Homeಮುಖಪುಟಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು... ಯಾಕೆಂದರೆ.? - ಇಸ್ಮತ್‌ ಪಜೀರ್‌

ಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು… ಯಾಕೆಂದರೆ.? – ಇಸ್ಮತ್‌ ಪಜೀರ್‌

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಎಂಬತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತನಗೆ ಮಾತನಾಡಲು ಅವಕಾಶ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರದ್ದೇ ರಾಜೀನಾಮೆಗೆ ಅದೇ ವೇದಿಕೆಯಲ್ಲಿ ನಿಂತು ಬಹಿರಂಗವಾಗಿ ನಮ್ಮ ಸಂಗಾತಿ ಕೆ.ನೀಲಾ ಆಗ್ರಹಿಸಿದ್ದು ಅಧ್ಯಕ್ಷರಿಗೆ ಕೋಲು ಕೊಟ್ಟು ಹೊಡೆಸಿದಂತಾಗಿರಬಹುದು.

ನೀಲಕ್ಕ ಅವರ ಮನು ಬಳಿಗಾರ್ ರಾಜೀನಾಮೆ ಕೊಡಬೇಕೆಂಬ ಆಗ್ರಹಕ್ಕೆ ಮುಖ್ಯ ಕಾರಣ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ತಡೆಹಿಡಿದದ್ದು, ಸಮ್ಮೇಳನಾಧ್ಯಕ್ಷರನ್ನು ಬದಲಿಸಬೇಕೆಂಬ ಸರ್ವಾಧಿಕಾರಿ ಧೋರಣೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯ ಭಯೋತ್ಪಾದನೆಯನ್ನು ಮುಂದಿಟ್ಟಾಗಿತ್ತು.

ಸಿ.ಟಿ.ರವಿಯ ಧಮಕಿ ಅಕ್ಷರಶಃ ಭಯೋತ್ಪಾದನೆ. ಎರಡನೇ ದಿನಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದುವರಿಸಿದರೆ ಪೆಟ್ರೋಲ್ ಬಾಂಬ್ ಹಾಕುತ್ತೇನೆಂದು ಬೆದರಿಸಿದ್ದು ಜನ ಮನದಲ್ಲಿ ಭಯವನ್ನು ಉತ್ಪಾದಿಸುವುದೇ ಆಗಿದೆ. ಅದನ್ನು‌ ಭಯೋತ್ಪಾದನೆ ಎನ್ನದೇ ಬೇರೇನೂ ಎನ್ನಲು ಸಾಧ್ಯವಿಲ್ಲ.

ಮೊನ್ನೆ ನೀಲಕ್ಕ ಹೇಳಿರುವ ಕಾರಣಗಳಲ್ಲದೇ ಮನು ಬಳಿಗಾರ್ ರಾಜೀನಾಮೆ ಕೊಡಲೇಬೇಕು ಎನ್ನುವುದಕ್ಕೆ ಇನ್ನಿತರ ಬಲವಾದ ಸಮರ್ಥನೆಯೂ ಇದೆ.

ಮನು ಬಳಿಗಾರ್ ಈಗ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಮುಂದುವರಿದಿರುವುದೇ ಅಸಾಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕ. ಯಾಕೆಂದರೆ ಸಾಹಿತ್ಯ ಪರಿಷತ್‌‌ನ ಮೂಲ ಬೈಲಾ ಪ್ರಕಾರ ಒಂದು ಚುನಾಯಿತ ಸಮಿತಿಯ ಆಡಳಿತಾವಧಿಯು ಮೂರು ವರ್ಷಗಳು ಮಾತ್ರ. ಮೂರು ವರ್ಷಗಳ ಬಳಿಕ ಮತ್ತೆ ಚುನಾವಣೆ ನಡೆಯಬೇಕು. ಆದರೆ ಮನು ಬಳಿಗಾರ್ ತನ್ನ ಅಧ್ಯಕ್ಷಾವಧಿ ಇನ್ನೇನು ಮುಗಿಯಬೇಕೆನ್ನುವಷ್ಟರಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ ಕರೆದು ಬೈಲಾಕ್ಕೆ ತಿದ್ದುಪಡಿ ಮಾಡಿದರು. ತಿದ್ದುಪಡಿ ಮಾಡಲಾದ ಬೈಲಾ ಪ್ರಕಾರ ಆಡಳಿತ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೇರಿಸಲಾಯಿತು. ಇದು ಬಹಳ ಸ್ಪಷ್ಟವಾಗಿ ತನ್ನ ಅಧಿಕಾರವನ್ನು ಮುಂದುವರಿಸುವ ಸಲುವಾಗಿಯೇ  ಬೈಲಾ ತಿದ್ದುಪಡಿ ಮಾಡಲಾಗಿದ್ದನ್ನು ಸೂಚಿಸುತ್ತದೆ. ಪ್ರಜಾತಾಂತ್ರಿಕವಾಗಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯಲ್ಲೂ ಬೈಲಾ ತಿದ್ದುಪಡಿಗೆ ಅನೇಕ ನಿಬಂಧನೆಗಳಿರುತ್ತವೆ. ಆದರೆ ಇಲ್ಲಿ ತನ್ನ ವಾದವನ್ನು ಸಮಿತಿ ಒಪ್ಪಲು ಬೇಕಾದ ತಂತ್ರವನ್ನು ಮೊದಲೇ ಹೆಣೆದು ಏಕಾಏಕೀ ಸಭೆ ಕರೆಯಲಾಗಿತ್ತು. ಪ್ರಜಾತಾಂತ್ರಿಕವಾಗಿ ರಚಿಸಲಾದ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು.

