Homeಮುಖಪುಟಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು... ಯಾಕೆಂದರೆ.? - ಇಸ್ಮತ್‌ ಪಜೀರ್‌

ಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು… ಯಾಕೆಂದರೆ.? – ಇಸ್ಮತ್‌ ಪಜೀರ್‌

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಎಂಬತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತನಗೆ ಮಾತನಾಡಲು ಅವಕಾಶ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರದ್ದೇ ರಾಜೀನಾಮೆಗೆ ಅದೇ ವೇದಿಕೆಯಲ್ಲಿ ನಿಂತು ಬಹಿರಂಗವಾಗಿ ನಮ್ಮ ಸಂಗಾತಿ ಕೆ.ನೀಲಾ ಆಗ್ರಹಿಸಿದ್ದು ಅಧ್ಯಕ್ಷರಿಗೆ ಕೋಲು ಕೊಟ್ಟು ಹೊಡೆಸಿದಂತಾಗಿರಬಹುದು.

ನೀಲಕ್ಕ ಅವರ ಮನು ಬಳಿಗಾರ್ ರಾಜೀನಾಮೆ ಕೊಡಬೇಕೆಂಬ ಆಗ್ರಹಕ್ಕೆ ಮುಖ್ಯ ಕಾರಣ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ತಡೆಹಿಡಿದದ್ದು, ಸಮ್ಮೇಳನಾಧ್ಯಕ್ಷರನ್ನು ಬದಲಿಸಬೇಕೆಂಬ ಸರ್ವಾಧಿಕಾರಿ ಧೋರಣೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯ ಭಯೋತ್ಪಾದನೆಯನ್ನು ಮುಂದಿಟ್ಟಾಗಿತ್ತು.

ಸಿ.ಟಿ.ರವಿಯ ಧಮಕಿ ಅಕ್ಷರಶಃ ಭಯೋತ್ಪಾದನೆ. ಎರಡನೇ ದಿನಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದುವರಿಸಿದರೆ ಪೆಟ್ರೋಲ್ ಬಾಂಬ್ ಹಾಕುತ್ತೇನೆಂದು ಬೆದರಿಸಿದ್ದು ಜನ ಮನದಲ್ಲಿ ಭಯವನ್ನು ಉತ್ಪಾದಿಸುವುದೇ ಆಗಿದೆ. ಅದನ್ನು‌ ಭಯೋತ್ಪಾದನೆ ಎನ್ನದೇ ಬೇರೇನೂ ಎನ್ನಲು ಸಾಧ್ಯವಿಲ್ಲ.

ಮೊನ್ನೆ ನೀಲಕ್ಕ ಹೇಳಿರುವ ಕಾರಣಗಳಲ್ಲದೇ ಮನು ಬಳಿಗಾರ್ ರಾಜೀನಾಮೆ ಕೊಡಲೇಬೇಕು ಎನ್ನುವುದಕ್ಕೆ ಇನ್ನಿತರ ಬಲವಾದ ಸಮರ್ಥನೆಯೂ ಇದೆ.

ಮನು ಬಳಿಗಾರ್ ಈಗ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಮುಂದುವರಿದಿರುವುದೇ ಅಸಾಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕ. ಯಾಕೆಂದರೆ ಸಾಹಿತ್ಯ ಪರಿಷತ್‌‌ನ ಮೂಲ ಬೈಲಾ ಪ್ರಕಾರ ಒಂದು ಚುನಾಯಿತ ಸಮಿತಿಯ ಆಡಳಿತಾವಧಿಯು ಮೂರು ವರ್ಷಗಳು ಮಾತ್ರ. ಮೂರು ವರ್ಷಗಳ ಬಳಿಕ ಮತ್ತೆ ಚುನಾವಣೆ ನಡೆಯಬೇಕು. ಆದರೆ ಮನು ಬಳಿಗಾರ್ ತನ್ನ ಅಧ್ಯಕ್ಷಾವಧಿ ಇನ್ನೇನು ಮುಗಿಯಬೇಕೆನ್ನುವಷ್ಟರಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ ಕರೆದು ಬೈಲಾಕ್ಕೆ ತಿದ್ದುಪಡಿ ಮಾಡಿದರು. ತಿದ್ದುಪಡಿ ಮಾಡಲಾದ ಬೈಲಾ ಪ್ರಕಾರ ಆಡಳಿತ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೇರಿಸಲಾಯಿತು. ಇದು ಬಹಳ ಸ್ಪಷ್ಟವಾಗಿ ತನ್ನ ಅಧಿಕಾರವನ್ನು ಮುಂದುವರಿಸುವ ಸಲುವಾಗಿಯೇ  ಬೈಲಾ ತಿದ್ದುಪಡಿ ಮಾಡಲಾಗಿದ್ದನ್ನು ಸೂಚಿಸುತ್ತದೆ. ಪ್ರಜಾತಾಂತ್ರಿಕವಾಗಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯಲ್ಲೂ ಬೈಲಾ ತಿದ್ದುಪಡಿಗೆ ಅನೇಕ ನಿಬಂಧನೆಗಳಿರುತ್ತವೆ. ಆದರೆ ಇಲ್ಲಿ ತನ್ನ ವಾದವನ್ನು ಸಮಿತಿ ಒಪ್ಪಲು ಬೇಕಾದ ತಂತ್ರವನ್ನು ಮೊದಲೇ ಹೆಣೆದು ಏಕಾಏಕೀ ಸಭೆ ಕರೆಯಲಾಗಿತ್ತು. ಪ್ರಜಾತಾಂತ್ರಿಕವಾಗಿ ರಚಿಸಲಾದ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು.

