Homeಅಂತರಾಷ್ಟ್ರೀಯಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

ಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

- Advertisement -
- Advertisement -

ಅಫ್ಘಾನಿಸ್ತಾನದ ಅಸದಾಬಾದ್ ನಗರದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರು ರಾಷ್ಟ್ರಧ್ವಜವನ್ನು ಹಾರಿಸಿದ್ದು ಗುಂಡಿನ ದಾಳಿಗೆ ಕಾರಣ ಎನ್ನಲಾಗಿದೆ. ಬುಧವಾರ ಇದೇ ರೀತಿಯ ಪ್ರತಿಭಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

ಮಾಧ್ಯಮಗಳ ಪ್ರಕಾರ ಬಿಳಿ ತಾಲಿಬಾನ್ ಧ್ವಜಗಳನ್ನು ಕಿತ್ತುಹಾಕಿದ ಪ್ರತಿಭಟನಾಕಾರರು ಅಫ್ಘಾನ್ ಧ್ವಜವನ್ನು ಹಾರಿಸುತ್ತಿದ್ದರು. ಇದರಿಂದ ಕೋಪಗೊಂಡ ತಾಲಿಬಾನಿಗಳು ಪ್ರತಿಭಟನಾಕಾರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್‌ ಭಾನುವಾರ ವಶಪಡಿಸಿಕೊಂಡ ನಂತರ ಜನ ನಿಧಾನವಾಗಿ ವಿರೋಧಿಸಲು ಆರಂಭಿಸಿದ್ದಾರೆ.

ಅಸಾದಾಬಾದ್‌ನಲ್ಲಿನ ಸಾವುಗಳು ಗುಂಡಿನ ದಾಳಿಯಿಂದ ಉಂಟಾಗಿದೆಯೇ ಅಥವಾ ಗುಂಡಿನಿಂದ ತಪ್ಪಿಸಿಕೊಳ್ಳುವಾಗ ಉಂಟಾದ ಕಾಲ್ತುಳಿತದಿಂದ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪ್ರತ್ಯಕ್ಷದರ್ಶಿ ಕುಹಾರ್ ಪ್ರಾಂತ್ಯದ ಮೊಹಮ್ಮದ್ ಸಲೀಂ ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

“ನೂರಾರು ಜನರು ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಬೀದಿಗೆ ಬಂದರು. ಮೊದಲಿಗೆ ನಾನು ಹೆದರುತ್ತಿದ್ದೆ. ಆದರೆ ನನ್ನ ನೆರೆಹೊರೆಯವರೊಬ್ಬರು ರ್‍ಯಾಲಿಯಲ್ಲಿ ಸೇರಿಕೊಂಡಿದ್ದನ್ನು ನೋಡಿದಾಗ ನಾನು ಮನೆಯಲ್ಲಿರುವ ಧ್ವಜವನ್ನು ಹೊರತೆಗೆದೆ. ತಾಲಿಬಾನ್‌ಗಳ ಕಾಲ್ತುಳಿತ ಮತ್ತು ಗುಂಡಿನ ದಾಳಿಯಲ್ಲಿ ಹಲವಾರು ಜನರು ಸಾವನ್ನಪ್ಪಿದರು ಮತ್ತು ಗಾಯಗೊಂಡಿದ್ದಾರೆ” ಎಂದು ಮೊಹಮ್ಮದ್ ಸಲೀಂ ವಿವರಿಸಿದ್ದಾರೆ.

ಬುಧವಾರ, ಕೂಡ ಜಲಾಲಾಬಾದ್‌ನಲ್ಲಿ ಕಪ್ಪು, ಕೆಂಪು ಮತ್ತು ಹಸಿರು ಬಣ್ಣದ ರಾಷ್ಟ್ರೀಯ ಧ್ವಜವನ್ನು ಹಾರಿಸಿದ್ದ ಪ್ರತಿಭಟನಾಕಾರರ ಮೇಲೆ ತಾಲಿಬಾನಿಗಳು ಗುಂಡು ಹಾರಿಸಿದರು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಾಕ್ಷಿಗಳು ಮತ್ತು ಮಾಧ್ಯಮಗಳು ವರದಿ ಮಾಡಿವೆ.

Three dead after anti-Taliban protests in Jalalabad - World - Aaj.tv

ತಾಲಿಬಾನ್ ವಿರುದ್ಧ ಜನರನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ರಾಷ್ಟ್ರಧ್ವಜವನ್ನು ಹೊತ್ತುಕೊಂಡು ರಾಷ್ಟ್ರದ ಘನತೆಗಾಗಿ ನಿಂತವರಿಗೆ ಸೆಲ್ಯೂಟ್ ಮಾಡಿ” ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದರು.

ಅಫ್ಘಾನಿಸ್ತಾನವು 1919 ರ ಆಗಸ್ಟ್ 19 ರಂದು ಬ್ರಿಟಿಷ್ ನಿಯಂತ್ರಣದಿಂದ ಸ್ವಾತಂತ್ರ್ಯ ಪಡೆಯಿತು. ಹೀಗಾಗಿ ಆಗಸ್ಟ್ 19 ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ.


ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...