Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...