Homeಮುಖಪುಟಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು... ಯಾಕೆಂದರೆ.? - ಇಸ್ಮತ್‌ ಪಜೀರ್‌

ಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು… ಯಾಕೆಂದರೆ.? – ಇಸ್ಮತ್‌ ಪಜೀರ್‌

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಎಂಬತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತನಗೆ ಮಾತನಾಡಲು ಅವಕಾಶ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರದ್ದೇ ರಾಜೀನಾಮೆಗೆ ಅದೇ ವೇದಿಕೆಯಲ್ಲಿ ನಿಂತು ಬಹಿರಂಗವಾಗಿ ನಮ್ಮ ಸಂಗಾತಿ ಕೆ.ನೀಲಾ ಆಗ್ರಹಿಸಿದ್ದು ಅಧ್ಯಕ್ಷರಿಗೆ ಕೋಲು ಕೊಟ್ಟು ಹೊಡೆಸಿದಂತಾಗಿರಬಹುದು.

ನೀಲಕ್ಕ ಅವರ ಮನು ಬಳಿಗಾರ್ ರಾಜೀನಾಮೆ ಕೊಡಬೇಕೆಂಬ ಆಗ್ರಹಕ್ಕೆ ಮುಖ್ಯ ಕಾರಣ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ತಡೆಹಿಡಿದದ್ದು, ಸಮ್ಮೇಳನಾಧ್ಯಕ್ಷರನ್ನು ಬದಲಿಸಬೇಕೆಂಬ ಸರ್ವಾಧಿಕಾರಿ ಧೋರಣೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯ ಭಯೋತ್ಪಾದನೆಯನ್ನು ಮುಂದಿಟ್ಟಾಗಿತ್ತು.

ಸಿ.ಟಿ.ರವಿಯ ಧಮಕಿ ಅಕ್ಷರಶಃ ಭಯೋತ್ಪಾದನೆ. ಎರಡನೇ ದಿನಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದುವರಿಸಿದರೆ ಪೆಟ್ರೋಲ್ ಬಾಂಬ್ ಹಾಕುತ್ತೇನೆಂದು ಬೆದರಿಸಿದ್ದು ಜನ ಮನದಲ್ಲಿ ಭಯವನ್ನು ಉತ್ಪಾದಿಸುವುದೇ ಆಗಿದೆ. ಅದನ್ನು‌ ಭಯೋತ್ಪಾದನೆ ಎನ್ನದೇ ಬೇರೇನೂ ಎನ್ನಲು ಸಾಧ್ಯವಿಲ್ಲ.

ಮೊನ್ನೆ ನೀಲಕ್ಕ ಹೇಳಿರುವ ಕಾರಣಗಳಲ್ಲದೇ ಮನು ಬಳಿಗಾರ್ ರಾಜೀನಾಮೆ ಕೊಡಲೇಬೇಕು ಎನ್ನುವುದಕ್ಕೆ ಇನ್ನಿತರ ಬಲವಾದ ಸಮರ್ಥನೆಯೂ ಇದೆ.

ಮನು ಬಳಿಗಾರ್ ಈಗ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಮುಂದುವರಿದಿರುವುದೇ ಅಸಾಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕ. ಯಾಕೆಂದರೆ ಸಾಹಿತ್ಯ ಪರಿಷತ್‌‌ನ ಮೂಲ ಬೈಲಾ ಪ್ರಕಾರ ಒಂದು ಚುನಾಯಿತ ಸಮಿತಿಯ ಆಡಳಿತಾವಧಿಯು ಮೂರು ವರ್ಷಗಳು ಮಾತ್ರ. ಮೂರು ವರ್ಷಗಳ ಬಳಿಕ ಮತ್ತೆ ಚುನಾವಣೆ ನಡೆಯಬೇಕು. ಆದರೆ ಮನು ಬಳಿಗಾರ್ ತನ್ನ ಅಧ್ಯಕ್ಷಾವಧಿ ಇನ್ನೇನು ಮುಗಿಯಬೇಕೆನ್ನುವಷ್ಟರಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ ಕರೆದು ಬೈಲಾಕ್ಕೆ ತಿದ್ದುಪಡಿ ಮಾಡಿದರು. ತಿದ್ದುಪಡಿ ಮಾಡಲಾದ ಬೈಲಾ ಪ್ರಕಾರ ಆಡಳಿತ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೇರಿಸಲಾಯಿತು. ಇದು ಬಹಳ ಸ್ಪಷ್ಟವಾಗಿ ತನ್ನ ಅಧಿಕಾರವನ್ನು ಮುಂದುವರಿಸುವ ಸಲುವಾಗಿಯೇ  ಬೈಲಾ ತಿದ್ದುಪಡಿ ಮಾಡಲಾಗಿದ್ದನ್ನು ಸೂಚಿಸುತ್ತದೆ. ಪ್ರಜಾತಾಂತ್ರಿಕವಾಗಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯಲ್ಲೂ ಬೈಲಾ ತಿದ್ದುಪಡಿಗೆ ಅನೇಕ ನಿಬಂಧನೆಗಳಿರುತ್ತವೆ. ಆದರೆ ಇಲ್ಲಿ ತನ್ನ ವಾದವನ್ನು ಸಮಿತಿ ಒಪ್ಪಲು ಬೇಕಾದ ತಂತ್ರವನ್ನು ಮೊದಲೇ ಹೆಣೆದು ಏಕಾಏಕೀ ಸಭೆ ಕರೆಯಲಾಗಿತ್ತು. ಪ್ರಜಾತಾಂತ್ರಿಕವಾಗಿ ರಚಿಸಲಾದ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು.

