Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...