Homeಮುಖಪುಟಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

ಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಲಕ್ನೋ: ಡಿಸೆಂಬರ್ 25 ರಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್‌ಯು)ದ ಕ್ಯಾಂಪಸ್‌ನಲ್ಲಿ ಮನುಸ್ಮೃತಿಯ ಪ್ರತಿಗಳನ್ನು ಸುಡಲು ಪ್ರಯತ್ನಿಸಿದ್ದಕ್ಕಾಗಿ ಭಗತ್ ಸಿಂಗ್ ಛಾತ್ರ ಮೋರ್ಚಾಗೆ ಸಂಬಂಧಿಸಿದ 13  ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

1927ರಲ್ಲಿ ಡಿ.25ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಐತಿಹಾಸಿಕ ಮನುಸ್ಮೃತಿಯನ್ನು ಸುಟ್ಟುಹಾಕಿದ ಸ್ಮರಣಾರ್ಥ ಬಿಎಚ್‌ಯು ಕ್ಯಾಂಪಸ್‌ನಲ್ಲಿರುವ ಕಲಾ ವಿಭಾಗದ  ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಮನುಸ್ಮೃತಿಯ ಪ್ರತಿಗಳನ್ನು ಸುಡಲು ಯೋಜಿಸುತ್ತಿದ್ದಾರೆ ಎಂಬ ವರದಿಗಳು ಹರಡಿತು ಮತ್ತು ವಿಶ್ವವಿದ್ಯಾಲಯದ ಮಂಡಳಿಯ ಸದಸ್ಯರು ಅವರನ್ನು ತಡೆಯಲು ಪ್ರಯತ್ನಿಸಿದ್ದರು.

ಮನುಸ್ಮೃತಿಯು ಒಂದು ಪವಿತ್ರ ಹಿಂದೂ ಗ್ರಂಥವಾಗಿದೆ. ಇದು ಜನರ ಬದುಕಿನ ವಿವಿಧ ಹಂತಗಳಲ್ಲಿ ನಾನಾ ಜಾತಿ ಮತ್ತು ವ್ಯಕ್ತಿಗಳ ಸಾಮಾಜಿಕ ಕಟ್ಟುಪಾಡುಗಳು ಮತ್ತು ಮಾಡಬೇಕಾದ ಕರ್ತವ್ಯಗಳಂತಹ ವಿಷಯಗಳನ್ನು ಒಳಗೊಂಡಿದೆ. ಪ್ರತಿಷ್ಠಿತ ವಿಶ್ವವಿದ್ಯಾಲಯದ ಕೆಲವು ಹಳೆಯ ವಿದ್ಯಾರ್ಥಿಗಳು ಸೇರಿದಂತೆ ವಿವಿಯ ಕೆಲ ಹಾಲಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಈ ಸಂಬಂಧ ಘರ್ಷಣೆ ನಡೆಸಿದರು. ಆರಂಭದಲ್ಲಿ 10 ವಿದ್ಯಾರ್ಥಿಗಳನ್ನು ಬಂಧಿಸಲಾಯಿತು. ನಂತರ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಬಂಧಿತ ಎಲ್ಲ 13 ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ತಂಡವು ಆರೋಪಿ ವಿದ್ಯಾರ್ಥಿಗಳು “ನಗರ ನಕ್ಸಲೀಯರೊಂದಿಗಿನ ಸಂಪರ್ಕ” ಕುರಿತ ತನಿಖೆಗಾಗಿ ವಿಚಾರಣೆಗೆ ನಡೆಸುತ್ತಿದೆ. ಡಿಸೆಂಬರ್ 25ರಂದು ಬಿಎಚ್‌ಯು ಮುಖ್ಯಸ್ಥ ಎಸ್‌ಪಿ ಸಿಂಗ್ ಅವರು ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಶ್ವವಿದ್ಯಾನಿಲಯದ ಅಧಿಕಾರಿಗಳು ವಿದ್ಯಾರ್ಥಿಗಳ ಗುಂಪನ್ನು ಚದುರಿಸಲು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಂತೆ, ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ಮಾಡಿದರು ಮತ್ತು ಆವರಣವನ್ನು ಧ್ವಂಸಗೊಳಿಸಿದರು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರು. ಈ ಗಲಾಟೆಯಲ್ಲಿ ಇಬ್ಬರು ಮಹಿಳಾ ಭದ್ರತಾ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ, ಆಸ್ತಿಪಾಸ್ತಿಗೆ ಹಾನಿಗೊಳಿಸಿದ್ದಾರೆ ಮತ್ತು ಸರ್ಕಾರಿ ಚಟುವಟಿಕೆಗಳಿಗೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದಾಗಿ ಮಹಿಳಾ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಮತ್ತು ಅವರಲ್ಲಿ ಇಬ್ಬರು ಬಿಎಚ್‌ಯು ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಲಂಕಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕಾಂತ್ ಮಿಶ್ರಾ ಹೇಳಿದ್ದಾರೆ.

