Homeಕರ್ನಾಟಕಮನುಸ್ಮೃತಿ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ಏಳಿಗೆ ಬಗ್ಗೆ ಅಸಹನೆ ಇದೆ: ಆರಗ ಜಾತಿವಾದಿ...

ಮನುಸ್ಮೃತಿ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ಏಳಿಗೆ ಬಗ್ಗೆ ಅಸಹನೆ ಇದೆ: ಆರಗ ಜಾತಿವಾದಿ ನಿಂದನೆಗೆ ಪ್ರಿಯಾಂಕ್ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದರು. ”ಮನುಸ್ಮೃತಿಯನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಅವರ ಮಾತುಗಳಿಂದ ಹೊರಬರುತ್ತವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದೀಗ ಪ್ರೀಯಾಂಕ್ ಖರ್ಗೆ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

”ಆರಗ ಜ್ಞಾನೇಂದ್ರ  ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು” ಎಂದು ಕಿಡಿಕಾರಿದ್ದಾರೆ.

”ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ” ಎಂದು ತಿರುಗೇಟು ಕೊಟ್ಟಿದ್ದಾರೆ.

”ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ” ಆಕ್ರೋಶ ಹೊರಹಾಕಿದ್ದಾರೆ.

”ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ” ಎಂದು ಪ್ರಿಯಾಂಕ್ ಖರ್ಗೆ ಅವರು ಆರಗ ಜ್ಞಾನೇಂದ್ರ ಅವರಿಗೆ ಛಾಟಿ ಬೀಸಿದ್ದಾರೆ.

ಇದನ್ನೂ ಓದಿ: ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ಆರಗ ಜ್ಞಾನೇಂದ್ರ ಹೇಳಿದ್ದೇನು?

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...