ಬೈಲಾ ತಿದ್ದುಪಡಿಯನ್ನು ತರ್ಕಕ್ಕೆ ಸಮಂಜಸವೆಂದೇ ಒಪ್ಪಿಕೊಳ್ಳೋಣ. ಆದರೆ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ತಂದ ತಿದ್ದುಪಡಿ ಯಾವುದೇ ಕಾರಣಕ್ಕೂ ಆಗ ಅಧಿಕಾರದಲ್ಲಿರುವ ಸಮಿತಿಗೆ ಅನ್ವಯವಾಗಕೂಡದು. ಅದನ್ನು ಮುಂದಿನ ಅವಧಿಯಿಂದ ಜಾರಿಗೆ ತರಬೇಕಿತ್ತು. ಆದುದರಿಂದ ಸದ್ಯ ಮನು ಬಳಿಗಾರರ ಅಧಿಕಾರವೇ ಅಪ್ರಜಾಸತ್ತಾತ್ಮಕ ಮತ್ತು ಅಸಾಂವಿಧಾನಿಕ. ಆದುದರಿಂದ ಮನು ಬಳಿಗಾರ್ ಕೂಡಲೇ ತನ್ನ ಅಧ್ಯಕ್ಷ ಸ್ಥಾನದ ಸಮಿತಿಯನ್ನು ಬರ್ಖಾಸ್ತುಗೊಳಿಸಲೇಬೇಕು. ಅಧ್ಯಕ್ಷ ಸ್ಥಾನದಿಂದ ಬಳಿಗಾರ್ ಕೆಳಗಿಳಿಯಲೇಬೇಕು ಮತ್ತು ಹೊಸ ಸಮಿತಿಗೆ ಚುನಾವಣೆ ನಡೆಯಬೇಕು.

ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹದಿಮೂರು‌ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಕಳೆದ ವರ್ಷದ ಧಾರವಾಡ ಸಮ್ಮೇಳನಕ್ಕೂ ಹತ್ತು ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕಿಂತ ಹಿಂದಿನ ಅವಧಿಗಳಲ್ಲೂ‌ ಹೀಗೆಯೇ ಬಹುಕೋಟಿ ಅನುದಾನ ನೀಡಲಾಗಿತ್ತು.ಮೂಲತಃ ಸಾಹಿತ್ಯ ಪರಿಷತ್ತು ಎನ್ನುವುದು ಸಮಸ್ತ ಕನ್ನಡಿಗರ ಸ್ವಾಯತ್ತ ಸಂಸ್ಥೆಯೇ ಹೊರತು ಆಡಳಿತ ಸಮಿತಿಯ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಯ ಪಿತ್ರಾರ್ಜಿತ ಸ್ವತ್ತಲ್ಲ. ಅದಕ್ಕೆ ನೀಡುವ ಅನುದಾನಗಳು ಸಮಸ್ತ ಕನ್ನಡಿಗರ ತೆರಿಗೆಯ ದುಡ್ಡು. ಆದುದರಿಂದ ಸಾರ್ವಜನಿಕ ಲೆಕ್ಕಪತ್ರ ಮಂಡನೆಯಾಗಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಪ್ರೈವೇಟ್ ಲಿಮಿಟೆಡ್ ಕಂಪೆನಿಯಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕ ಬಿಡಿ, ಸ್ವತಃ ಅದರ ಸದಸ್ಯರ ವಾರ್ಷಿಕ ಸಭೆಯಲ್ಲೂ ಲೆಕ್ಕಪತ್ರ ಮಂಡನೆ ಮಾಡದೇ ದಶಕವೇ ಕಳೆದಿದೆ. ಮನು ಬಳಿಗಾರ್ ಅಧ್ಯಕ್ಷನಾದ ಬಳಿಕ ಅವರನ್ನು ಸಾಹಿತ್ಯ ಪರಿಷತ್‌ನ‌ ಸದಸ್ಯರಾಗಿರುವ ಗೆಳೆಯರೊಬ್ಬರು ಮುಖತಃ ಭೇಟಿಯಾಗಿ ಆ ಬಗ್ಗೆ ದೂರಿ‌ಕೊಂಡರು. ಸ್ವತಃ ನಾನೂ ಪತ್ರಿಕೆಗಳಲ್ಲಿ ಆ ಬಗ್ಗೆ ಬರೆದಿದ್ದೆ. ಆದರೆ ಮನು ಬಳಿಗಾರ್ ಅದಕ್ಕೆ ಈವರೆಗೆ ಸ್ಪಂದಿಸದೇ ಭ್ರಷ್ಟಾಚಾರಕ್ಕೆ ಪರೋಕ್ಷ ಕಾರಣರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಬಿಡಿ, ಬಾಡಿಗೆ ಕಚೇರಿಯೂ ಇಲ್ಲ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಖಾಸಗಿ ಕಚೇರಿಯಲ್ಲೇ ಬೋರ್ಡೊಂದನ್ನು ತಗಲಿಸಿ ಅದನ್ನೇ ಕಚೇರಿ ಎನ್ನಲಾಗುತ್ತದೆ. ದಕ್ಷಿಣ ಕನ್ನಡದಲ್ಲಿ ಯಾರಾದರೂ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಬಯಸಿದರೆ ಅದಕ್ಕೆ ಅಧ್ಯಕ್ಷನ ಒಪ್ಪಿಗೆಯಿದ್ದರೆ ಮಾತ್ರ ಆತನಿಗೆ ಅರ್ಜಿ ನಮೂನೆ ನೀಡಲಾಗುತ್ತದೆ. ನಮ್ಮಂತಹ ಬಂಡಾಯ ಪ್ರವೃತ್ತಿಯವರು ಸಾಹಿತ್ಯ ಪರಿಷತ್ತಿನ ಸದಸ್ಯರಾಗಲೂ ಜಿಲ್ಲಾಧ್ಯಕ್ಷರು ಬಿಡುತ್ತಿಲ್ಲ. ಈ ವಿಚಾರವೂ ಮನು ಬಳಿಗಾರರಿಗೆ ಗೊತ್ತಿದೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಕೈ ಗೊಂಡಿಲ್ಲ.

ಇತ್ತೀಚೆಗೆ ಮಾಣಿ ಎಂಬಲ್ಲಿ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸಭಾಭವನದ ತುಂಬಾ ಮುಸ್ಲಿಂ ದ್ವೇಷ ಬಿತ್ತುವ ಮತ್ತು ಕೋಮು ಪ್ರಚೋದಕ ಬಿತ್ತಿ ಪತ್ರಗಳನ್ನು ಹಚ್ಚಲಾಗಿತ್ತು. ಇದನ್ನು ಬಂಟ್ವಾಳದ ಕೆಲವು ಪ್ರಜ್ಞಾವಂತ ಯುವಕರು ಗಲಾಟೆ ಮಾಡಿಯೇ ತೆಗೆಸಿದ್ದರು. ಅದಕ್ಕೆ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷ ನೇರ ಹೊಣೆ. ಈ ವಿಚಾರ ಪತ್ರಿಕೆಯಲ್ಲಿ ವರದಿಯಾಗಿದ್ದರೂ ರಾಜ್ಯಾಧ್ಯಕ್ಷ ಮನು ಬಳಿಗಾರ್ ಆ ಕುರಿತಂತೆ ಕ್ರಮ ಕೈ‌ಗೊಂಡಿಲ್ಲ.

ಇವಿಷ್ಟಲ್ಲದೇ ದುರಾಡಳಿತದ ಹತ್ತಾರು ನಿದರ್ಶನಗಳಿವೆ. ಆದುದರಿಂದ ಅನರ್ಹ ಮನು ಬಳಿಗಾರ್ ಕೂಡಲೇ ರಾಜೀನಾಮೆ ನೀಡಬೇಕು..

(ಲೇಖಕರು ಯುವ ಬರಹಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ಅವರ ವ್ಯಕ್ತಿಗತವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವ ಮನು ಬಳಿಗಾರ್ ಈ ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಸ್ವಾಭಿಮಾನ ಇರುವ ಸಾಹಿತಿಗಳೆಲ್ಲರೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...