Homeಮುಖಪುಟಬಿಜೆಪಿಗೆ ಮನುಸ್ಮೃತಿ ಸಂವಿಧಾನಕ್ಕಿಂತ ಹೆಚ್ಚು: ರಾಹುಲ್ ಗಾಂಧಿ

ಬಿಜೆಪಿಗೆ ಮನುಸ್ಮೃತಿ ಸಂವಿಧಾನಕ್ಕಿಂತ ಹೆಚ್ಚು: ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಯು “ಸಂವಿಧಾನಕ್ಕಿಂತ ಮನುಸ್ಮೃತಿ”ಯನ್ನು ಹೆಚ್ಚು ಎಂದು ಪರಿಗಣಿಸುತ್ತದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದು, “ಸಂವಿಧಾನದಲ್ಲಿ ಭಾರತೀಯತೆ ಇಲ್ಲ” ಎಂದು ಹೇಳಿದ್ದ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಹೊಗಳಿದ್ದಕ್ಕಾಗಿ ಅದನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಮಾತನಾಡುವ ಮೂಲಕ ಆಡಳಿತರೂಢ ಪಕ್ಷವು ಸಾವರ್ಕರ್ ಅವರನ್ನು ಅಪಹಾಸ್ಯ, ನಿಂದನೆ ಮತ್ತು ಮಾನಹಾನಿ ಮಾಡುತ್ತಿದೆ ಎಂದು ರಾಹುಲ್ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮನುಸ್ಮೃತಿ

ಸಂವಿಧಾನದ 75 ವರ್ಷಗಳ ಅಂಗೀಕಾರದ ಚರ್ಚೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವಾದಿಯಾಗಿ ಕಾಣುವ ಸಾವರ್ಕರ್ ಅವರು ಸಂವಿಧಾನದಲ್ಲಿ ಭಾರತೀಯತೆ ಏನೂ ಇಲ್ಲ ಎಂದು ಹೇಳಿದ್ದಾರೆ. ಅವರು ಹಿಂದೂ ಧಾರ್ಮಿಕ ಪಠ್ಯ ಮನುಸ್ಮೃತಿಗೆ ಆದ್ಯತೆ ನೀಡಿದ್ದಾರೆ” ಎಂದು ಹೇಳಿದ್ದಾರೆ. ಬಿಜೆಪಿಗೆ ಮನುಸ್ಮೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮನುಸ್ಮೃತಿಯ ಕುರಿತು ಸಾವರ್ಕರ್ ಅವರ ಮಾತುಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ಮನುಸ್ಮೃತಿಯು ನಮ್ಮ ಹಿಂದೂ ರಾಷ್ಟ್ರಕ್ಕೆ ವೇದಗಳ ನಂತರ ಹೆಚ್ಚು ಪೂಜಿಸಬಹುದಾದ ಗ್ರಂಥವಾಗಿದೆ. ನಮ್ಮ ಪ್ರಾಚೀನ ಕಾಲದ ಸಂಸ್ಕೃತಿ, ಪದ್ಧತಿಗಳು, ಚಿಂತನೆ ಮತ್ತು ಆಚರಣೆಗೆ ಆಧಾರವಾಗಿದೆ. ಈ ಪುಸ್ತಕವು ಶತಮಾನಗಳಿಂದ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಮತ್ತು ದೈವಿಕ ಮೆರವಣಿಗೆಯನ್ನು ಕ್ರೋಡೀಕರಿಸಿದೆ … ”

“ಇವು ಸಾವರ್ಕರ್ ಅವರ ಮಾತುಗಳು…ಸಾವರ್ಕರ್ ಅವರು ತಮ್ಮ ಬರಹಗಳಲ್ಲಿ ನಮ್ಮ ಸಂವಿಧಾನದ ಬಗ್ಗೆ ಯಾವುದೇ ಭಾರತೀಯತೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಭಾರತವನ್ನು ನಡೆಸುತ್ತಿರುವ ಪುಸ್ತಕವನ್ನು ಈ ಪುಸ್ತಕದಿಂದ ರದ್ದುಗೊಳಿಸಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ಹೋರಾಟವಾಗಿದೆ” ರಾಹುಲ್ ಗಾಂಧಿ ಹೇಳಿದ್ದಾರೆ.

“ಭಾರತದಲ್ಲಿ ಇಂದು ಹೋರಾಟ ನಡೆಯುತ್ತಿದೆ. ಈ ಕಡೆ (ವಿಪಕ್ಷಗಳ ಕಡೆ) ಸಂವಿಧಾನದ ಕಲ್ಪನೆಯ ರಕ್ಷಕರಿದ್ದಾರೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಹಿಂದೂ ಮಹಾಕಾವ್ಯ ಮಹಾಭಾರತದ ಒಂದು ನಿದರ್ಶನವನ್ನು ಉಲ್ಲೇಖಿಸಿದ ಅವರು, ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ಗೌರವಧನವಾಗಿ ಕೋರಿದ್ದರು, ಅದರಂತೆ ಬಿಜೆಪಿ ಸರಕಾರ ಜನರ ಹೆಬ್ಬೆರಳು ಕತ್ತರಿಸುತ್ತಿದೆ ಎಂದು ಹೇಳಿದರು.

”ಧಾರಾವಿಯನ್ನು ಅದಾನಿಗೆ ಕೊಡುವಾಗ ಅಲ್ಲಿನ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಹೆಬ್ಬೆಟ್ಟು ಕಡಿಯಲಾಗುತ್ತಿದೆ… ದೆಹಲಿಯ ಹೊರಗೆ ರೈತರ ಮೇಲೆ ಅಶ್ರುವಾಯು ಸಿಡಿಸಿದ್ದೀರಿ, ರೈತರು ನ್ಯಾಯಯುತ ಬೆಲೆ ಕೇಳುತ್ತಿದ್ದಾರೆ… ಅವರ ಹೆಬ್ಬೆರಳು ಕತ್ತರಿಸುತ್ತಿದ್ದೀರಿ. ನೀವು ಅಗ್ನಿವೀರ್ ಅನ್ನು ಜಾರಿಗೆ ತಂದು ಯುವಕರ ಹೆಬ್ಬೆರಳನ್ನು ಕತ್ತರಿಸಿದ್ದೀರಿ ಎಂದು ರಾಹುಲ್ ಹೇಳಿದ್ದಾರೆ.

ಇದನ್ನೂ ಓದಿ: ವಯನಾಡ್‌ ದುಂರತಕ್ಕೆ ಸಿಗದ ಪರಿಹಾರ ಪ್ಯಾಕೇಜ್ – ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ – ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...