Homeಮುಖಪುಟಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು... ಯಾಕೆಂದರೆ.? - ಇಸ್ಮತ್‌ ಪಜೀರ್‌

ಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು… ಯಾಕೆಂದರೆ.? – ಇಸ್ಮತ್‌ ಪಜೀರ್‌

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಎಂಬತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತನಗೆ ಮಾತನಾಡಲು ಅವಕಾಶ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರದ್ದೇ ರಾಜೀನಾಮೆಗೆ ಅದೇ ವೇದಿಕೆಯಲ್ಲಿ ನಿಂತು ಬಹಿರಂಗವಾಗಿ ನಮ್ಮ ಸಂಗಾತಿ ಕೆ.ನೀಲಾ ಆಗ್ರಹಿಸಿದ್ದು ಅಧ್ಯಕ್ಷರಿಗೆ ಕೋಲು ಕೊಟ್ಟು ಹೊಡೆಸಿದಂತಾಗಿರಬಹುದು.

ನೀಲಕ್ಕ ಅವರ ಮನು ಬಳಿಗಾರ್ ರಾಜೀನಾಮೆ ಕೊಡಬೇಕೆಂಬ ಆಗ್ರಹಕ್ಕೆ ಮುಖ್ಯ ಕಾರಣ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ತಡೆಹಿಡಿದದ್ದು, ಸಮ್ಮೇಳನಾಧ್ಯಕ್ಷರನ್ನು ಬದಲಿಸಬೇಕೆಂಬ ಸರ್ವಾಧಿಕಾರಿ ಧೋರಣೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯ ಭಯೋತ್ಪಾದನೆಯನ್ನು ಮುಂದಿಟ್ಟಾಗಿತ್ತು.

ಸಿ.ಟಿ.ರವಿಯ ಧಮಕಿ ಅಕ್ಷರಶಃ ಭಯೋತ್ಪಾದನೆ. ಎರಡನೇ ದಿನಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದುವರಿಸಿದರೆ ಪೆಟ್ರೋಲ್ ಬಾಂಬ್ ಹಾಕುತ್ತೇನೆಂದು ಬೆದರಿಸಿದ್ದು ಜನ ಮನದಲ್ಲಿ ಭಯವನ್ನು ಉತ್ಪಾದಿಸುವುದೇ ಆಗಿದೆ. ಅದನ್ನು‌ ಭಯೋತ್ಪಾದನೆ ಎನ್ನದೇ ಬೇರೇನೂ ಎನ್ನಲು ಸಾಧ್ಯವಿಲ್ಲ.

ಮೊನ್ನೆ ನೀಲಕ್ಕ ಹೇಳಿರುವ ಕಾರಣಗಳಲ್ಲದೇ ಮನು ಬಳಿಗಾರ್ ರಾಜೀನಾಮೆ ಕೊಡಲೇಬೇಕು ಎನ್ನುವುದಕ್ಕೆ ಇನ್ನಿತರ ಬಲವಾದ ಸಮರ್ಥನೆಯೂ ಇದೆ.

ಮನು ಬಳಿಗಾರ್ ಈಗ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಮುಂದುವರಿದಿರುವುದೇ ಅಸಾಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕ. ಯಾಕೆಂದರೆ ಸಾಹಿತ್ಯ ಪರಿಷತ್‌‌ನ ಮೂಲ ಬೈಲಾ ಪ್ರಕಾರ ಒಂದು ಚುನಾಯಿತ ಸಮಿತಿಯ ಆಡಳಿತಾವಧಿಯು ಮೂರು ವರ್ಷಗಳು ಮಾತ್ರ. ಮೂರು ವರ್ಷಗಳ ಬಳಿಕ ಮತ್ತೆ ಚುನಾವಣೆ ನಡೆಯಬೇಕು. ಆದರೆ ಮನು ಬಳಿಗಾರ್ ತನ್ನ ಅಧ್ಯಕ್ಷಾವಧಿ ಇನ್ನೇನು ಮುಗಿಯಬೇಕೆನ್ನುವಷ್ಟರಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ ಕರೆದು ಬೈಲಾಕ್ಕೆ ತಿದ್ದುಪಡಿ ಮಾಡಿದರು. ತಿದ್ದುಪಡಿ ಮಾಡಲಾದ ಬೈಲಾ ಪ್ರಕಾರ ಆಡಳಿತ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೇರಿಸಲಾಯಿತು. ಇದು ಬಹಳ ಸ್ಪಷ್ಟವಾಗಿ ತನ್ನ ಅಧಿಕಾರವನ್ನು ಮುಂದುವರಿಸುವ ಸಲುವಾಗಿಯೇ  ಬೈಲಾ ತಿದ್ದುಪಡಿ ಮಾಡಲಾಗಿದ್ದನ್ನು ಸೂಚಿಸುತ್ತದೆ. ಪ್ರಜಾತಾಂತ್ರಿಕವಾಗಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯಲ್ಲೂ ಬೈಲಾ ತಿದ್ದುಪಡಿಗೆ ಅನೇಕ ನಿಬಂಧನೆಗಳಿರುತ್ತವೆ. ಆದರೆ ಇಲ್ಲಿ ತನ್ನ ವಾದವನ್ನು ಸಮಿತಿ ಒಪ್ಪಲು ಬೇಕಾದ ತಂತ್ರವನ್ನು ಮೊದಲೇ ಹೆಣೆದು ಏಕಾಏಕೀ ಸಭೆ ಕರೆಯಲಾಗಿತ್ತು. ಪ್ರಜಾತಾಂತ್ರಿಕವಾಗಿ ರಚಿಸಲಾದ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು.

