Homeರಾಜಕೀಯಸತ್ತಮೇಲೂ ಬಿಡದೆ ಕಾಡುವ ಜಾತಿಕ್ರೌರ್ಯ: ಮನುಸಂಗಡ ಚಿತ್ರ ತೆರೆದಿಡುವ ಸತ್ಯ

ಸತ್ತಮೇಲೂ ಬಿಡದೆ ಕಾಡುವ ಜಾತಿಕ್ರೌರ್ಯ: ಮನುಸಂಗಡ ಚಿತ್ರ ತೆರೆದಿಡುವ ಸತ್ಯ

- Advertisement -
- Advertisement -

ಜಾತಿಗೊಂದು, ಧರ್ಮಕ್ಕೊಂದು ಸ್ಮಶಾನ ಇಲ್ಲಿವೆ. ಸತ್ತಮೇಲೆಯೂ ಸಾಮಾಜಿಕ ಅಂತರಗಳನ್ನು ಕಾಪಾಡಲಾಗುತ್ತದೆ. ಇವೆಲ್ಲದರ ನಡುವೆ ದಲಿತ (ಎಲ್ಲ ಕೆಳಜಾತಿಗಳು ಸೇರಿ) ಸಮುದಾಯದ ವ್ಯಕ್ತಿಗಳು ಸತ್ತಾಗ ಅವರ ಅಂತ್ಯಕ್ರಿಯೆ ನೆರವೇರಿಸಲು ಹಲವೆಡೆ ಅವರಿಗೆ ಸ್ಮಶಾನಗಳಿಲ್ಲ. ಅವರ ಸಮುದಾಯದವರೇ ಯಾರಾದರೂ ದೊಡ್ಡಮನಸು ಮಾಡಿ ತಮ್ಮ ಜಮೀನುಗಳಲ್ಲಿ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡಬೇಕು. ಇದು ಹೇಗೋ ದೊರಕುತ್ತದೆ ಎಂದುಕೊಂಡರೂ ಊರೊಟ್ಟಿನ ಮಂದಿ ಬಳಸುವ ಸಾಮಾನ್ಯ ರಸ್ತೆಯಲ್ಲಿ ಅಂತ್ಯಕ್ರಿಯೆ ಯಾತ್ರೆಗೆ ಅವಕಾಶ ನಿರಾಕರಿಸುವ ರೂಢಿ ಹಲವೆಡೆ ಇಂದಿಗೂ ಇದೆ.

ತಮಿಳು ಚಲನಚಿತ್ರ “ಮನುಸಂಗಡ” ಇದೇ ವಿಷಯವನ್ನು ನಮ್ಮ ಮುಂದೆ ಇಡುತ್ತದೆ. ಇದು ಕಾಲ್ಪನಿಕ ಚಿತ್ರಕಥೆಯಲ್ಲ. ನಡೆದ, ನಡೆಯುತ್ತಿರುವ ಘಟನಾವಳಿಗಳನ್ನು ಆಧರಿಸಿದ್ದು. ಆದ್ದರಿಂದಲೇ ಇದು ಸಂಪೂರ್ಣವಾಗಿ ಸಿನೆಮ್ಯಾಟಿಕ್ ಭಾಷೆಯಲ್ಲಿ ಇಲ್ಲ. ಇದನ್ನು ಡಾಕ್ಯುಮೆಂಟರಿ ಮಾದರಿಯಲ್ಲಿಯೂ ಹೇಳಲಾಗಿದೆ. ಆದ್ದರಿಂದಲೇ ಇದರ ಕ್ಯಾಮೆರಾ ಭಾಷೆಯೂ ವಿಭಿನ್ನವಾಗಿದೆ ಮತ್ತು ಅಷ್ಟೇ ಸಶಕ್ತವಾಗಿದೆ. ದಲಿತರ ನೋವನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡಲಾಗಿದೆ.

ಈ ಕಥನ ತಮಿಳುನಾಡಿನ ಹಳ್ಳಿಯೊಂದರಲ್ಲಿ ನಡೆಯುತ್ತದೆ. ಇದು ಇತರ ಯಾವುದೇ ರಾಜ್ಯದಲ್ಲಿಯೂ ನಡೆಯಬಹುದು. ಸ್ಥಳ ಇಲ್ಲಿ ನೆಪ ಅಷ್ಟೆ. ಚೆನ್ನೈ ಮಹಾನಗರದ ಕಾರ್ಖಾನೆಯೊಂದರಲ್ಲಿ ದುಡಿಯುವ ಯುವಕ ಕೊಲ್ಲಪ್ಪನ್. ಈತನ ತಂದೆ ಮರಣ ಹೊಂದಿದ ಸುದ್ದಿ ಬರುತ್ತದೆ. ಈತ ಗ್ರಾಮಕ್ಕೆ ಬರುತ್ತಾನೆ. ತಾಯಿಯ, ಸಂಬಂಧಿಕರ ದುಃಖ ಕಟ್ಟೆಯೊಡೆದಿರುತ್ತದೆ. ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆಯುವಾಗಲೇ ಊರೊಟ್ಟಿನ ರಸ್ತೆ (ಸಾಮಾನ್ಯ ರಸ್ತೆ)ಯಲ್ಲಿ ಶವ ತೆಗೆದುಕೊಂಡು ಹೋಗಲು ಮೇಲ್ಜಾತಿಯವರು ಬಿಡುವುದಿಲ್ಲ ಎಂಬ ವಿಷಯ ಚರ್ಚೆಯಾಗುತ್ತದೆ.

ಪೊಲೀಸ್ ಸ್ಟೇಷನ್, ಕಂದಾಯಾಧಿಕಾರಿ ಕಚೇರಿಗಳಿಗೆ ಅಲೆದರೂ ರಕ್ಷಣೆ ಭರವಸೆ ದೊರೆಯುವುದಿಲ್ಲ. ಹೈಕೋರ್ಟಿನಲ್ಲಿ ರಿಟ್ ಪಿಟಿಷನ್ ಹಾಕಲಾಗುತ್ತದೆ. ಆಗ ಸರ್ಕಾರಿ ವಕೀಲರು ಹೇಳುವುದು “ಗ್ರಾಮದ ಸಾಮಾನ್ಯ ರಸ್ತೆಯಲ್ಲಿ ದಲಿತ ಸಮುದಾಯದ ವ್ಯಕ್ತಿಯ ಶವ ತೆಗೆದುಕೊಂಡು ಹೋದರೆ ಕಾನೂನು ಸುವ್ಯವಸ್ಥೆ ಕೈಮೀರಿ ಹೋಗಬಹುದು” ಇದು ನ್ಯಾಯಾಧೀಶರಿಗೆ ಅಚ್ಚರಿ ಉಂಟು ಮಾಡುತ್ತದೆ. ಅರ್ಜಿದಾರ ಕೊಲ್ಲಪ್ಪನ್ ತಂದೆಯ ಅಂತ್ಯಕ್ರಿಯೆ ಯಾತ್ರೆಯನ್ನು ಸಾಮಾನ್ಯ ರಸ್ತೆಯಲ್ಲಿ ತೆಗೆದುಕೊಂಡು ಹೋಗಲು, ಅಂತ್ಯಕ್ರಿಯೆ ಯಾವುದೇ ಸಮಸ್ಯೆಗಳಿಲ್ಲದಂತೆ ನಡೆಯಲು ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಡಳಿತ, ಪೊಲೀಸರಿಗೆ ಸೂಚಿಸುತ್ತದೆ.

ಪ್ರಾಯೋಗಿಕವಾಗಿ ಹೈಕೋರ್ಟ್ ಆದೇಶ ಪ್ರಹಶನದಂತೆ ಆಗಿಬಿಡುತ್ತದೆ. ಕಂದಾಯಾಧಿಕಾರಿ, ಪೊಲೀಸ್ ಉನ್ನತಾಧಿಕಾರಿಗಳು ಮೇಲ್ಜಾತಿಯ ವಕ್ತಾರರಾಗುತ್ತಾರೆ. “ಸಾಮಾನ್ಯ ರಸ್ತೆಯಲ್ಲಿ ಶವ ತೆಗೆದುಕೊಂಡು ಹೋಗುವುದು ಬೇಡ. ಪರ್ಯಾಯ ಮಾರ್ಗದಲ್ಲಿ ತೆಗದುಕೊಂಡು ಹೋಗಿ” ಎನ್ನುತ್ತಾರೆ. ಪರ್ಯಾಯ ಮಾರ್ಗವೇ ಇಲ್ಲ. ಕಲ್ಲು-ಮುಳ್ಳು-ಪೊದೆಗಳ ಹಾದಿ ಅದು. ಒಂದುವೇಳೆ ಪರ್ಯಾಯ ಹಾದಿಯಿದ್ದರೂ ಅದನ್ನು ಬಳಸುವ ಅನಿವಾರ್ಯತೆ ಏಕೆ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಪೊಲೀಸರೇ ಬಲವಂತವಾಗಿ ಅಂತ್ಯಕ್ರಿಯೆ ನಡೆಸಲು ಮುಂದಾಗುತ್ತಾರೆ.

