Homeರಾಜಕೀಯಸತ್ತಮೇಲೂ ಬಿಡದೆ ಕಾಡುವ ಜಾತಿಕ್ರೌರ್ಯ: ಮನುಸಂಗಡ ಚಿತ್ರ ತೆರೆದಿಡುವ ಸತ್ಯ

ಸತ್ತಮೇಲೂ ಬಿಡದೆ ಕಾಡುವ ಜಾತಿಕ್ರೌರ್ಯ: ಮನುಸಂಗಡ ಚಿತ್ರ ತೆರೆದಿಡುವ ಸತ್ಯ

- Advertisement -
- Advertisement -

ಜಾತಿಗೊಂದು, ಧರ್ಮಕ್ಕೊಂದು ಸ್ಮಶಾನ ಇಲ್ಲಿವೆ. ಸತ್ತಮೇಲೆಯೂ ಸಾಮಾಜಿಕ ಅಂತರಗಳನ್ನು ಕಾಪಾಡಲಾಗುತ್ತದೆ. ಇವೆಲ್ಲದರ ನಡುವೆ ದಲಿತ (ಎಲ್ಲ ಕೆಳಜಾತಿಗಳು ಸೇರಿ) ಸಮುದಾಯದ ವ್ಯಕ್ತಿಗಳು ಸತ್ತಾಗ ಅವರ ಅಂತ್ಯಕ್ರಿಯೆ ನೆರವೇರಿಸಲು ಹಲವೆಡೆ ಅವರಿಗೆ ಸ್ಮಶಾನಗಳಿಲ್ಲ. ಅವರ ಸಮುದಾಯದವರೇ ಯಾರಾದರೂ ದೊಡ್ಡಮನಸು ಮಾಡಿ ತಮ್ಮ ಜಮೀನುಗಳಲ್ಲಿ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡಬೇಕು. ಇದು ಹೇಗೋ ದೊರಕುತ್ತದೆ ಎಂದುಕೊಂಡರೂ ಊರೊಟ್ಟಿನ ಮಂದಿ ಬಳಸುವ ಸಾಮಾನ್ಯ ರಸ್ತೆಯಲ್ಲಿ ಅಂತ್ಯಕ್ರಿಯೆ ಯಾತ್ರೆಗೆ ಅವಕಾಶ ನಿರಾಕರಿಸುವ ರೂಢಿ ಹಲವೆಡೆ ಇಂದಿಗೂ ಇದೆ.

ತಮಿಳು ಚಲನಚಿತ್ರ “ಮನುಸಂಗಡ” ಇದೇ ವಿಷಯವನ್ನು ನಮ್ಮ ಮುಂದೆ ಇಡುತ್ತದೆ. ಇದು ಕಾಲ್ಪನಿಕ ಚಿತ್ರಕಥೆಯಲ್ಲ. ನಡೆದ, ನಡೆಯುತ್ತಿರುವ ಘಟನಾವಳಿಗಳನ್ನು ಆಧರಿಸಿದ್ದು. ಆದ್ದರಿಂದಲೇ ಇದು ಸಂಪೂರ್ಣವಾಗಿ ಸಿನೆಮ್ಯಾಟಿಕ್ ಭಾಷೆಯಲ್ಲಿ ಇಲ್ಲ. ಇದನ್ನು ಡಾಕ್ಯುಮೆಂಟರಿ ಮಾದರಿಯಲ್ಲಿಯೂ ಹೇಳಲಾಗಿದೆ. ಆದ್ದರಿಂದಲೇ ಇದರ ಕ್ಯಾಮೆರಾ ಭಾಷೆಯೂ ವಿಭಿನ್ನವಾಗಿದೆ ಮತ್ತು ಅಷ್ಟೇ ಸಶಕ್ತವಾಗಿದೆ. ದಲಿತರ ನೋವನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡಲಾಗಿದೆ.

