Homeಕರ್ನಾಟಕಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಮನುವಾದಿಗಳಿಂದ ವಿರೋಧ ಇದ್ದೇ ಇರುತ್ತದೆ: ಹಂಸಲೇಖರ ಪರ ನಿಂತ ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್‌ ನಾಯಕರಾದ ಡಾ.ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ಹಂಸಲೇಖರ ಪರ ಮಾತನಾಡಿದ್ದರು. ಈಗ ಪ್ರಿಯಾಂಕ್‌ ಖರ್ಗೆ ದನಿ ಎತ್ತಿದ್ದಾರೆ.

- Advertisement -
- Advertisement -

‘ದಲಿತರ ಮನೆಗಳಿಗೆ ಬಲಿತರು ಹೋಗುವುದಲ್ಲ. ದಲಿತರನ್ನು ತಮ್ಮ ಮನೆಗಳಿಗೆ ಕರೆಸಿಕೊಳ್ಳಬೇಕು, ದಲಿತರ ಮನೆಗೆ ಭೇಟಿ ನೀಡಿದವರು ದಲಿತರು ಕೊಟ್ಟ ಆಹಾರ ಸೇವಿಸುತ್ತಾರಾ? ಕುರಿ, ಕೋಳಿಯನ್ನು ಸೇವಿಸುತ್ತಾರಾ’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಉಲ್ಲೇಖಿಸಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿಕೆ ನೀಡಿದ್ದರು. ವಿರೋಧಗಳು ವ್ಯಕ್ತವಾದಾಗ ಕ್ಷಮೆಯಾಚಿಸಿದ್ದರು. ಆದರೂ ಅವರ ಮೇಲೆ ದಾಳಿಗಳು ಮುಂದುವರಿದ ಬಳಿಕ ರಾಜಕೀಯ ನಾಯಕರು ಹಂಸಲೇಖರ ಪರ ದನಿ ಎತ್ತುತ್ತಿದ್ದು, ಈಗ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆಯವರು, “ಹಂಸಲೇಖ ಅವರು ಹೇಳಿದ್ದರಲ್ಲಿ ತಪ್ಪೇನಿಲ್ಲ. ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ” ಎಂದು ತಿಳಿಸಿದ್ದಾರೆ.

ದಲಿತರ ಮನೆಗಳಿಗೆ ಭೇಟಿ ನೀಡುವ ರಾಜಕೀಯ ನಾಯಕರನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ‌ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ?” ಇದು ಹೇಗೆ ಅಸಾಂವಿಧಾನಿಕ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಅವರು ನವೆಂಬರ್‌ 23ರಂದು ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, “ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಹೇಳಿಕೆ ನೀಡಿದ್ದರು.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದಿದ್ದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದ್ದರು.

ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದು ತಿಳಿಸಿದ್ದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದ್ದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದಿದ್ದರು.


ಇದನ್ನೂ ಓದಿರಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...