Homeಕರ್ನಾಟಕಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್‌ ನಾಯಕರಾದ ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ಹಂಸಲೇಖರ ಪರ ಮಾತನಾಡಿದ್ದರು. ಈಗ ಪ್ರಿಯಾಂಕ್‌ ಖರ್ಗೆ ದನಿ ಎತ್ತಿದ್ದಾರೆ.

- Advertisement -
- Advertisement -

‘ದಲಿತರ ಮನೆಗಳಿಗೆ ಬಲಿತರು ಹೋಗುವುದಲ್ಲ. ದಲಿತರನ್ನು ತಮ್ಮ ಮನೆಗಳಿಗೆ ಕರೆಸಿಕೊಳ್ಳಬೇಕು, ದಲಿತರ ಮನೆಗೆ ಭೇಟಿ ನೀಡಿದವರು ದಲಿತರು ಕೊಟ್ಟ ಆಹಾರ ಸೇವಿಸುತ್ತಾರಾ? ಕುರಿ, ಕೋಳಿಯನ್ನು ಸೇವಿಸುತ್ತಾರಾ’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಉಲ್ಲೇಖಿಸಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿಕೆ ನೀಡಿದ್ದರು. ವಿರೋಧಗಳು ವ್ಯಕ್ತವಾದಾಗ ಕ್ಷಮೆಯಾಚಿಸಿದ್ದರು. ಆದರೂ ಅವರ ಮೇಲೆ ದಾಳಿಗಳು ಮುಂದುವರಿದ ಬಳಿಕ ರಾಜಕೀಯ ನಾಯಕರು ಹಂಸಲೇಖರ ಪರ ದನಿ ಎತ್ತುತ್ತಿದ್ದು, ಈಗ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆಯವರು, “ಹಂಸಲೇಖ ಅವರು ಹೇಳಿದ್ದರಲ್ಲಿ ತಪ್ಪೇನಿಲ್ಲ. ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ” ಎಂದು ತಿಳಿಸಿದ್ದಾರೆ.

ದಲಿತರ ಮನೆಗಳಿಗೆ ಭೇಟಿ ನೀಡುವ ರಾಜಕೀಯ ನಾಯಕರನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ‌ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ?” ಇದು ಹೇಗೆ ಅಸಾಂವಿಧಾನಿಕ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ನವೆಂಬರ್‌ 23ರಂದು ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, “ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಹೇಳಿಕೆ ನೀಡಿದ್ದರು.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದಿದ್ದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದ್ದರು.

ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದು ತಿಳಿಸಿದ್ದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದ್ದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದಿದ್ದರು.


ಇದನ್ನೂ ಓದಿರಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...