ಈ ಸಂದರ್ಭದಲ್ಲಿ ಕೊಲ್ಲಪ್ಪನ್ ಸಾಮಾನ್ಯ ಹಾದಿ ಶುರುವಾಗುವಲ್ಲಿ ಒಬ್ಬಂಟಿಯಾಗಿ ಬಂದು ನಿಂತು “ನಿಮ್ಮ ಮನೆಗಳ ಸತ್ತ ನಾಯಿ, ದನ ಸಾಮಾನ್ಯ ರಸ್ತೆಯಲ್ಲಿ ಹೋಗಬಹುದು, ನಮಗ್ಯಾಕೆ ಅವಕಾಶ ನಿರಾಕರಿಸುತ್ತೀರಿ. ನಿಮ್ಮಲ್ಲಿ ಸಾವು ಉಂಟಾದಾಗ ಹೂಳಲು, ಸುಡಲು ನಮ್ಮ ನೆರವು ಬೇಕು. ಆದರೆ ನಮ್ಮ ಶವವನ್ನು ಕೊಂಡೊಯ್ಯಲು ಏಕೆ ನಿರಾಕರಿಸುತ್ತೀರಿ ಎಂದು ಕೇಳುವುದು ಪರಿಣಾಮಕಾರಿ. ಮೇಲ್ಜಾತಿಗಳ ಸಮುದಾಯದಲ್ಲಿ ಸಾವು ಉಂಟಾದಾಗ ಈ ಸುದ್ದಿ ಸಾರಲು ದಲಿತರು ಬೇಕು; ಶವದ ಮೆರವಣಿಗೆಯಲ್ಲಿ ಮುಂದೆ ಸಾಗುತ್ತಾ ತಮಟೆ ಬಡಿಯಲು ಬೇಕು. ಆದರೆ ಈ ಸಮುದಾಯದಲ್ಲಿ ಸಾವು ಉಂಟಾದಾಗ ಅದೇರಸ್ತೆಯಲ್ಲಿ ಸಾಗಲು ಬಿಡುವುದಿಲ್ಲ. ಇದೊಂದು ಕ್ರೂರ ವಿಪರ್ಯಾಸ.

ಕೊಲ್ಲಪ್ಪನ್ ಗೆಳತಿ ಮಹಾನಗರದ ನಿವಾಸಿ. ಈಕೆಗೆ ಹಳ್ಳಿಯ ಬಗ್ಗೆ ರೋಮ್ಯಾಂಟಿಕ್ ಕಲ್ಪನೆಗಳಿವೆ. “ಇಲ್ಲಿ ಇಂಥ ಸಾಮಾಜಿಕ ವಾತಾವರಣ ಇರಬಹುದೆಂದು ನನಗೆ ಗೊತ್ತಿರಲಿಲ್ಲ” ಎನ್ನುತ್ತಾಳೆ. ಅದಕ್ಕೆ ಕೊಲ್ಲಪ್ಪನ್ ಕೊಡುವ ಉತ್ತರ “ಇಲ್ಲಿ ಎಲ್ಲ ಜಾತಿ-ಸಮುದಾಯಗಳವರು ಸಾಮರಸ್ಯದಿಂದ ಜೀವನ ನಡೆಸುತ್ತಾರೆ ಎಂದು ಭಾವಿಸಿದ್ದೆಯಾ” ಬಹುತೇಕ ಗ್ರಾಮಗಳಲ್ಲಿ ಎಲ್ಲ ಜಾತಿಗಳ ಸಾಮರಸ್ಯದ ಬದುಕು ಎಂಬುದೊಂದು ಇನ್ನೂ ರಮ್ಯ ಕಲ್ಪನೆ. ಸಾಮರಸ್ಯವೆಂದರೆ ಇಲ್ಲಿ ಮೇಲ್ಜಾತಿಗಳು ನಡೆಸಿಕೊಂಡು ಬಂದಂಥ ಆಚರಣೆಗಳನ್ನು ಪ್ರಶ್ನೆ ಮಾಡದಿರುವುದು, ತುಳಿಯುತ್ತಲೇ ಇರುವುದನ್ನು ಸಹಿಸಿಕೊಳ್ಳುವುದು.