ಬೈಲಾ ತಿದ್ದುಪಡಿಯನ್ನು ತರ್ಕಕ್ಕೆ ಸಮಂಜಸವೆಂದೇ ಒಪ್ಪಿಕೊಳ್ಳೋಣ. ಆದರೆ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ತಂದ ತಿದ್ದುಪಡಿ ಯಾವುದೇ ಕಾರಣಕ್ಕೂ ಆಗ ಅಧಿಕಾರದಲ್ಲಿರುವ ಸಮಿತಿಗೆ ಅನ್ವಯವಾಗಕೂಡದು. ಅದನ್ನು ಮುಂದಿನ ಅವಧಿಯಿಂದ ಜಾರಿಗೆ ತರಬೇಕಿತ್ತು. ಆದುದರಿಂದ ಸದ್ಯ ಮನು ಬಳಿಗಾರರ ಅಧಿಕಾರವೇ ಅಪ್ರಜಾಸತ್ತಾತ್ಮಕ ಮತ್ತು ಅಸಾಂವಿಧಾನಿಕ. ಆದುದರಿಂದ ಮನು ಬಳಿಗಾರ್ ಕೂಡಲೇ ತನ್ನ ಅಧ್ಯಕ್ಷ ಸ್ಥಾನದ ಸಮಿತಿಯನ್ನು ಬರ್ಖಾಸ್ತುಗೊಳಿಸಲೇಬೇಕು. ಅಧ್ಯಕ್ಷ ಸ್ಥಾನದಿಂದ ಬಳಿಗಾರ್ ಕೆಳಗಿಳಿಯಲೇಬೇಕು ಮತ್ತು ಹೊಸ ಸಮಿತಿಗೆ ಚುನಾವಣೆ ನಡೆಯಬೇಕು.

ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹದಿಮೂರು‌ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಕಳೆದ ವರ್ಷದ ಧಾರವಾಡ ಸಮ್ಮೇಳನಕ್ಕೂ ಹತ್ತು ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕಿಂತ ಹಿಂದಿನ ಅವಧಿಗಳಲ್ಲೂ‌ ಹೀಗೆಯೇ ಬಹುಕೋಟಿ ಅನುದಾನ ನೀಡಲಾಗಿತ್ತು.ಮೂಲತಃ ಸಾಹಿತ್ಯ ಪರಿಷತ್ತು ಎನ್ನುವುದು ಸಮಸ್ತ ಕನ್ನಡಿಗರ ಸ್ವಾಯತ್ತ ಸಂಸ್ಥೆಯೇ ಹೊರತು ಆಡಳಿತ ಸಮಿತಿಯ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಯ ಪಿತ್ರಾರ್ಜಿತ ಸ್ವತ್ತಲ್ಲ. ಅದಕ್ಕೆ ನೀಡುವ ಅನುದಾನಗಳು ಸಮಸ್ತ ಕನ್ನಡಿಗರ ತೆರಿಗೆಯ ದುಡ್ಡು. ಆದುದರಿಂದ ಸಾರ್ವಜನಿಕ ಲೆಕ್ಕಪತ್ರ ಮಂಡನೆಯಾಗಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಪ್ರೈವೇಟ್ ಲಿಮಿಟೆಡ್ ಕಂಪೆನಿಯಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕ ಬಿಡಿ, ಸ್ವತಃ ಅದರ ಸದಸ್ಯರ ವಾರ್ಷಿಕ ಸಭೆಯಲ್ಲೂ ಲೆಕ್ಕಪತ್ರ ಮಂಡನೆ ಮಾಡದೇ ದಶಕವೇ ಕಳೆದಿದೆ. ಮನು ಬಳಿಗಾರ್ ಅಧ್ಯಕ್ಷನಾದ ಬಳಿಕ ಅವರನ್ನು ಸಾಹಿತ್ಯ ಪರಿಷತ್‌ನ‌ ಸದಸ್ಯರಾಗಿರುವ ಗೆಳೆಯರೊಬ್ಬರು ಮುಖತಃ ಭೇಟಿಯಾಗಿ ಆ ಬಗ್ಗೆ ದೂರಿ‌ಕೊಂಡರು. ಸ್ವತಃ ನಾನೂ ಪತ್ರಿಕೆಗಳಲ್ಲಿ ಆ ಬಗ್ಗೆ ಬರೆದಿದ್ದೆ. ಆದರೆ ಮನು ಬಳಿಗಾರ್ ಅದಕ್ಕೆ ಈವರೆಗೆ ಸ್ಪಂದಿಸದೇ ಭ್ರಷ್ಟಾಚಾರಕ್ಕೆ ಪರೋಕ್ಷ ಕಾರಣರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಬಿಡಿ, ಬಾಡಿಗೆ ಕಚೇರಿಯೂ ಇಲ್ಲ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಖಾಸಗಿ ಕಚೇರಿಯಲ್ಲೇ ಬೋರ್ಡೊಂದನ್ನು ತಗಲಿಸಿ ಅದನ್ನೇ ಕಚೇರಿ ಎನ್ನಲಾಗುತ್ತದೆ. ದಕ್ಷಿಣ ಕನ್ನಡದಲ್ಲಿ ಯಾರಾದರೂ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಬಯಸಿದರೆ ಅದಕ್ಕೆ ಅಧ್ಯಕ್ಷನ ಒಪ್ಪಿಗೆಯಿದ್ದರೆ ಮಾತ್ರ ಆತನಿಗೆ ಅರ್ಜಿ ನಮೂನೆ ನೀಡಲಾಗುತ್ತದೆ. ನಮ್ಮಂತಹ ಬಂಡಾಯ ಪ್ರವೃತ್ತಿಯವರು ಸಾಹಿತ್ಯ ಪರಿಷತ್ತಿನ ಸದಸ್ಯರಾಗಲೂ ಜಿಲ್ಲಾಧ್ಯಕ್ಷರು ಬಿಡುತ್ತಿಲ್ಲ. ಈ ವಿಚಾರವೂ ಮನು ಬಳಿಗಾರರಿಗೆ ಗೊತ್ತಿದೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಕೈ ಗೊಂಡಿಲ್ಲ.

ಇತ್ತೀಚೆಗೆ ಮಾಣಿ ಎಂಬಲ್ಲಿ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸಭಾಭವನದ ತುಂಬಾ ಮುಸ್ಲಿಂ ದ್ವೇಷ ಬಿತ್ತುವ ಮತ್ತು ಕೋಮು ಪ್ರಚೋದಕ ಬಿತ್ತಿ ಪತ್ರಗಳನ್ನು ಹಚ್ಚಲಾಗಿತ್ತು. ಇದನ್ನು ಬಂಟ್ವಾಳದ ಕೆಲವು ಪ್ರಜ್ಞಾವಂತ ಯುವಕರು ಗಲಾಟೆ ಮಾಡಿಯೇ ತೆಗೆಸಿದ್ದರು. ಅದಕ್ಕೆ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷ ನೇರ ಹೊಣೆ. ಈ ವಿಚಾರ ಪತ್ರಿಕೆಯಲ್ಲಿ ವರದಿಯಾಗಿದ್ದರೂ ರಾಜ್ಯಾಧ್ಯಕ್ಷ ಮನು ಬಳಿಗಾರ್ ಆ ಕುರಿತಂತೆ ಕ್ರಮ ಕೈ‌ಗೊಂಡಿಲ್ಲ.

ಇವಿಷ್ಟಲ್ಲದೇ ದುರಾಡಳಿತದ ಹತ್ತಾರು ನಿದರ್ಶನಗಳಿವೆ. ಆದುದರಿಂದ ಅನರ್ಹ ಮನು ಬಳಿಗಾರ್ ಕೂಡಲೇ ರಾಜೀನಾಮೆ ನೀಡಬೇಕು..

(ಲೇಖಕರು ಯುವ ಬರಹಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ಅವರ ವ್ಯಕ್ತಿಗತವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವ ಮನು ಬಳಿಗಾರ್ ಈ ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಸ್ವಾಭಿಮಾನ ಇರುವ ಸಾಹಿತಿಗಳೆಲ್ಲರೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...