ಈ ಕಥನ ತಮಿಳುನಾಡಿನ ಹಳ್ಳಿಯೊಂದರಲ್ಲಿ ನಡೆಯುತ್ತದೆ. ಇದು ಇತರ ಯಾವುದೇ ರಾಜ್ಯದಲ್ಲಿಯೂ ನಡೆಯಬಹುದು. ಸ್ಥಳ ಇಲ್ಲಿ ನೆಪ ಅಷ್ಟೆ. ಚೆನ್ನೈ ಮಹಾನಗರದ ಕಾರ್ಖಾನೆಯೊಂದರಲ್ಲಿ ದುಡಿಯುವ ಯುವಕ ಕೊಲ್ಲಪ್ಪನ್. ಈತನ ತಂದೆ ಮರಣ ಹೊಂದಿದ ಸುದ್ದಿ ಬರುತ್ತದೆ. ಈತ ಗ್ರಾಮಕ್ಕೆ ಬರುತ್ತಾನೆ. ತಾಯಿಯ, ಸಂಬಂಧಿಕರ ದುಃಖ ಕಟ್ಟೆಯೊಡೆದಿರುತ್ತದೆ. ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆಯುವಾಗಲೇ ಊರೊಟ್ಟಿನ ರಸ್ತೆ (ಸಾಮಾನ್ಯ ರಸ್ತೆ)ಯಲ್ಲಿ ಶವ ತೆಗೆದುಕೊಂಡು ಹೋಗಲು ಮೇಲ್ಜಾತಿಯವರು ಬಿಡುವುದಿಲ್ಲ ಎಂಬ ವಿಷಯ ಚರ್ಚೆಯಾಗುತ್ತದೆ.

ಪೊಲೀಸ್ ಸ್ಟೇಷನ್, ಕಂದಾಯಾಧಿಕಾರಿ ಕಚೇರಿಗಳಿಗೆ ಅಲೆದರೂ ರಕ್ಷಣೆ ಭರವಸೆ ದೊರೆಯುವುದಿಲ್ಲ. ಹೈಕೋರ್ಟಿನಲ್ಲಿ ರಿಟ್ ಪಿಟಿಷನ್ ಹಾಕಲಾಗುತ್ತದೆ. ಆಗ ಸರ್ಕಾರಿ ವಕೀಲರು ಹೇಳುವುದು “ಗ್ರಾಮದ ಸಾಮಾನ್ಯ ರಸ್ತೆಯಲ್ಲಿ ದಲಿತ ಸಮುದಾಯದ ವ್ಯಕ್ತಿಯ ಶವ ತೆಗೆದುಕೊಂಡು ಹೋದರೆ ಕಾನೂನು ಸುವ್ಯವಸ್ಥೆ ಕೈಮೀರಿ ಹೋಗಬಹುದು” ಇದು ನ್ಯಾಯಾಧೀಶರಿಗೆ ಅಚ್ಚರಿ ಉಂಟು ಮಾಡುತ್ತದೆ. ಅರ್ಜಿದಾರ ಕೊಲ್ಲಪ್ಪನ್ ತಂದೆಯ ಅಂತ್ಯಕ್ರಿಯೆ ಯಾತ್ರೆಯನ್ನು ಸಾಮಾನ್ಯ ರಸ್ತೆಯಲ್ಲಿ ತೆಗೆದುಕೊಂಡು ಹೋಗಲು, ಅಂತ್ಯಕ್ರಿಯೆ ಯಾವುದೇ ಸಮಸ್ಯೆಗಳಿಲ್ಲದಂತೆ ನಡೆಯಲು ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಡಳಿತ, ಪೊಲೀಸರಿಗೆ ಸೂಚಿಸುತ್ತದೆ.

ಪ್ರಾಯೋಗಿಕವಾಗಿ ಹೈಕೋರ್ಟ್ ಆದೇಶ ಪ್ರಹಶನದಂತೆ ಆಗಿಬಿಡುತ್ತದೆ. ಕಂದಾಯಾಧಿಕಾರಿ, ಪೊಲೀಸ್ ಉನ್ನತಾಧಿಕಾರಿಗಳು ಮೇಲ್ಜಾತಿಯ ವಕ್ತಾರರಾಗುತ್ತಾರೆ. “ಸಾಮಾನ್ಯ ರಸ್ತೆಯಲ್ಲಿ ಶವ ತೆಗೆದುಕೊಂಡು ಹೋಗುವುದು ಬೇಡ. ಪರ್ಯಾಯ ಮಾರ್ಗದಲ್ಲಿ ತೆಗದುಕೊಂಡು ಹೋಗಿ” ಎನ್ನುತ್ತಾರೆ. ಪರ್ಯಾಯ ಮಾರ್ಗವೇ ಇಲ್ಲ. ಕಲ್ಲು-ಮುಳ್ಳು-ಪೊದೆಗಳ ಹಾದಿ ಅದು. ಒಂದುವೇಳೆ ಪರ್ಯಾಯ ಹಾದಿಯಿದ್ದರೂ ಅದನ್ನು ಬಳಸುವ ಅನಿವಾರ್ಯತೆ ಏಕೆ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಪೊಲೀಸರೇ ಬಲವಂತವಾಗಿ ಅಂತ್ಯಕ್ರಿಯೆ ನಡೆಸಲು ಮುಂದಾಗುತ್ತಾರೆ.