ಮತ್ತೊಂದೆಡೆ, ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದರು, ಎಳೆದೊಯ್ದರು ಮತ್ತು ದೌರ್ಜನ್ಯ ಎಸಗಿದರು ಎಂದು ಪ್ರತ್ಯಕ್ಷದರ್ಶಿಗಳ ವರದಿಗಳು ತಿಳಿಸಿವೆ.

ಪೊಲೀಸರು ವಿದ್ಯಾರ್ಥಿಗಳ ಮೇಲೆ ಜಾಮೀನು ರಹಿತ ಸೆಕ್ಷನ್ 132 (ಸರ್ಕಾರಿ ನೌಕರನ ಮೇಲೆ ಹಲ್ಲೆ), 121 (2) (ಸರ್ಕಾರಿ ನೌಕರನಿಗೆ ತೀವ್ರ ನೋವುಂಟುಮಾಡುವುದು), 196 (1) (ಬಿ) (ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ತರುವುದು), 299 (ಧರ್ಮವನ್ನು ಅವಮಾನಿಸುವುದು) ಸೇರಿದಂತೆ 110 (ಅಪರಾಧೀಯ ನರಹತ್ಯೆಯ ಪ್ರಯತ್ನ), 191(1) (ಗಲಭೆ), ಮತ್ತು 115(2) (ಉದ್ದೇಶಪೂರ್ವಕವಾಗಿ ನೋವುಂಟುಮಾಡುವುದು) ಮುಂತಾದ ಗಂಭೀರ ಆರೋಪಗಳಡಿ ದೂರು ದಾಖಲಿಸಿದ್ದಾರೆ.

ಹಿಂದುತ್ವವಾದಿ ಫ್ಯಾಸಿಸ್ಟ್ ಶಕ್ತಿಗಳ ಇಚ್ಛೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬಿಎಚ್‌ಯು ಆಡಳಿತ ಮತ್ತು ಪೊಲೀಸ್ ಆಡಳಿತದ ದಮನಕಾರಿ ಧೋರಣೆಯ ಹಿಂದೆ ಬಿಜೆಪಿ-ಆರ್‌ಎಸ್‌ಎಸ್ ಇರುವುದು ಬಹಿರಂಗವಾಗಿದೆ.  ಪ್ರಜಾಸತ್ತಾತ್ಮಕ ದೇಶ ಎಂದು ಹೆಮ್ಮೆಪಡುವ ಭಾರತದಲ್ಲಿ ಮನುಸ್ಮೃತಿಯ ಕುರಿತು ಚರ್ಚಿಸಿದರೆ ಜೈಲು ಸೇರುವಂತೆ ಮಾಡುವ ಸ್ಥಿತಿಯಲ್ಲಿದೆ ಎಂದು ಹಲವಾರು ಸಾಮಾಜಿಕ ಸಂಘಟನೆಗಳು ಸಹಿ ಮಾಡಿದ ಹೇಳಿಕೆ  ತಿಳಿಸಿದೆ.

ಮನುಸ್ಮೃತಿಯು ಮಹಿಳೆಯರು, ಶೂದ್ರರು ಮತ್ತು ದಲಿತರಿಗೆ ಪ್ರಾಣಿಗಿಂತ ಕೆಟ್ಟ ಸ್ಥಾನಮಾನವನ್ನು ನೀಡುವ ಪಠ್ಯವಾಗಿದೆ. ಇದು ದೇಶದ ಜನರ ಪ್ರಜಾಸತ್ತಾತ್ಮಕ ಆಶಯಗಳಿಗೆ ವಿರುದ್ಧವಾಗಿದೆ. ರಾಜ್ಯದ ದಬ್ಬಾಳಿಕೆಯನ್ನು ಹೊರಹಾಕುವ ಮೂಲಕ ಪ್ರಜಾಪ್ರಭುತ್ವ ಸಮಾಜಕ್ಕಾಗಿ ಜನರ ಚಳುವಳಿಯನ್ನು ಮುರಿಯುವ ಹಿಂದುತ್ವ ಶಕ್ತಿಗಳ ಭ್ರಮೆಯು ತುಳಿತಕ್ಕೊಳಗಾದ ಮತ್ತು ಶೋಷಿತ ಜನರ ವಿಶಾಲ ಏಕತೆಯಿಂದ ಛಿದ್ರವಾಗುತ್ತದೆ ಎಂದು ಈ ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಾಸ್ತವವಾಗಿ, ಜೈಲಿಗೆ ಹೋಗುವಾಗ ತಮ್ಮ ಅಚಲ ಮನೋಭಾವದಿಂದ 13 ವಿದ್ಯಾರ್ಥಿಗಳು ‘ಮನುಸ್ಮೃತಿ ಮುರ್ದಾಬಾದ್ ಮತ್ತು ಇಂಕ್ವಿಲಾಬ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಎತ್ತಿದ್ದರಿಂದ ಹಿಂದುತ್ವವಾದಿಗಳ ಭ್ರಮೆ ಈಗಾಗಲೇ ಮುರಿದುಹೋಗಿದೆ ಎಂದು ಅದು ಹೇಳಿದೆ.

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...