ಬೈಲಾ ತಿದ್ದುಪಡಿಯನ್ನು ತರ್ಕಕ್ಕೆ ಸಮಂಜಸವೆಂದೇ ಒಪ್ಪಿಕೊಳ್ಳೋಣ. ಆದರೆ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ತಂದ ತಿದ್ದುಪಡಿ ಯಾವುದೇ ಕಾರಣಕ್ಕೂ ಆಗ ಅಧಿಕಾರದಲ್ಲಿರುವ ಸಮಿತಿಗೆ ಅನ್ವಯವಾಗಕೂಡದು. ಅದನ್ನು ಮುಂದಿನ ಅವಧಿಯಿಂದ ಜಾರಿಗೆ ತರಬೇಕಿತ್ತು. ಆದುದರಿಂದ ಸದ್ಯ ಮನು ಬಳಿಗಾರರ ಅಧಿಕಾರವೇ ಅಪ್ರಜಾಸತ್ತಾತ್ಮಕ ಮತ್ತು ಅಸಾಂವಿಧಾನಿಕ. ಆದುದರಿಂದ ಮನು ಬಳಿಗಾರ್ ಕೂಡಲೇ ತನ್ನ ಅಧ್ಯಕ್ಷ ಸ್ಥಾನದ ಸಮಿತಿಯನ್ನು ಬರ್ಖಾಸ್ತುಗೊಳಿಸಲೇಬೇಕು. ಅಧ್ಯಕ್ಷ ಸ್ಥಾನದಿಂದ ಬಳಿಗಾರ್ ಕೆಳಗಿಳಿಯಲೇಬೇಕು ಮತ್ತು ಹೊಸ ಸಮಿತಿಗೆ ಚುನಾವಣೆ ನಡೆಯಬೇಕು.

ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹದಿಮೂರು‌ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಕಳೆದ ವರ್ಷದ ಧಾರವಾಡ ಸಮ್ಮೇಳನಕ್ಕೂ ಹತ್ತು ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕಿಂತ ಹಿಂದಿನ ಅವಧಿಗಳಲ್ಲೂ‌ ಹೀಗೆಯೇ ಬಹುಕೋಟಿ ಅನುದಾನ ನೀಡಲಾಗಿತ್ತು.ಮೂಲತಃ ಸಾಹಿತ್ಯ ಪರಿಷತ್ತು ಎನ್ನುವುದು ಸಮಸ್ತ ಕನ್ನಡಿಗರ ಸ್ವಾಯತ್ತ ಸಂಸ್ಥೆಯೇ ಹೊರತು ಆಡಳಿತ ಸಮಿತಿಯ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಯ ಪಿತ್ರಾರ್ಜಿತ ಸ್ವತ್ತಲ್ಲ. ಅದಕ್ಕೆ ನೀಡುವ ಅನುದಾನಗಳು ಸಮಸ್ತ ಕನ್ನಡಿಗರ ತೆರಿಗೆಯ ದುಡ್ಡು. ಆದುದರಿಂದ ಸಾರ್ವಜನಿಕ ಲೆಕ್ಕಪತ್ರ ಮಂಡನೆಯಾಗಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಪ್ರೈವೇಟ್ ಲಿಮಿಟೆಡ್ ಕಂಪೆನಿಯಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕ ಬಿಡಿ, ಸ್ವತಃ ಅದರ ಸದಸ್ಯರ ವಾರ್ಷಿಕ ಸಭೆಯಲ್ಲೂ ಲೆಕ್ಕಪತ್ರ ಮಂಡನೆ ಮಾಡದೇ ದಶಕವೇ ಕಳೆದಿದೆ. ಮನು ಬಳಿಗಾರ್ ಅಧ್ಯಕ್ಷನಾದ ಬಳಿಕ ಅವರನ್ನು ಸಾಹಿತ್ಯ ಪರಿಷತ್‌ನ‌ ಸದಸ್ಯರಾಗಿರುವ ಗೆಳೆಯರೊಬ್ಬರು ಮುಖತಃ ಭೇಟಿಯಾಗಿ ಆ ಬಗ್ಗೆ ದೂರಿ‌ಕೊಂಡರು. ಸ್ವತಃ ನಾನೂ ಪತ್ರಿಕೆಗಳಲ್ಲಿ ಆ ಬಗ್ಗೆ ಬರೆದಿದ್ದೆ. ಆದರೆ ಮನು ಬಳಿಗಾರ್ ಅದಕ್ಕೆ ಈವರೆಗೆ ಸ್ಪಂದಿಸದೇ ಭ್ರಷ್ಟಾಚಾರಕ್ಕೆ ಪರೋಕ್ಷ ಕಾರಣರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಬಿಡಿ, ಬಾಡಿಗೆ ಕಚೇರಿಯೂ ಇಲ್ಲ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಖಾಸಗಿ ಕಚೇರಿಯಲ್ಲೇ ಬೋರ್ಡೊಂದನ್ನು ತಗಲಿಸಿ ಅದನ್ನೇ ಕಚೇರಿ ಎನ್ನಲಾಗುತ್ತದೆ. ದಕ್ಷಿಣ ಕನ್ನಡದಲ್ಲಿ ಯಾರಾದರೂ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಬಯಸಿದರೆ ಅದಕ್ಕೆ ಅಧ್ಯಕ್ಷನ ಒಪ್ಪಿಗೆಯಿದ್ದರೆ ಮಾತ್ರ ಆತನಿಗೆ ಅರ್ಜಿ ನಮೂನೆ ನೀಡಲಾಗುತ್ತದೆ. ನಮ್ಮಂತಹ ಬಂಡಾಯ ಪ್ರವೃತ್ತಿಯವರು ಸಾಹಿತ್ಯ ಪರಿಷತ್ತಿನ ಸದಸ್ಯರಾಗಲೂ ಜಿಲ್ಲಾಧ್ಯಕ್ಷರು ಬಿಡುತ್ತಿಲ್ಲ. ಈ ವಿಚಾರವೂ ಮನು ಬಳಿಗಾರರಿಗೆ ಗೊತ್ತಿದೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಕೈ ಗೊಂಡಿಲ್ಲ.

ಇತ್ತೀಚೆಗೆ ಮಾಣಿ ಎಂಬಲ್ಲಿ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸಭಾಭವನದ ತುಂಬಾ ಮುಸ್ಲಿಂ ದ್ವೇಷ ಬಿತ್ತುವ ಮತ್ತು ಕೋಮು ಪ್ರಚೋದಕ ಬಿತ್ತಿ ಪತ್ರಗಳನ್ನು ಹಚ್ಚಲಾಗಿತ್ತು. ಇದನ್ನು ಬಂಟ್ವಾಳದ ಕೆಲವು ಪ್ರಜ್ಞಾವಂತ ಯುವಕರು ಗಲಾಟೆ ಮಾಡಿಯೇ ತೆಗೆಸಿದ್ದರು. ಅದಕ್ಕೆ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷ ನೇರ ಹೊಣೆ. ಈ ವಿಚಾರ ಪತ್ರಿಕೆಯಲ್ಲಿ ವರದಿಯಾಗಿದ್ದರೂ ರಾಜ್ಯಾಧ್ಯಕ್ಷ ಮನು ಬಳಿಗಾರ್ ಆ ಕುರಿತಂತೆ ಕ್ರಮ ಕೈ‌ಗೊಂಡಿಲ್ಲ.

ಇವಿಷ್ಟಲ್ಲದೇ ದುರಾಡಳಿತದ ಹತ್ತಾರು ನಿದರ್ಶನಗಳಿವೆ. ಆದುದರಿಂದ ಅನರ್ಹ ಮನು ಬಳಿಗಾರ್ ಕೂಡಲೇ ರಾಜೀನಾಮೆ ನೀಡಬೇಕು..

(ಲೇಖಕರು ಯುವ ಬರಹಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ಅವರ ವ್ಯಕ್ತಿಗತವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವ ಮನು ಬಳಿಗಾರ್ ಈ ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಸ್ವಾಭಿಮಾನ ಇರುವ ಸಾಹಿತಿಗಳೆಲ್ಲರೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...