ಈ ಸಂದರ್ಭದಲ್ಲಿ ಕೊಲ್ಲಪ್ಪನ್ ಸಾಮಾನ್ಯ ಹಾದಿ ಶುರುವಾಗುವಲ್ಲಿ ಒಬ್ಬಂಟಿಯಾಗಿ ಬಂದು ನಿಂತು “ನಿಮ್ಮ ಮನೆಗಳ ಸತ್ತ ನಾಯಿ, ದನ ಸಾಮಾನ್ಯ ರಸ್ತೆಯಲ್ಲಿ ಹೋಗಬಹುದು, ನಮಗ್ಯಾಕೆ ಅವಕಾಶ ನಿರಾಕರಿಸುತ್ತೀರಿ. ನಿಮ್ಮಲ್ಲಿ ಸಾವು ಉಂಟಾದಾಗ ಹೂಳಲು, ಸುಡಲು ನಮ್ಮ ನೆರವು ಬೇಕು. ಆದರೆ ನಮ್ಮ ಶವವನ್ನು ಕೊಂಡೊಯ್ಯಲು ಏಕೆ ನಿರಾಕರಿಸುತ್ತೀರಿ ಎಂದು ಕೇಳುವುದು ಪರಿಣಾಮಕಾರಿ. ಮೇಲ್ಜಾತಿಗಳ ಸಮುದಾಯದಲ್ಲಿ ಸಾವು ಉಂಟಾದಾಗ ಈ ಸುದ್ದಿ ಸಾರಲು ದಲಿತರು ಬೇಕು; ಶವದ ಮೆರವಣಿಗೆಯಲ್ಲಿ ಮುಂದೆ ಸಾಗುತ್ತಾ ತಮಟೆ ಬಡಿಯಲು ಬೇಕು. ಆದರೆ ಈ ಸಮುದಾಯದಲ್ಲಿ ಸಾವು ಉಂಟಾದಾಗ ಅದೇರಸ್ತೆಯಲ್ಲಿ ಸಾಗಲು ಬಿಡುವುದಿಲ್ಲ. ಇದೊಂದು ಕ್ರೂರ ವಿಪರ್ಯಾಸ.

ಕೊಲ್ಲಪ್ಪನ್ ಗೆಳತಿ ಮಹಾನಗರದ ನಿವಾಸಿ. ಈಕೆಗೆ ಹಳ್ಳಿಯ ಬಗ್ಗೆ ರೋಮ್ಯಾಂಟಿಕ್ ಕಲ್ಪನೆಗಳಿವೆ. “ಇಲ್ಲಿ ಇಂಥ ಸಾಮಾಜಿಕ ವಾತಾವರಣ ಇರಬಹುದೆಂದು ನನಗೆ ಗೊತ್ತಿರಲಿಲ್ಲ” ಎನ್ನುತ್ತಾಳೆ. ಅದಕ್ಕೆ ಕೊಲ್ಲಪ್ಪನ್ ಕೊಡುವ ಉತ್ತರ “ಇಲ್ಲಿ ಎಲ್ಲ ಜಾತಿ-ಸಮುದಾಯಗಳವರು ಸಾಮರಸ್ಯದಿಂದ ಜೀವನ ನಡೆಸುತ್ತಾರೆ ಎಂದು ಭಾವಿಸಿದ್ದೆಯಾ” ಬಹುತೇಕ ಗ್ರಾಮಗಳಲ್ಲಿ ಎಲ್ಲ ಜಾತಿಗಳ ಸಾಮರಸ್ಯದ ಬದುಕು ಎಂಬುದೊಂದು ಇನ್ನೂ ರಮ್ಯ ಕಲ್ಪನೆ. ಸಾಮರಸ್ಯವೆಂದರೆ ಇಲ್ಲಿ ಮೇಲ್ಜಾತಿಗಳು ನಡೆಸಿಕೊಂಡು ಬಂದಂಥ ಆಚರಣೆಗಳನ್ನು ಪ್ರಶ್ನೆ ಮಾಡದಿರುವುದು, ತುಳಿಯುತ್ತಲೇ ಇರುವುದನ್ನು ಸಹಿಸಿಕೊಳ್ಳುವುದು.

