Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...