Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...