ಆಸ್ಮೃಶ್ಯತೆ ಎನ್ನುವುದು ಹೇಗೆಲ್ಲ ಆಚರಣೆಯಲ್ಲಿದೆ ಎಂಬುದನ್ನು ನೇರವಾಗಿಯೇ ಹೇಳುವ “ಮನುಸಂಗಡ” ಒಂದು ಡಾಕ್ಯುಮೆಂಟರಿ ಹಂತದಲ್ಲಿಯೇ ನಿಂತು ಬಿಡಬಹುದಾಗಿತ್ತು. ಆದರೆ ನಿರ್ದೇಶಕ ಅಂಶನ್ ಕುಮಾರ್ ಪರಿಶ್ರಮ(ಚಿತ್ರಕಥೆಯೂ ಇವರದೇ) ಇದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಸಿನೆಮ್ಯಾಟಿಕ್ ಪರಿಭಾಷೆಗಳನ್ನೂ ಸಮರ್ಥವಾಗಿ ಬಳಸಿ ಕಥೆ ಹೇಳಲಾಗಿದೆ.

ಪಿ.ಎಸ್ ದರನ್ ಮಾಡಿರುವ ಸಿನೆಮಾಟೋಗ್ರಫಿ ವಿಭಿನ್ನವಾಗಿದೆ. ಈ ಥರದ ಕ್ಯಾಮೆರಾ ಪರಿಭಾಷೆ, ಭಾರತೀಯ ಸಿನೆಮಾಗಳ ಸಂದರ್ಭದಲ್ಲಿ ಬಹಳ ಅಪರೂಪ. ಸಾಕಷ್ಟು ಸನ್ನಿವೇಶಗಳಲ್ಲಿ ಹ್ಯಾಂಡಿ ಕ್ಯಾಮೆರಾ ಬಳಸಲಾಗಿದೆ. ಆದರೆ ಎಲ್ಲಿಯೂ ಕಥೆಯ ನಿರೂಪಣೆಗೆ ಕ್ಯಾಮೆರಾ ತೊಡಕಾಗದೇ ಮತ್ತಷ್ಟು ಪರಿಣಾಮಕಾರಿಯಾಗಿ ಹೇಳುವಲ್ಲಿ ಸಹಕಾರಿಯಾಗಿದೆ. ಸಿನೆಮಾಕ್ಕೆ ನೀಡಿರುವ ಹಿನ್ನೆಲೆ ಸಂಗೀತ ಕಥೆಯ ಸನ್ನಿವೇಶ, ಬೆಳವಣಿಗೆಯಲ್ಲಿ ಮಿಳಿತವಾಗಿದೆ. ಧನಶೇಖರ್ ನಿರ್ವಹಿಸಿರುವ ಸಂಕಲನ ಕಾರ್ಯ ಅತ್ಯುತ್ತಮ.

ಚಿತ್ರದಲ್ಲಿ ಇರುವ ಕಲಾವಿದರಾದ ರಾಜೀವ್ ಆನಂದ್, ಶೀಲಾ ರಾಜಕುಮಾರ್, ಮಣಿಮೇಘಲೈ, ವಿದುರ್ ರಾಜರಾಜನ್, ಆನಂದ್ ಸಂಪತ್, ಸೇತು ದರ್ವೀನ್, ಎ.ಎಸ್. ಶಶಿಕುಮಾರ್ ಅಭಿನಯ ಮನಮುಟ್ಟುತ್ತದೆ. ಗ್ರಾಮ ನಿವಾಸಿಗಳನ್ನು ಪಾತ್ರಧಾರಿಗಳಾಗಿರುವಂತೆ ಸಿನಿಮಾ ಸಂಯೋಜಿಸಿರುವುದು ವಿಶೇಷ.