ಆಸ್ಮೃಶ್ಯತೆ ಎನ್ನುವುದು ಹೇಗೆಲ್ಲ ಆಚರಣೆಯಲ್ಲಿದೆ ಎಂಬುದನ್ನು ನೇರವಾಗಿಯೇ ಹೇಳುವ “ಮನುಸಂಗಡ” ಒಂದು ಡಾಕ್ಯುಮೆಂಟರಿ ಹಂತದಲ್ಲಿಯೇ ನಿಂತು ಬಿಡಬಹುದಾಗಿತ್ತು. ಆದರೆ ನಿರ್ದೇಶಕ ಅಂಶನ್ ಕುಮಾರ್ ಪರಿಶ್ರಮ(ಚಿತ್ರಕಥೆಯೂ ಇವರದೇ) ಇದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಸಿನೆಮ್ಯಾಟಿಕ್ ಪರಿಭಾಷೆಗಳನ್ನೂ ಸಮರ್ಥವಾಗಿ ಬಳಸಿ ಕಥೆ ಹೇಳಲಾಗಿದೆ.

ಪಿ.ಎಸ್ ದರನ್ ಮಾಡಿರುವ ಸಿನೆಮಾಟೋಗ್ರಫಿ ವಿಭಿನ್ನವಾಗಿದೆ. ಈ ಥರದ ಕ್ಯಾಮೆರಾ ಪರಿಭಾಷೆ, ಭಾರತೀಯ ಸಿನೆಮಾಗಳ ಸಂದರ್ಭದಲ್ಲಿ ಬಹಳ ಅಪರೂಪ. ಸಾಕಷ್ಟು ಸನ್ನಿವೇಶಗಳಲ್ಲಿ ಹ್ಯಾಂಡಿ ಕ್ಯಾಮೆರಾ ಬಳಸಲಾಗಿದೆ. ಆದರೆ ಎಲ್ಲಿಯೂ ಕಥೆಯ ನಿರೂಪಣೆಗೆ ಕ್ಯಾಮೆರಾ ತೊಡಕಾಗದೇ ಮತ್ತಷ್ಟು ಪರಿಣಾಮಕಾರಿಯಾಗಿ ಹೇಳುವಲ್ಲಿ ಸಹಕಾರಿಯಾಗಿದೆ. ಸಿನೆಮಾಕ್ಕೆ ನೀಡಿರುವ ಹಿನ್ನೆಲೆ ಸಂಗೀತ ಕಥೆಯ ಸನ್ನಿವೇಶ, ಬೆಳವಣಿಗೆಯಲ್ಲಿ ಮಿಳಿತವಾಗಿದೆ. ಧನಶೇಖರ್ ನಿರ್ವಹಿಸಿರುವ ಸಂಕಲನ ಕಾರ್ಯ ಅತ್ಯುತ್ತಮ.

ಚಿತ್ರದಲ್ಲಿ ಇರುವ ಕಲಾವಿದರಾದ ರಾಜೀವ್ ಆನಂದ್, ಶೀಲಾ ರಾಜಕುಮಾರ್, ಮಣಿಮೇಘಲೈ, ವಿದುರ್ ರಾಜರಾಜನ್, ಆನಂದ್ ಸಂಪತ್, ಸೇತು ದರ್ವೀನ್, ಎ.ಎಸ್. ಶಶಿಕುಮಾರ್ ಅಭಿನಯ ಮನಮುಟ್ಟುತ್ತದೆ. ಗ್ರಾಮ ನಿವಾಸಿಗಳನ್ನು ಪಾತ್ರಧಾರಿಗಳಾಗಿರುವಂತೆ ಸಿನಿಮಾ ಸಂಯೋಜಿಸಿರುವುದು ವಿಶೇಷ.

