Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...