ್ತದೆ. ಪ್ರಜಾತಾಂತ್ರಿಕವಾಗಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯಲ್ಲೂ ಬೈಲಾ ತಿದ್ದುಪಡಿಗೆ ಅನೇಕ ನಿಬಂಧನೆಗಳಿರುತ್ತವೆ. ಆದರೆ ಇಲ್ಲಿ ತನ್ನ ವಾದವನ್ನು ಸಮಿತಿ ಒಪ್ಪಲು ಬೇಕಾದ ತಂತ್ರವನ್ನು ಮೊದಲೇ ಹೆಣೆದು ಏಕಾಏಕೀ ಸಭೆ ಕರೆಯಲಾಗಿತ್ತು. ಪ್ರಜಾತಾಂತ್ರಿಕವಾಗಿ ರಚಿಸಲಾದ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು.

ಬೈಲಾ ತಿದ್ದುಪಡಿಯನ್ನು ತರ್ಕಕ್ಕೆ ಸಮಂಜಸವೆಂದೇ ಒಪ್ಪಿಕೊಳ್ಳೋಣ. ಆದರೆ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ತಂದ ತಿದ್ದುಪಡಿ ಯಾವುದೇ ಕಾರಣಕ್ಕೂ ಆಗ ಅಧಿಕಾರದಲ್ಲಿರುವ ಸಮಿತಿಗೆ ಅನ್ವಯವಾಗಕೂಡದು. ಅದನ್ನು ಮುಂದಿನ ಅವಧಿಯಿಂದ ಜಾರಿಗೆ ತರಬೇಕಿತ್ತು. ಆದುದರಿಂದ ಸದ್ಯ ಮನು ಬಳಿಗಾರರ ಅಧಿಕಾರವೇ ಅಪ್ರಜಾಸತ್ತಾತ್ಮಕ ಮತ್ತು ಅಸಾಂವಿಧಾನಿಕ. ಆದುದರಿಂದ ಮನು ಬಳಿಗಾರ್ ಕೂಡಲೇ ತನ್ನ ಅಧ್ಯಕ್ಷ ಸ್ಥಾನದ ಸಮಿತಿಯನ್ನು ಬರ್ಖಾಸ್ತುಗೊಳಿಸಲೇಬೇಕು. ಅಧ್ಯಕ್ಷ ಸ್ಥಾನದಿಂದ ಬಳಿಗಾರ್ ಕೆಳಗಿಳಿಯಲೇಬೇಕು ಮತ್ತು ಹೊಸ ಸಮಿತಿಗೆ ಚುನಾವಣೆ ನಡೆಯಬೇಕು.

ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹದಿಮೂರು‌ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಕಳೆದ ವರ್ಷದ ಧಾರವಾಡ ಸಮ್ಮೇಳನಕ್ಕೂ ಹತ್ತು ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕಿಂತ ಹಿಂದಿನ ಅವಧಿಗಳಲ್ಲೂ‌ ಹೀಗೆಯೇ ಬಹುಕೋಟಿ ಅನುದಾನ ನೀಡಲಾಗಿತ್ತು.ಮೂಲತಃ ಸಾಹಿತ್ಯ ಪರಿಷತ್ತು ಎನ್ನುವುದು ಸಮಸ್ತ ಕನ್ನಡಿಗರ ಸ್ವಾಯತ್ತ ಸಂಸ್ಥೆಯೇ ಹೊರತು ಆಡಳಿತ ಸಮಿತಿಯ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಯ ಪಿತ್ರಾರ್ಜಿತ ಸ್ವತ್ತಲ್ಲ. ಅದಕ್ಕೆ ನೀಡುವ ಅನುದಾನಗಳು ಸಮಸ್ತ ಕನ್ನಡಿಗರ ತೆರಿಗೆಯ ದುಡ್ಡು. ಆದುದರಿಂದ ಸಾರ್ವಜನಿಕ ಲೆಕ್ಕಪತ್ರ ಮಂಡನೆಯಾಗಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಪ್ರೈವೇಟ್ ಲಿಮಿಟೆಡ್ ಕಂಪೆನಿಯಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕ ಬಿಡಿ, ಸ್ವತಃ ಅದರ ಸದಸ್ಯರ ವಾರ್ಷಿಕ ಸಭೆಯಲ್ಲೂ ಲೆಕ್ಕಪತ್ರ ಮಂಡನೆ ಮಾಡದೇ ದಶಕವೇ ಕಳೆದಿದೆ. ಮನು ಬಳಿಗಾರ್ ಅಧ್ಯಕ್ಷನಾದ ಬಳಿಕ ಅವರನ್ನು ಸಾಹಿತ್ಯ ಪರಿಷತ್‌ನ‌ ಸದಸ್ಯರಾಗಿರುವ ಗೆಳೆಯರೊಬ್ಬರು ಮುಖತಃ ಭೇಟಿಯಾಗಿ ಆ ಬಗ್ಗೆ ದೂರಿ‌ಕೊಂಡರು. ಸ್ವತಃ ನಾನೂ ಪತ್ರಿಕೆಗಳಲ್ಲಿ ಆ ಬಗ್ಗೆ ಬರೆದಿದ್ದೆ. ಆದರೆ ಮನು ಬಳಿಗಾರ್ ಅದಕ್ಕೆ ಈವರೆಗೆ ಸ್ಪಂದಿಸದೇ ಭ್ರಷ್ಟಾಚಾರಕ್ಕೆ ಪರೋಕ್ಷ ಕಾರಣರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಬಿಡಿ, ಬಾಡಿಗೆ ಕಚೇರಿಯೂ ಇಲ್ಲ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಖಾಸಗಿ ಕಚೇರಿಯಲ್ಲೇ ಬೋರ್ಡೊಂದನ್ನು ತಗಲಿಸಿ ಅದನ್ನೇ ಕಚೇರಿ ಎನ್ನಲಾಗುತ್ತದೆ. ದಕ್ಷಿಣ ಕನ್ನಡದಲ್ಲಿ ಯಾರಾದರೂ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಬಯಸಿದರೆ ಅದಕ್ಕೆ ಅಧ್ಯಕ್ಷನ ಒಪ್ಪಿಗೆಯಿದ್ದರೆ ಮಾತ್ರ ಆತನಿಗೆ ಅರ್ಜಿ ನಮೂನೆ ನೀಡಲಾಗುತ್ತದೆ. ನಮ್ಮಂತಹ ಬಂಡಾಯ ಪ್ರವೃತ್ತಿಯವರು ಸಾಹಿತ್ಯ ಪರಿಷತ್ತಿನ ಸದಸ್ಯರಾಗಲೂ ಜಿಲ್ಲಾಧ್ಯಕ್ಷರು ಬಿಡುತ್ತಿಲ್ಲ. ಈ ವಿಚಾರವೂ ಮನು ಬಳಿಗಾರರಿಗೆ ಗೊತ್ತಿದೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಕೈ ಗೊಂಡಿಲ್ಲ.

ಇತ್ತೀಚೆಗೆ ಮಾಣಿ ಎಂಬಲ್ಲಿ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸಭಾಭವನದ ತುಂಬಾ ಮುಸ್ಲಿಂ ದ್ವೇಷ ಬಿತ್ತುವ ಮತ್ತು ಕೋಮು ಪ್ರಚೋದಕ ಬಿತ್ತಿ ಪತ್ರಗಳನ್ನು ಹಚ್ಚಲಾಗಿತ್ತು. ಇದನ್ನು ಬಂಟ್ವಾಳದ ಕೆಲವು ಪ್ರಜ್ಞಾವಂತ ಯುವಕರು ಗಲಾಟೆ ಮಾಡಿಯೇ ತೆಗೆಸಿದ್ದರು. ಅದಕ್ಕೆ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷ ನೇರ ಹೊಣೆ. ಈ ವಿಚಾರ ಪತ್ರಿಕೆಯಲ್ಲಿ ವರದಿಯಾಗಿದ್ದರೂ ರಾಜ್ಯಾಧ್ಯಕ್ಷ ಮನು ಬಳಿಗಾರ್ ಆ ಕುರಿತಂತೆ ಕ್ರಮ ಕೈ‌ಗೊಂಡಿಲ್ಲ.

ಇವಿಷ್ಟಲ್ಲದೇ ದುರಾಡಳಿತದ ಹತ್ತಾರು ನಿದರ್ಶನಗಳಿವೆ. ಆದುದರಿಂದ ಅನರ್ಹ ಮನು ಬಳಿಗಾರ್ ಕೂಡಲೇ ರಾಜೀನಾಮೆ ನೀಡಬೇಕು..

(ಲೇಖಕರು ಯುವ ಬರಹಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ಅವರ ವ್ಯಕ್ತಿಗತವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವ ಮನು ಬಳಿಗಾರ್ ಈ ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಸ್ವಾಭಿಮಾನ ಇರುವ ಸಾಹಿತಿಗಳೆಲ್ಲರೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...