Homeಕರ್ನಾಟಕಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್‌ ನಾಯಕರಾದ ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ಹಂಸಲೇಖರ ಪರ ಮಾತನಾಡಿದ್ದರು. ಈಗ ಪ್ರಿಯಾಂಕ್‌ ಖರ್ಗೆ ದನಿ ಎತ್ತಿದ್ದಾರೆ.

- Advertisement -
- Advertisement -

‘ದಲಿತರ ಮನೆಗಳಿಗೆ ಬಲಿತರು ಹೋಗುವುದಲ್ಲ. ದಲಿತರನ್ನು ತಮ್ಮ ಮನೆಗಳಿಗೆ ಕರೆಸಿಕೊಳ್ಳಬೇಕು, ದಲಿತರ ಮನೆಗೆ ಭೇಟಿ ನೀಡಿದವರು ದಲಿತರು ಕೊಟ್ಟ ಆಹಾರ ಸೇವಿಸುತ್ತಾರಾ? ಕುರಿ, ಕೋಳಿಯನ್ನು ಸೇವಿಸುತ್ತಾರಾ’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಉಲ್ಲೇಖಿಸಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿಕೆ ನೀಡಿದ್ದರು. ವಿರೋಧಗಳು ವ್ಯಕ್ತವಾದಾಗ ಕ್ಷಮೆಯಾಚಿಸಿದ್ದರು. ಆದರೂ ಅವರ ಮೇಲೆ ದಾಳಿಗಳು ಮುಂದುವರಿದ ಬಳಿಕ ರಾಜಕೀಯ ನಾಯಕರು ಹಂಸಲೇಖರ ಪರ ದನಿ ಎತ್ತುತ್ತಿದ್ದು, ಈಗ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆಯವರು, “ಹಂಸಲೇಖ ಅವರು ಹೇಳಿದ್ದರಲ್ಲಿ ತಪ್ಪೇನಿಲ್ಲ. ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ” ಎಂದು ತಿಳಿಸಿದ್ದಾರೆ.

ದಲಿತರ ಮನೆಗಳಿಗೆ ಭೇಟಿ ನೀಡುವ ರಾಜಕೀಯ ನಾಯಕರನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ‌ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ?” ಇದು ಹೇಗೆ ಅಸಾಂವಿಧಾನಿಕ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ನವೆಂಬರ್‌ 23ರಂದು ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, “ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಹೇಳಿಕೆ ನೀಡಿದ್ದರು.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದಿದ್ದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದ್ದರು.

ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದು ತಿಳಿಸಿದ್ದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದ್ದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದಿದ್ದರು.


ಇದನ್ನೂ ಓದಿರಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...