HomeUncategorizedಗಂಗೆಯ ದಡದಿಂದ ಮತ್ತೆ ಎದ್ದು ಬಂದ ಮೃತದೇಹಗಳು: ಶವಗಳ ರಕ್ಷಣೆಗೆ ಅಧಿಕಾರಿಗಳ ಪರದಾಟ

ಗಂಗೆಯ ದಡದಿಂದ ಮತ್ತೆ ಎದ್ದು ಬಂದ ಮೃತದೇಹಗಳು: ಶವಗಳ ರಕ್ಷಣೆಗೆ ಅಧಿಕಾರಿಗಳ ಪರದಾಟ

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದ ಗಂಗಾತಟದಲ್ಲಿ ಕೋವಿಡ್ ಸೋಂಕಿತರ ಮೃತದೇಹಗಳನ್ನು ಹೂಳುತ್ತಿರುವ ದೃಶ್ಯಗಳು ದೇಶವನ್ನೇ ಬೆಚ್ಚಿ ಬೀಳಿಸಿದ್ದವು. ನೂರಾರು ಮೃತದೇಹಗಳು ಗಂಗಾ ನದಿಯಲ್ಲಿ ತೇಲಿ ಬರುತ್ತಿರುವ ದೃಶ್ಯಗಳು ದೇಶಾದ್ಯಂತ ಆಕ್ರೋಶವನ್ನು ಹುಟ್ಟು ಹಾಕಿತ್ತು. ಮೇ 14 ರಂದು ಹಿಂದಿ ಭಾಷೆಯ ಪ್ರಸಿದ್ಧ ಪತ್ರಿಕೆ ದೈನಿಕ್ ಭಾಸ್ಕರ್ ಈ ಕುರಿತು ಸುವಿಸ್ತಾರವಾದ ತನಿಖಾ ವರದಿಯೊಂದನ್ನು ಪ್ರಕಟಿಸಿ ಉತ್ತರ ಪ್ರದೇಶ ಸರ್ಕಾರ ಕೊರೋನಾ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ಬಹಿರಂಗಗೊಳಿಸಿತ್ತು. ಈಗ ಉತ್ತರ ಪ್ರದೇಶದಲ್ಲಿ ಮತ್ತೆ ಅಂತಹದ್ದೇ ಘಟನಗೆಳು ವರದಿಯಾಗುತ್ತಿವೆ.

ಮುಂಗಾರು ಮಳೆಯ ಕಾರಣದಿಂದ ಗಂಗಾ ನದಿಯಲ್ಲಿ ನೀರಿನ ಮಟ್ಟ ದಿನೇ ದಿನೇ ಏರುತ್ತಿದ್ದು ಮತ್ತಷ್ಟು ಶವಗಳು ತೇಲಿ ಬರತೊಡಗಿವೆ. ನದಿ ತಟದ ಮರಳಿನಲ್ಲಿ ಹೂತಿದ್ದ ಮೃತದೇಹಗಳೆಲ್ಲ ಒಂದೊಂದಾಗಿ ಮೇಲೆದ್ದು ಬರತೊಡಗಿದ್ದು ಕಳೆದ 15 ದಿನಗಳಲ್ಲಿ 70 ಶವಗಳು ತೇಲಿಬಂದಿವೆ ಎಂದು ಅನೇಕ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಕಳೆದ 24 ಗಂಟೆಯಲ್ಲಿ 40 ಶವಗಳನ್ನು ನದಿ ದಡದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ನಾವು ನದಿ ದಡಕ್ಕೆ ತೇಲಿ ಬರುತ್ತಿರುವ ಮೃತದೇಹಗಳನ್ನು ಗುರುತಿಸಿ ಗೌರವಯುತವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದೇವೆ. ಎಲ್ಲಾ ಮೃತದೇಹಗಳು ಕೋವಿಡ್‌ಗೆ ಸಂಬಂಧಿಸಿದವಲ್ಲ. ಅನೇಕ ಸಮುದಾಯಗಳು ಬಹಳ ಹಿಂದಿನಿಂದಲೂ ನದಿ ತಟದಲ್ಲಿ ಮೃತದೇಹಗಳ ಅಂತ್ಯಕ್ರಿಯೆ ಮಾಡುತ್ತಿವೆ ಎಂದು ಪ್ರಯಾಗ್‌ ರಾಜ್ ನಗರ ಪಾಲಿಕೆಯ ಝೋನಲ್ ಕಮಿಷನರ್ ನೀರಜ್‌ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಧಿಕಾರಿಗಳು ನದಿಯಲ್ಲಿ ತೇಲುತ್ತಿರುವ ಮೃತದೇಹಗಳನ್ನು ರಕ್ಷಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಕ್ಸಿಜನ್ ಪೈಪ್‌ಗಳನ್ನು ಅಳವಡಿಸಿಕೊಂಡ ಸ್ಥಿತಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ : ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....