Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...