Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...