HomeUncategorizedಗಂಗೆಯ ದಡದಿಂದ ಮತ್ತೆ ಎದ್ದು ಬಂದ ಮೃತದೇಹಗಳು: ಶವಗಳ ರಕ್ಷಣೆಗೆ ಅಧಿಕಾರಿಗಳ ಪರದಾಟ

ಗಂಗೆಯ ದಡದಿಂದ ಮತ್ತೆ ಎದ್ದು ಬಂದ ಮೃತದೇಹಗಳು: ಶವಗಳ ರಕ್ಷಣೆಗೆ ಅಧಿಕಾರಿಗಳ ಪರದಾಟ

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದ ಗಂಗಾತಟದಲ್ಲಿ ಕೋವಿಡ್ ಸೋಂಕಿತರ ಮೃತದೇಹಗಳನ್ನು ಹೂಳುತ್ತಿರುವ ದೃಶ್ಯಗಳು ದೇಶವನ್ನೇ ಬೆಚ್ಚಿ ಬೀಳಿಸಿದ್ದವು. ನೂರಾರು ಮೃತದೇಹಗಳು ಗಂಗಾ ನದಿಯಲ್ಲಿ ತೇಲಿ ಬರುತ್ತಿರುವ ದೃಶ್ಯಗಳು ದೇಶಾದ್ಯಂತ ಆಕ್ರೋಶವನ್ನು ಹುಟ್ಟು ಹಾಕಿತ್ತು. ಮೇ 14 ರಂದು ಹಿಂದಿ ಭಾಷೆಯ ಪ್ರಸಿದ್ಧ ಪತ್ರಿಕೆ ದೈನಿಕ್ ಭಾಸ್ಕರ್ ಈ ಕುರಿತು ಸುವಿಸ್ತಾರವಾದ ತನಿಖಾ ವರದಿಯೊಂದನ್ನು ಪ್ರಕಟಿಸಿ ಉತ್ತರ ಪ್ರದೇಶ ಸರ್ಕಾರ ಕೊರೋನಾ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ಬಹಿರಂಗಗೊಳಿಸಿತ್ತು. ಈಗ ಉತ್ತರ ಪ್ರದೇಶದಲ್ಲಿ ಮತ್ತೆ ಅಂತಹದ್ದೇ ಘಟನಗೆಳು ವರದಿಯಾಗುತ್ತಿವೆ.

ಮುಂಗಾರು ಮಳೆಯ ಕಾರಣದಿಂದ ಗಂಗಾ ನದಿಯಲ್ಲಿ ನೀರಿನ ಮಟ್ಟ ದಿನೇ ದಿನೇ ಏರುತ್ತಿದ್ದು ಮತ್ತಷ್ಟು ಶವಗಳು ತೇಲಿ ಬರತೊಡಗಿವೆ. ನದಿ ತಟದ ಮರಳಿನಲ್ಲಿ ಹೂತಿದ್ದ ಮೃತದೇಹಗಳೆಲ್ಲ ಒಂದೊಂದಾಗಿ ಮೇಲೆದ್ದು ಬರತೊಡಗಿದ್ದು ಕಳೆದ 15 ದಿನಗಳಲ್ಲಿ 70 ಶವಗಳು ತೇಲಿಬಂದಿವೆ ಎಂದು ಅನೇಕ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಕಳೆದ 24 ಗಂಟೆಯಲ್ಲಿ 40 ಶವಗಳನ್ನು ನದಿ ದಡದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ನಾವು ನದಿ ದಡಕ್ಕೆ ತೇಲಿ ಬರುತ್ತಿರುವ ಮೃತದೇಹಗಳನ್ನು ಗುರುತಿಸಿ ಗೌರವಯುತವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದೇವೆ. ಎಲ್ಲಾ ಮೃತದೇಹಗಳು ಕೋವಿಡ್‌ಗೆ ಸಂಬಂಧಿಸಿದವಲ್ಲ. ಅನೇಕ ಸಮುದಾಯಗಳು ಬಹಳ ಹಿಂದಿನಿಂದಲೂ ನದಿ ತಟದಲ್ಲಿ ಮೃತದೇಹಗಳ ಅಂತ್ಯಕ್ರಿಯೆ ಮಾಡುತ್ತಿವೆ ಎಂದು ಪ್ರಯಾಗ್‌ ರಾಜ್ ನಗರ ಪಾಲಿಕೆಯ ಝೋನಲ್ ಕಮಿಷನರ್ ನೀರಜ್‌ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಧಿಕಾರಿಗಳು ನದಿಯಲ್ಲಿ ತೇಲುತ್ತಿರುವ ಮೃತದೇಹಗಳನ್ನು ರಕ್ಷಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಕ್ಸಿಜನ್ ಪೈಪ್‌ಗಳನ್ನು ಅಳವಡಿಸಿಕೊಂಡ ಸ್ಥಿತಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ : ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...