ತಮಿಳುನಾಡಿನಲ್ಲಿ 2018ರ ಅಕ್ಟೋಬರ್ ನಲ್ಲಿ “ಮನುಸಂಗಡ” ತೆರೆಕಂಡಿದೆ. ಸಾಕಷ್ಟು ಅಂತರಾಷ್ಟ್ರೀಯ ಸಿನೆಮೋತ್ಸವಗಳಲ್ಲಿ ಪ್ರದರ್ಶಿತಗೊಂಡು ಪ್ರಶಸ್ತಿಗಳನ್ನೂ ಗಳಿಸಿದೆ. ಭಾರತೀಯ ಸಾಮಾಜಿಕ ಕಥನವನ್ನು ಬಹು ಪರಿಣಾಮಕಾರಿಯಾಗಿ ದೃಶ್ಯರೂಪದಲ್ಲಿ ಕಟ್ಟಿಕೊಟ್ಟಿರುವ ಈ ಸಿನೆಮಾ “ನೆಟ್ ಫ್ಲಿಕ್ಸ್” ನಲ್ಲಿಯೂ ಲಭ್ಯವಿದೆ.

ಪೊಲೀಸರು ಕೊಲ್ಲಪ್ಪನ್ ಮತ್ತವರ ಕುಟುಂಬದವರು, ಸಂಬಂಧಿಕರನ್ನು ಬಂಧಿಸಿ ಕರೆದೊಯ್ಯುತ್ತಾರೆ. ಇವರೆಲ್ಲ ಪೊಲೀಸ್ ವ್ಯಾನಿನಲ್ಲಿದ್ದೂ ಸಾಕಷ್ಟು ಪೊಲೀಸ್ ಸಿಬ್ಬಂದಿ ಇದ್ದರೂ ಹಳ್ಳಿಯ ಮೇಲ್ಞಾತಿಯವರು ದಾಳಿ ಮಾಡುತ್ತಾರೆ. ಕಲ್ಲುಗಳೂ ಸೇರಿದಂತೆ ಸಿಕ್ಕಸಿಕ್ಕ ವಸ್ತುಗಳನ್ನು ವ್ಯಾನಿನತ್ತ ತೂರುತ್ತಾರೆ, ನಿಂದಿಸುತ್ತಾರೆ. ಇವೆಲ್ಲವೂ ಇಲ್ಲಿ ಹಲವೊಮ್ಮೆ ಕಾನೂನು ಸುವ್ಯವಸ್ಥೆ ಎಂಬುದು ಅಣಕ ಎಂಬುದನ್ನು ಹೇಳುತ್ತದೆ.

ಭಾರತೀಯರಲ್ಲಿ ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಸೂಕ್ತವಾಗಿ ನಡೆಸಬೇಕು ಎಂಬ ನಂಬಿಕೆಯಿದೆ. ಇದಕ್ಕೆ ಚ್ಯುತಿ ಬಂದರೆ ಆ ನೋವು ದೀರ್ಘಕಾಲ ಉಳಿಯುತ್ತದೆ. ಮಣ್ಣು ಮಾಡಿದ ನಂತರ ನಡೆಸುವ ವಿಧಿವಿಧಾನಗಳಿರುತ್ತವೆ. ಸತ್ತವರ ಸಮಾಧಿ ಮುಂದೆ ಅವುಗಳನ್ನು ನಡೆಸಲಾಗುತ್ತದೆ. ಆದರೆ ಸತ್ತವರ ಸಮಾಧಿ ಯಾವುದು, ಎಲ್ಲಿದೆ ಎಂದು ತಿಳಿಯದಿದ್ದರೆ ….

ಇದನ್ನೂ ಓದಿ: ಆರ್ಟಿಕಲ್ 15: ಭಾರತದ ಜಾತಿವ್ಯವಸ್ಥೆಯ ಕರಾಳ ಮುಖಗಳ ಸಮರ್ಥ ಅನಾವರಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...