ತಮಿಳುನಾಡಿನಲ್ಲಿ 2018ರ ಅಕ್ಟೋಬರ್ ನಲ್ಲಿ “ಮನುಸಂಗಡ” ತೆರೆಕಂಡಿದೆ. ಸಾಕಷ್ಟು ಅಂತರಾಷ್ಟ್ರೀಯ ಸಿನೆಮೋತ್ಸವಗಳಲ್ಲಿ ಪ್ರದರ್ಶಿತಗೊಂಡು ಪ್ರಶಸ್ತಿಗಳನ್ನೂ ಗಳಿಸಿದೆ. ಭಾರತೀಯ ಸಾಮಾಜಿಕ ಕಥನವನ್ನು ಬಹು ಪರಿಣಾಮಕಾರಿಯಾಗಿ ದೃಶ್ಯರೂಪದಲ್ಲಿ ಕಟ್ಟಿಕೊಟ್ಟಿರುವ ಈ ಸಿನೆಮಾ “ನೆಟ್ ಫ್ಲಿಕ್ಸ್” ನಲ್ಲಿಯೂ ಲಭ್ಯವಿದೆ.

ಪೊಲೀಸರು ಕೊಲ್ಲಪ್ಪನ್ ಮತ್ತವರ ಕುಟುಂಬದವರು, ಸಂಬಂಧಿಕರನ್ನು ಬಂಧಿಸಿ ಕರೆದೊಯ್ಯುತ್ತಾರೆ. ಇವರೆಲ್ಲ ಪೊಲೀಸ್ ವ್ಯಾನಿನಲ್ಲಿದ್ದೂ ಸಾಕಷ್ಟು ಪೊಲೀಸ್ ಸಿಬ್ಬಂದಿ ಇದ್ದರೂ ಹಳ್ಳಿಯ ಮೇಲ್ಞಾತಿಯವರು ದಾಳಿ ಮಾಡುತ್ತಾರೆ. ಕಲ್ಲುಗಳೂ ಸೇರಿದಂತೆ ಸಿಕ್ಕಸಿಕ್ಕ ವಸ್ತುಗಳನ್ನು ವ್ಯಾನಿನತ್ತ ತೂರುತ್ತಾರೆ, ನಿಂದಿಸುತ್ತಾರೆ. ಇವೆಲ್ಲವೂ ಇಲ್ಲಿ ಹಲವೊಮ್ಮೆ ಕಾನೂನು ಸುವ್ಯವಸ್ಥೆ ಎಂಬುದು ಅಣಕ ಎಂಬುದನ್ನು ಹೇಳುತ್ತದೆ.

ಭಾರತೀಯರಲ್ಲಿ ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಸೂಕ್ತವಾಗಿ ನಡೆಸಬೇಕು ಎಂಬ ನಂಬಿಕೆಯಿದೆ. ಇದಕ್ಕೆ ಚ್ಯುತಿ ಬಂದರೆ ಆ ನೋವು ದೀರ್ಘಕಾಲ ಉಳಿಯುತ್ತದೆ. ಮಣ್ಣು ಮಾಡಿದ ನಂತರ ನಡೆಸುವ ವಿಧಿವಿಧಾನಗಳಿರುತ್ತವೆ. ಸತ್ತವರ ಸಮಾಧಿ ಮುಂದೆ ಅವುಗಳನ್ನು ನಡೆಸಲಾಗುತ್ತದೆ. ಆದರೆ ಸತ್ತವರ ಸಮಾಧಿ ಯಾವುದು, ಎಲ್ಲಿದೆ ಎಂದು ತಿಳಿಯದಿದ್ದರೆ ….

ಇದನ್ನೂ ಓದಿ: ಆರ್ಟಿಕಲ್ 15: ಭಾರತದ ಜಾತಿವ್ಯವಸ್ಥೆಯ ಕರಾಳ ಮುಖಗಳ ಸಮರ್ಥ ಅನಾವರಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...