ಬೈಲಾ ತಿದ್ದುಪಡಿಯನ್ನು ತರ್ಕಕ್ಕೆ ಸಮಂಜಸವೆಂದೇ ಒಪ್ಪಿಕೊಳ್ಳೋಣ. ಆದರೆ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ತಂದ ತಿದ್ದುಪಡಿ ಯಾವುದೇ ಕಾರಣಕ್ಕೂ ಆಗ ಅಧಿಕಾರದಲ್ಲಿರುವ ಸಮಿತಿಗೆ ಅನ್ವಯವಾಗಕೂಡದು. ಅದನ್ನು ಮುಂದಿನ ಅವಧಿಯಿಂದ ಜಾರಿಗೆ ತರಬೇಕಿತ್ತು. ಆದುದರಿಂದ ಸದ್ಯ ಮನು ಬಳಿಗಾರರ ಅಧಿಕಾರವೇ ಅಪ್ರಜಾಸತ್ತಾತ್ಮಕ ಮತ್ತು ಅಸಾಂವಿಧಾನಿಕ. ಆದುದರಿಂದ ಮನು ಬಳಿಗಾರ್ ಕೂಡಲೇ ತನ್ನ ಅಧ್ಯಕ್ಷ ಸ್ಥಾನದ ಸಮಿತಿಯನ್ನು ಬರ್ಖಾಸ್ತುಗೊಳಿಸಲೇಬೇಕು. ಅಧ್ಯಕ್ಷ ಸ್ಥಾನದಿಂದ ಬಳಿಗಾರ್ ಕೆಳಗಿಳಿಯಲೇಬೇಕು ಮತ್ತು ಹೊಸ ಸಮಿತಿಗೆ ಚುನಾವಣೆ ನಡೆಯಬೇಕು.

ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹದಿಮೂರು‌ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಕಳೆದ ವರ್ಷದ ಧಾರವಾಡ ಸಮ್ಮೇಳನಕ್ಕೂ ಹತ್ತು ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕಿಂತ ಹಿಂದಿನ ಅವಧಿಗಳಲ್ಲೂ‌ ಹೀಗೆಯೇ ಬಹುಕೋಟಿ ಅನುದಾನ ನೀಡಲಾಗಿತ್ತು.ಮೂಲತಃ ಸಾಹಿತ್ಯ ಪರಿಷತ್ತು ಎನ್ನುವುದು ಸಮಸ್ತ ಕನ್ನಡಿಗರ ಸ್ವಾಯತ್ತ ಸಂಸ್ಥೆಯೇ ಹೊರತು ಆಡಳಿತ ಸಮಿತಿಯ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಯ ಪಿತ್ರಾರ್ಜಿತ ಸ್ವತ್ತಲ್ಲ. ಅದಕ್ಕೆ ನೀಡುವ ಅನುದಾನಗಳು ಸಮಸ್ತ ಕನ್ನಡಿಗರ ತೆರಿಗೆಯ ದುಡ್ಡು. ಆದುದರಿಂದ ಸಾರ್ವಜನಿಕ ಲೆಕ್ಕಪತ್ರ ಮಂಡನೆಯಾಗಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಪ್ರೈವೇಟ್ ಲಿಮಿಟೆಡ್ ಕಂಪೆನಿಯಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕ ಬಿಡಿ, ಸ್ವತಃ ಅದರ ಸದಸ್ಯರ ವಾರ್ಷಿಕ ಸಭೆಯಲ್ಲೂ ಲೆಕ್ಕಪತ್ರ ಮಂಡನೆ ಮಾಡದೇ ದಶಕವೇ ಕಳೆದಿದೆ. ಮನು ಬಳಿಗಾರ್ ಅಧ್ಯಕ್ಷನಾದ ಬಳಿಕ ಅವರನ್ನು ಸಾಹಿತ್ಯ ಪರಿಷತ್‌ನ‌ ಸದಸ್ಯರಾಗಿರುವ ಗೆಳೆಯರೊಬ್ಬರು ಮುಖತಃ ಭೇಟಿಯಾಗಿ ಆ ಬಗ್ಗೆ ದೂರಿ‌ಕೊಂಡರು. ಸ್ವತಃ ನಾನೂ ಪತ್ರಿಕೆಗಳಲ್ಲಿ ಆ ಬಗ್ಗೆ ಬರೆದಿದ್ದೆ. ಆದರೆ ಮನು ಬಳಿಗಾರ್ ಅದಕ್ಕೆ ಈವರೆಗೆ ಸ್ಪಂದಿಸದೇ ಭ್ರಷ್ಟಾಚಾರಕ್ಕೆ ಪರೋಕ್ಷ ಕಾರಣರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಬಿಡಿ, ಬಾಡಿಗೆ ಕಚೇರಿಯೂ ಇಲ್ಲ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಖಾಸಗಿ ಕಚೇರಿಯಲ್ಲೇ ಬೋರ್ಡೊಂದನ್ನು ತಗಲಿಸಿ ಅದನ್ನೇ ಕಚೇರಿ ಎನ್ನಲಾಗುತ್ತದೆ. ದಕ್ಷಿಣ ಕನ್ನಡದಲ್ಲಿ ಯಾರಾದರೂ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಬಯಸಿದರೆ ಅದಕ್ಕೆ ಅಧ್ಯಕ್ಷನ ಒಪ್ಪಿಗೆಯಿದ್ದರೆ ಮಾತ್ರ ಆತನಿಗೆ ಅರ್ಜಿ ನಮೂನೆ ನೀಡಲಾಗುತ್ತದೆ. ನಮ್ಮಂತಹ ಬಂಡಾಯ ಪ್ರವೃತ್ತಿಯವರು ಸಾಹಿತ್ಯ ಪರಿಷತ್ತಿನ ಸದಸ್ಯರಾಗಲೂ ಜಿಲ್ಲಾಧ್ಯಕ್ಷರು ಬಿಡುತ್ತಿಲ್ಲ. ಈ ವಿಚಾರವೂ ಮನು ಬಳಿಗಾರರಿಗೆ ಗೊತ್ತಿದೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಕೈ ಗೊಂಡಿಲ್ಲ.

ಇತ್ತೀಚೆಗೆ ಮಾಣಿ ಎಂಬಲ್ಲಿ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸಭಾಭವನದ ತುಂಬಾ ಮುಸ್ಲಿಂ ದ್ವೇಷ ಬಿತ್ತುವ ಮತ್ತು ಕೋಮು ಪ್ರಚೋದಕ ಬಿತ್ತಿ ಪತ್ರಗಳನ್ನು ಹಚ್ಚಲಾಗಿತ್ತು. ಇದನ್ನು ಬಂಟ್ವಾಳದ ಕೆಲವು ಪ್ರಜ್ಞಾವಂತ ಯುವಕರು ಗಲಾಟೆ ಮಾಡಿಯೇ ತೆಗೆಸಿದ್ದರು. ಅದಕ್ಕೆ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷ ನೇರ ಹೊಣೆ. ಈ ವಿಚಾರ ಪತ್ರಿಕೆಯಲ್ಲಿ ವರದಿಯಾಗಿದ್ದರೂ ರಾಜ್ಯಾಧ್ಯಕ್ಷ ಮನು ಬಳಿಗಾರ್ ಆ ಕುರಿತಂತೆ ಕ್ರಮ ಕೈ‌ಗೊಂಡಿಲ್ಲ.

ಇವಿಷ್ಟಲ್ಲದೇ ದುರಾಡಳಿತದ ಹತ್ತಾರು ನಿದರ್ಶನಗಳಿವೆ. ಆದುದರಿಂದ ಅನರ್ಹ ಮನು ಬಳಿಗಾರ್ ಕೂಡಲೇ ರಾಜೀನಾಮೆ ನೀಡಬೇಕು..

(ಲೇಖಕರು ಯುವ ಬರಹಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ಅವರ ವ್ಯಕ್ತಿಗತವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವ ಮನು ಬಳಿಗಾರ್ ಈ ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಸ್ವಾಭಿಮಾನ ಇರುವ ಸಾಹಿತಿಗಳೆಲ್ಲರೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...